ಬ್ರೇಕಿಂಗ್ ನ್ಯೂಸ್
09-02-21 03:19 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸುಂದರ ಜೋಡಿಗಳಲ್ಲಿ ಒಂದಾಗಿರುವ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದೇ ತಿಂಗಳು ಫೆಬ್ರವರಿ 14ರಂದು ಮಿಲನಾ ಮತ್ತು ಕೃಷ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಲವ್ ಮಾಕ್ಟೇಲ್ ಜೋಡಿಯ ಮದುವೆಗೆ ಇನ್ನೇನು ದಿನಗಣನೆ ಪ್ರಾರಂಭವಾಗಿದೆ.
ಈಗಾಗಲೇ ಮದುವೆ ಶಾಸ್ತ್ರಗಳು ನಡೆಯುತ್ತಿದ್ದು, ಮಿಲನಾ ನಾಗರಾಜ್ ಶಾಸ್ತ್ರಗಳಲ್ಲಿ ಭಾಗಿಯಾಗಿದ್ದಾರೆ. ಮದುವೆಯ ಮೊದಲ ಶಾಸ್ತ್ರದ ವಿಡಿಯೋವನ್ನು ಮಿಲನಾ ಹಂಚಿಕೊಂಡಿದ್ದಾರೆ. ವಿಡಿಯೋ ಜೊತೆಗೆ ಮದುವೆ ಶಾಸ್ತ್ರಗಳು ಪ್ರಾರಂಭ ಎಂದು ಬರೆದುಕೊಂಡಿದ್ದಾರೆ. ಮಿಲನಾ ನಾಗರಾಜ್ ಮತ್ತು ಕೃಷ್ಣ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.

'ನಮ್ಮ ಕುಟುಂಬದಲ್ಲಿ ಯಾರದೇ ಮದುವೆ ಆದರೂ ಈ ವಿಶೇಷ ಪೂಜೆಯ ಮೂಲಕ ಪ್ರಾರಂಭ ಮಾಡುತ್ತೇವೆ' ಎಂದು ಹೇಳಿದ್ದಾರೆ. ಮಿಲನಾ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಶೇಷ ಪೂಜೆಯ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಮಾಡಿಲ್ಲ, ಆದರೆ ಈ ಪೂಜೆ ತನ್ನ ಊರಿನಲ್ಲಿ ನಡೆಯುತ್ತಿರುವ ಹಾಗೆ ಕಾಣುತ್ತಿದೆ.
ವಿಶೇಷವಾದ ಮಂಟಪದಲ್ಲಿ ಮದುವೆ
ಮಿಲನಾ ಮದುವೆಗೆ ಇನ್ನು 5 ದಿನಗಳು ಬಾಕಿ ಇದೆ. ಮದುವೆ ಬಗ್ಗೆ ದೊಡ್ಡ ಕನಸು ಕಂಡಿದ್ದ ಈ ಜೋಡಿ ಅದ್ದೂರಿಯಾಗಿ ಹಸೆಮಣೆ ಏರಬೇಕು ಎಂದು ಪ್ಲಾನ್ ಮಾಡಿದ್ದರು. ಹಾಗಾಗಿಯೇ ಇವರು ಲಾಕ್ ಡೌನ್ ಎಲ್ಲ ಮುಗಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇವರ ಆಸೆಯಂತೆ ಮದುವೆ ಈಜುಕೊಳದ ಮಧ್ಯೆ ವಿಶೇಷ ಮಂಟಪದಲ್ಲಿ ಕೃಷ್ಣ ಮತ್ತು ಮಿಲನಾ ಹೊಸಜೀವನಕ್ಕೆ ಕಾಲಿಡುತ್ತಿದ್ದಾರೆ.

ಮದುವೆ ದಿನ ಲವ್ ಮಾಕ್ ಟೇಲ್ ಹಾಡು ರಿಲೀಸ್
ಕೃಷ್ಣ ಮತ್ತುಮಿಲನಾ ಇಬ್ಬರು ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇಬ್ಬರು ಲವ್ ಮಾಕ್ ಟೇಲ್ ಸಿನಿಮಾ ಬಳಿಕ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸಿದರು. ಇದೀಗ ಈ ಜೋಡಿ ಲವ್ ಮಾಕ್ ಟೇಲ್ -2 ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಸಹ ಮುಗಿಸಿದ್ದಾರೆ. ವಿಶೇಷ ಎಂದರೆ ಮದುವೆ ದಿನವೇ ಅಂದರೆ ಫೆಬ್ರವರಿ 14ರಂದು ಲವ್ ಮಾಕ್ ಟೇಲ್-2 ಸಿನಿಮಾದ ಒಂದು ಹಾಡು ಕೂಡ ರಿಲೀಸ್ ಆಗುತ್ತಿದೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm