ಬ್ರೇಕಿಂಗ್ ನ್ಯೂಸ್
08-02-21 03:09 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಜೈಲ್ ಸೇರಿದ್ದ ರಾಗಿಣಿ ಜಾಮೀನಿನ ಮೇಲೆ ಬಂದಿದ್ದಾರೆ. ಸಿಸಿಬಿ ಕಚೇರಿಗೆ ಹಾಜರಾಗಿದ್ದ ನಟಿ ರಾಗಿಣಿ ಮಾಧ್ಯಮದ ಜೊತೆ ಮಾತನಾಡಿ, 'ತಾಳ್ಮೆಯಿಂದ ಕಾಯಿರಿ ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತಾಡುತ್ತೇನೆ' ಜಾಮೀನಿನ ಷರತ್ತಿನಂತೆ ನಟಿ ರಾಗಿಣಿ ಸಿಸಿಬಿ ಕಚೇರಿಗೆ ಹಾಜರಾಗಿದ್ದರು.
ತನಿಖಾಧಿಕಾರಿ ಪುನೀತ್ ಸಮಕ್ಷಮದಲ್ಲಿ ಸಹಿಮಾಡಿದ್ದಾರೆ. ಕಚೇರಿಯಿಂದ ಹೊರಬಂದು ಮಾಧ್ಯಮದವರ ಜೊತೆ ಮಾತನಾಡಿದ ರಾಗಿಣಿ, ' ನ್ಯಾಯಾಲಯ ಜಾಮೀನು ನೀಡುವಾಗ ವಿಧಿಸಿದ ಷರತ್ತಿನಂತೆ ಬಂದು ಸಹಿ ಮಾಡಿದ್ದೀನಿ ಅಷ್ಟೇ. ಬೇರೆ ಏನು ಇಲ್ಲ. ನಾನು ಬಿಡುಗಡೆಯಾದಾಗ ಪತ್ರಿಕಾಗೋಷ್ಠಿ ಮಾಡುತ್ತೇನೆ ಎಂದು ಹೇಳಿದ್ದೆ, ಈಗಲೂ ನಾನು ಅದನ್ನೇ ಹೇಳುತ್ತೇನೆ ತಾಳ್ಮೆಯಿಂದ ಕಾಯಿರಿ, ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿ ಮಾಡಲು ರಾಗಿಣಿ ಯಾಕೆ ತಡಮಾಡುತ್ತಿದ್ದಾರೆ, ಯಾವೆಲ್ಲ ವಿಚಾರಗಳನ್ನು ಬಹಿರಂಗ ಪಡಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಅಂದಹಾಗೆ ರಾಗಿಣಿ ಸದ್ಯ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ರಾಗಿಣಿ ಮೊದಲ ಬಾರಿಗೆ ಕುಟುಂಬದ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದರು. ಪೂಜೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರೇ ಮಾಡಿದ್ದರು. ಇತ್ತೀಚಿಗೆ ರಾಗಿಣಿ ಅಪ್ಪ-ಅಮ್ಮನ ಜೊತೆಗೆ ಅಕ್ಕಿಪೇಟೆ ದರ್ಗಾಗೆ ಭೇಟಿ ನೀಡಿ ಅನ್ನದಾನ ಮಾಡಿದ್ದರು. ಈ ಸಮಯದಲ್ಲಿ ಮಾತನಾಡಿದ್ದ ರಾಗಿಣಿ ಸಿನಿಮಾಗಳ ಆಫರ್ ಗಳು ಬರುತ್ತಿವೆ. ಕಥೆಗಳನ್ನು ಕೇಳುತ್ತಿದ್ದೇನೆ, ಈ ತಿಂಗಳ ಅಂತ್ಯದಿಂದ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ 143 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am