ಬ್ರೇಕಿಂಗ್ ನ್ಯೂಸ್
08-02-21 03:09 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಜೈಲ್ ಸೇರಿದ್ದ ರಾಗಿಣಿ ಜಾಮೀನಿನ ಮೇಲೆ ಬಂದಿದ್ದಾರೆ. ಸಿಸಿಬಿ ಕಚೇರಿಗೆ ಹಾಜರಾಗಿದ್ದ ನಟಿ ರಾಗಿಣಿ ಮಾಧ್ಯಮದ ಜೊತೆ ಮಾತನಾಡಿ, 'ತಾಳ್ಮೆಯಿಂದ ಕಾಯಿರಿ ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತಾಡುತ್ತೇನೆ' ಜಾಮೀನಿನ ಷರತ್ತಿನಂತೆ ನಟಿ ರಾಗಿಣಿ ಸಿಸಿಬಿ ಕಚೇರಿಗೆ ಹಾಜರಾಗಿದ್ದರು.
ತನಿಖಾಧಿಕಾರಿ ಪುನೀತ್ ಸಮಕ್ಷಮದಲ್ಲಿ ಸಹಿಮಾಡಿದ್ದಾರೆ. ಕಚೇರಿಯಿಂದ ಹೊರಬಂದು ಮಾಧ್ಯಮದವರ ಜೊತೆ ಮಾತನಾಡಿದ ರಾಗಿಣಿ, ' ನ್ಯಾಯಾಲಯ ಜಾಮೀನು ನೀಡುವಾಗ ವಿಧಿಸಿದ ಷರತ್ತಿನಂತೆ ಬಂದು ಸಹಿ ಮಾಡಿದ್ದೀನಿ ಅಷ್ಟೇ. ಬೇರೆ ಏನು ಇಲ್ಲ. ನಾನು ಬಿಡುಗಡೆಯಾದಾಗ ಪತ್ರಿಕಾಗೋಷ್ಠಿ ಮಾಡುತ್ತೇನೆ ಎಂದು ಹೇಳಿದ್ದೆ, ಈಗಲೂ ನಾನು ಅದನ್ನೇ ಹೇಳುತ್ತೇನೆ ತಾಳ್ಮೆಯಿಂದ ಕಾಯಿರಿ, ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿ ಮಾಡಲು ರಾಗಿಣಿ ಯಾಕೆ ತಡಮಾಡುತ್ತಿದ್ದಾರೆ, ಯಾವೆಲ್ಲ ವಿಚಾರಗಳನ್ನು ಬಹಿರಂಗ ಪಡಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಅಂದಹಾಗೆ ರಾಗಿಣಿ ಸದ್ಯ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ರಾಗಿಣಿ ಮೊದಲ ಬಾರಿಗೆ ಕುಟುಂಬದ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದರು. ಪೂಜೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರೇ ಮಾಡಿದ್ದರು. ಇತ್ತೀಚಿಗೆ ರಾಗಿಣಿ ಅಪ್ಪ-ಅಮ್ಮನ ಜೊತೆಗೆ ಅಕ್ಕಿಪೇಟೆ ದರ್ಗಾಗೆ ಭೇಟಿ ನೀಡಿ ಅನ್ನದಾನ ಮಾಡಿದ್ದರು. ಈ ಸಮಯದಲ್ಲಿ ಮಾತನಾಡಿದ್ದ ರಾಗಿಣಿ ಸಿನಿಮಾಗಳ ಆಫರ್ ಗಳು ಬರುತ್ತಿವೆ. ಕಥೆಗಳನ್ನು ಕೇಳುತ್ತಿದ್ದೇನೆ, ಈ ತಿಂಗಳ ಅಂತ್ಯದಿಂದ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ 143 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
This News Article is a Copy of FILMIBEAT
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm