ಬ್ರೇಕಿಂಗ್ ನ್ಯೂಸ್
08-02-21 03:09 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಜೈಲ್ ಸೇರಿದ್ದ ರಾಗಿಣಿ ಜಾಮೀನಿನ ಮೇಲೆ ಬಂದಿದ್ದಾರೆ. ಸಿಸಿಬಿ ಕಚೇರಿಗೆ ಹಾಜರಾಗಿದ್ದ ನಟಿ ರಾಗಿಣಿ ಮಾಧ್ಯಮದ ಜೊತೆ ಮಾತನಾಡಿ, 'ತಾಳ್ಮೆಯಿಂದ ಕಾಯಿರಿ ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತಾಡುತ್ತೇನೆ' ಜಾಮೀನಿನ ಷರತ್ತಿನಂತೆ ನಟಿ ರಾಗಿಣಿ ಸಿಸಿಬಿ ಕಚೇರಿಗೆ ಹಾಜರಾಗಿದ್ದರು.
ತನಿಖಾಧಿಕಾರಿ ಪುನೀತ್ ಸಮಕ್ಷಮದಲ್ಲಿ ಸಹಿಮಾಡಿದ್ದಾರೆ. ಕಚೇರಿಯಿಂದ ಹೊರಬಂದು ಮಾಧ್ಯಮದವರ ಜೊತೆ ಮಾತನಾಡಿದ ರಾಗಿಣಿ, ' ನ್ಯಾಯಾಲಯ ಜಾಮೀನು ನೀಡುವಾಗ ವಿಧಿಸಿದ ಷರತ್ತಿನಂತೆ ಬಂದು ಸಹಿ ಮಾಡಿದ್ದೀನಿ ಅಷ್ಟೇ. ಬೇರೆ ಏನು ಇಲ್ಲ. ನಾನು ಬಿಡುಗಡೆಯಾದಾಗ ಪತ್ರಿಕಾಗೋಷ್ಠಿ ಮಾಡುತ್ತೇನೆ ಎಂದು ಹೇಳಿದ್ದೆ, ಈಗಲೂ ನಾನು ಅದನ್ನೇ ಹೇಳುತ್ತೇನೆ ತಾಳ್ಮೆಯಿಂದ ಕಾಯಿರಿ, ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿ ಮಾಡಲು ರಾಗಿಣಿ ಯಾಕೆ ತಡಮಾಡುತ್ತಿದ್ದಾರೆ, ಯಾವೆಲ್ಲ ವಿಚಾರಗಳನ್ನು ಬಹಿರಂಗ ಪಡಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಅಂದಹಾಗೆ ರಾಗಿಣಿ ಸದ್ಯ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ರಾಗಿಣಿ ಮೊದಲ ಬಾರಿಗೆ ಕುಟುಂಬದ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದರು. ಪೂಜೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರೇ ಮಾಡಿದ್ದರು. ಇತ್ತೀಚಿಗೆ ರಾಗಿಣಿ ಅಪ್ಪ-ಅಮ್ಮನ ಜೊತೆಗೆ ಅಕ್ಕಿಪೇಟೆ ದರ್ಗಾಗೆ ಭೇಟಿ ನೀಡಿ ಅನ್ನದಾನ ಮಾಡಿದ್ದರು. ಈ ಸಮಯದಲ್ಲಿ ಮಾತನಾಡಿದ್ದ ರಾಗಿಣಿ ಸಿನಿಮಾಗಳ ಆಫರ್ ಗಳು ಬರುತ್ತಿವೆ. ಕಥೆಗಳನ್ನು ಕೇಳುತ್ತಿದ್ದೇನೆ, ಈ ತಿಂಗಳ ಅಂತ್ಯದಿಂದ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ 143 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
This News Article is a Copy of FILMIBEAT
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm