ಬ್ರೇಕಿಂಗ್ ನ್ಯೂಸ್
11-02-21 12:56 pm Source: FILMIBEAT Manjunatha C ಸಿನಿಮಾ
ದೆಹಲಿ ರೈತ ಹೋರಾಟಕ್ಕೆ ಬಾಲಿವುಡ್ನ ಬಹುಪಾಲು ಸೆಲೆಬ್ರಿಟಿಗಳು ಬೆಂಬಲ ಸೂಚಿಸಿಲ್ಲ, ಕೆಲವರಂತೂ ರೈತ ಹೋರಾಟದ ವಿರುದ್ಧ ಮಾತನಾಡಿದ್ದಾರೆ. ಹಲವರು ಮೌನವಾಗಿದ್ದಾರೆ. ಆದರೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವಣ್ಣ, 'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರು ಕೇಳಿದ್ದು ಬರೆದುಕೊಡ್ತಿದ್ದೆ. ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು' ಎಂದು ಹೇಳಿದ್ದಾರೆ. ''ರೈತರು ರಸ್ತೆಯಲ್ಲಿ ಕುಳಿತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತೆ. ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ ಎನ್ನುತ್ತಾರೆ.
ಆದರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದರಿಂದ ಏನೂ ಸಾಧ್ಯವಾಗಲ್ಲ, ಅದನ್ನು ಸರ್ಕಾರ ಬಗೆಹರಿಸಬೇಕು' ಎಂದಿದ್ದಾರೆ ಶಿವರಾಜ್ ಕುಮಾರ್.
'ಒಂದು ವೇಳೆ ನಾವು ಬೀದಿಗೆ ಇಳಿಯುವುದರಿಂದ ಸಮಸ್ಯೆ ಬಗೆಹರಿಯುವುದಾದರೆ ನಾವು ಸಿದ್ಧ. ಯಾರೇ ರೈತರ ಪರವಾಗಿ ನಿಂತರೆ ಬೆಂಬಲ ಇದೆ' ಎಂದಿದ್ದಾರೆ ಶಿವಣ್ಣ. ''ನಮ್ಮ ಸಮಸ್ಯೆಗಳನ್ನ ನಾವು ಪರಿಹಾರ ಮಾಡಿಕೊಳ್ಳೋಕೆ ಆಗುತ್ತಿಲ್ಲ, ಅಂತದ್ರಲ್ಲಿ ನಮ್ಮ ಕೈಯಲ್ಲಿ ಏನಿದೆ, ರೈತರ ಏನೇ ಮಾಡಿದರೂ ನಮ್ಮ ಬೆಂಬಲ ಕಂಡಿದ ಇದೆ.
ನನ್ನ ಕೈಯಲ್ಲಿ ಆಧಿಕಾರ ಇದ್ದಿದ್ದರೆ, ಎಲ್ಲವನ್ನೂ ಬರೆದು ಕೊಡ್ತಿದ್ದೆ'' ಎಂದಿದ್ದಾರೆ ಶಿವಣ್ಣ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಹೊಸ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಅವರು ಹಾಡಿನ ರೆಕಾರ್ಡ್ ಮಾಡಿದರು. ರವಿಚಂದ್ರನ್ ನಟಿಸುತ್ತಿರುವ 'ಕನ್ನಡಿಗ' ಸಿನಿಮಾದ ಹಾಡಿಗೆ ಶಿವಣ್ಣ ದನಿಯಾದರು. ಆ ಸಮಯದಲ್ಲಿ ಎದುರಾದ ಮಾಧ್ಯಮಗಳೊಟ್ಟಿಗೆ ಶಿವಣ್ಣ ಮೇಲಿನಂತೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ ಅವರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. ರೈತ ಹೋರಾಟದ ಬಗ್ಗೆ ಮಾತನಾಡಲು ಬಾಲಿವುಡ್ ನಟರೇ ಭಯ ಪಡುತ್ತಿರುವ ಹೊತ್ತಿನಲ್ಲಿ ಶಿವಣ್ಣ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿರುವುದಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm