ಬ್ರೇಕಿಂಗ್ ನ್ಯೂಸ್
11-02-21 12:56 pm Source: FILMIBEAT Manjunatha C ಸಿನಿಮಾ
ದೆಹಲಿ ರೈತ ಹೋರಾಟಕ್ಕೆ ಬಾಲಿವುಡ್ನ ಬಹುಪಾಲು ಸೆಲೆಬ್ರಿಟಿಗಳು ಬೆಂಬಲ ಸೂಚಿಸಿಲ್ಲ, ಕೆಲವರಂತೂ ರೈತ ಹೋರಾಟದ ವಿರುದ್ಧ ಮಾತನಾಡಿದ್ದಾರೆ. ಹಲವರು ಮೌನವಾಗಿದ್ದಾರೆ. ಆದರೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವಣ್ಣ, 'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರು ಕೇಳಿದ್ದು ಬರೆದುಕೊಡ್ತಿದ್ದೆ. ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು' ಎಂದು ಹೇಳಿದ್ದಾರೆ. ''ರೈತರು ರಸ್ತೆಯಲ್ಲಿ ಕುಳಿತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತೆ. ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ ಎನ್ನುತ್ತಾರೆ.
ಆದರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದರಿಂದ ಏನೂ ಸಾಧ್ಯವಾಗಲ್ಲ, ಅದನ್ನು ಸರ್ಕಾರ ಬಗೆಹರಿಸಬೇಕು' ಎಂದಿದ್ದಾರೆ ಶಿವರಾಜ್ ಕುಮಾರ್.
'ಒಂದು ವೇಳೆ ನಾವು ಬೀದಿಗೆ ಇಳಿಯುವುದರಿಂದ ಸಮಸ್ಯೆ ಬಗೆಹರಿಯುವುದಾದರೆ ನಾವು ಸಿದ್ಧ. ಯಾರೇ ರೈತರ ಪರವಾಗಿ ನಿಂತರೆ ಬೆಂಬಲ ಇದೆ' ಎಂದಿದ್ದಾರೆ ಶಿವಣ್ಣ. ''ನಮ್ಮ ಸಮಸ್ಯೆಗಳನ್ನ ನಾವು ಪರಿಹಾರ ಮಾಡಿಕೊಳ್ಳೋಕೆ ಆಗುತ್ತಿಲ್ಲ, ಅಂತದ್ರಲ್ಲಿ ನಮ್ಮ ಕೈಯಲ್ಲಿ ಏನಿದೆ, ರೈತರ ಏನೇ ಮಾಡಿದರೂ ನಮ್ಮ ಬೆಂಬಲ ಕಂಡಿದ ಇದೆ.
ನನ್ನ ಕೈಯಲ್ಲಿ ಆಧಿಕಾರ ಇದ್ದಿದ್ದರೆ, ಎಲ್ಲವನ್ನೂ ಬರೆದು ಕೊಡ್ತಿದ್ದೆ'' ಎಂದಿದ್ದಾರೆ ಶಿವಣ್ಣ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಹೊಸ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಅವರು ಹಾಡಿನ ರೆಕಾರ್ಡ್ ಮಾಡಿದರು. ರವಿಚಂದ್ರನ್ ನಟಿಸುತ್ತಿರುವ 'ಕನ್ನಡಿಗ' ಸಿನಿಮಾದ ಹಾಡಿಗೆ ಶಿವಣ್ಣ ದನಿಯಾದರು. ಆ ಸಮಯದಲ್ಲಿ ಎದುರಾದ ಮಾಧ್ಯಮಗಳೊಟ್ಟಿಗೆ ಶಿವಣ್ಣ ಮೇಲಿನಂತೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ ಅವರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. ರೈತ ಹೋರಾಟದ ಬಗ್ಗೆ ಮಾತನಾಡಲು ಬಾಲಿವುಡ್ ನಟರೇ ಭಯ ಪಡುತ್ತಿರುವ ಹೊತ್ತಿನಲ್ಲಿ ಶಿವಣ್ಣ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿರುವುದಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
This News Article is a Copy of FILMIBEAT
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am