ಬ್ರೇಕಿಂಗ್ ನ್ಯೂಸ್
09-02-21 03:19 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸುಂದರ ಜೋಡಿಗಳಲ್ಲಿ ಒಂದಾಗಿರುವ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದೇ ತಿಂಗಳು ಫೆಬ್ರವರಿ 14ರಂದು ಮಿಲನಾ ಮತ್ತು ಕೃಷ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಲವ್ ಮಾಕ್ಟೇಲ್ ಜೋಡಿಯ ಮದುವೆಗೆ ಇನ್ನೇನು ದಿನಗಣನೆ ಪ್ರಾರಂಭವಾಗಿದೆ.
ಈಗಾಗಲೇ ಮದುವೆ ಶಾಸ್ತ್ರಗಳು ನಡೆಯುತ್ತಿದ್ದು, ಮಿಲನಾ ನಾಗರಾಜ್ ಶಾಸ್ತ್ರಗಳಲ್ಲಿ ಭಾಗಿಯಾಗಿದ್ದಾರೆ. ಮದುವೆಯ ಮೊದಲ ಶಾಸ್ತ್ರದ ವಿಡಿಯೋವನ್ನು ಮಿಲನಾ ಹಂಚಿಕೊಂಡಿದ್ದಾರೆ. ವಿಡಿಯೋ ಜೊತೆಗೆ ಮದುವೆ ಶಾಸ್ತ್ರಗಳು ಪ್ರಾರಂಭ ಎಂದು ಬರೆದುಕೊಂಡಿದ್ದಾರೆ. ಮಿಲನಾ ನಾಗರಾಜ್ ಮತ್ತು ಕೃಷ್ಣ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.

'ನಮ್ಮ ಕುಟುಂಬದಲ್ಲಿ ಯಾರದೇ ಮದುವೆ ಆದರೂ ಈ ವಿಶೇಷ ಪೂಜೆಯ ಮೂಲಕ ಪ್ರಾರಂಭ ಮಾಡುತ್ತೇವೆ' ಎಂದು ಹೇಳಿದ್ದಾರೆ. ಮಿಲನಾ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಶೇಷ ಪೂಜೆಯ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಮಾಡಿಲ್ಲ, ಆದರೆ ಈ ಪೂಜೆ ತನ್ನ ಊರಿನಲ್ಲಿ ನಡೆಯುತ್ತಿರುವ ಹಾಗೆ ಕಾಣುತ್ತಿದೆ.
ವಿಶೇಷವಾದ ಮಂಟಪದಲ್ಲಿ ಮದುವೆ
ಮಿಲನಾ ಮದುವೆಗೆ ಇನ್ನು 5 ದಿನಗಳು ಬಾಕಿ ಇದೆ. ಮದುವೆ ಬಗ್ಗೆ ದೊಡ್ಡ ಕನಸು ಕಂಡಿದ್ದ ಈ ಜೋಡಿ ಅದ್ದೂರಿಯಾಗಿ ಹಸೆಮಣೆ ಏರಬೇಕು ಎಂದು ಪ್ಲಾನ್ ಮಾಡಿದ್ದರು. ಹಾಗಾಗಿಯೇ ಇವರು ಲಾಕ್ ಡೌನ್ ಎಲ್ಲ ಮುಗಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇವರ ಆಸೆಯಂತೆ ಮದುವೆ ಈಜುಕೊಳದ ಮಧ್ಯೆ ವಿಶೇಷ ಮಂಟಪದಲ್ಲಿ ಕೃಷ್ಣ ಮತ್ತು ಮಿಲನಾ ಹೊಸಜೀವನಕ್ಕೆ ಕಾಲಿಡುತ್ತಿದ್ದಾರೆ.

ಮದುವೆ ದಿನ ಲವ್ ಮಾಕ್ ಟೇಲ್ ಹಾಡು ರಿಲೀಸ್
ಕೃಷ್ಣ ಮತ್ತುಮಿಲನಾ ಇಬ್ಬರು ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇಬ್ಬರು ಲವ್ ಮಾಕ್ ಟೇಲ್ ಸಿನಿಮಾ ಬಳಿಕ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸಿದರು. ಇದೀಗ ಈ ಜೋಡಿ ಲವ್ ಮಾಕ್ ಟೇಲ್ -2 ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಸಹ ಮುಗಿಸಿದ್ದಾರೆ. ವಿಶೇಷ ಎಂದರೆ ಮದುವೆ ದಿನವೇ ಅಂದರೆ ಫೆಬ್ರವರಿ 14ರಂದು ಲವ್ ಮಾಕ್ ಟೇಲ್-2 ಸಿನಿಮಾದ ಒಂದು ಹಾಡು ಕೂಡ ರಿಲೀಸ್ ಆಗುತ್ತಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm