ಬ್ರೇಕಿಂಗ್ ನ್ಯೂಸ್
10-02-21 04:19 pm Source: FILMIBEAT Bharath Kumar K ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮಾರ್ಚ್ 11 ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ದರ್ಶನ್ ಸಿನಿಮಾ ಬಿಡುಗಡೆಯಾಗುತ್ತಿದೆ. ಕನ್ನಡದಂತೆ ತೆಲುಗಿನಲ್ಲೂ ರಾಬರ್ಟ್ ಚಿತ್ರದ ಟೀಸರ್, ಸಾಂಗ್ ಸದ್ದು ಮಾಡ್ತಿದೆ. ಆಂಧ್ರ-ತೆಲಂಗಾಣದಲ್ಲೂ ರಾಬರ್ಟ್ ಕ್ರೇಜ್ ಹೆಚ್ಚಾಗಿದ್ದು, ಡಿ ಬಾಸ್ ಎಂಟ್ರಿಗೆ ಭರ್ಜರಿ ಸ್ವಾಗತ ಸಿಗುವ ನಿರೀಕ್ಷೆ ಇದೆ.
ಈ ನಡುವೆ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಬಹಳ ವರ್ಷದ ಬಳಿಕ ತಿರುಪತಿಗೆ ಭೇಟಿ ನೀಡಿರುವ ದರ್ಶನ್ಗೆ ತೆಲುಗಿನ ಕೆಲವು ನಿರ್ಮಾಪಕ, ನಿರ್ದೇಶಕರು ಸಾಥ್ ನೀಡಿದ್ದಾರೆ.
ರಾಬರ್ಟ್ ಚಿತ್ರವನ್ನು ತೆಲುಗಿನ ಹಿರಿಯ ನಿರ್ದೇಶಕ ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ ಮಾಡುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಮೂವೀಸ್ ಮೂಲಕ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದರ್ಶನ್ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸುಮಾರು 300 ರಿಂದ 400 ಚಿತ್ರಮಂದಿರಗಳಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆಯಂತೆ.
ಈ ಹಿಂದೆ ರಾಬರ್ಟ್ ಚಿತ್ರವನ್ನು ಮಾರ್ಚ್ 11ಕ್ಕೆ ಬಿಡುಗಡೆ ಮಾಡಲು ಆಂಧ್ರ-ತೆಲಂಗಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಏಕಕಾಲದಲ್ಲಿ ಸಿನಿಮಾ ರಿಲೀಸ್ ಮಾಡಲು ಸಾಧ್ಯವಿಲ್ಲ ಎಂದು ಕೆಲವರು ಅಡ್ಡಿ ಪಡಿಸಿದ್ದರು. ಕೊನೆಗೆ ದರ್ಶನ್ ಅವರೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ ಈ ಕುರಿತು ದೂರು ನೀಡಿದ್ದರು. ನಂತರ ಈ ಸಮಸ್ಯೆ ಬಗೆಹರಿದಿತ್ತು.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm