ಬ್ರೇಕಿಂಗ್ ನ್ಯೂಸ್
11-02-21 12:56 pm Source: FILMIBEAT Manjunatha C ಸಿನಿಮಾ
ದೆಹಲಿ ರೈತ ಹೋರಾಟಕ್ಕೆ ಬಾಲಿವುಡ್ನ ಬಹುಪಾಲು ಸೆಲೆಬ್ರಿಟಿಗಳು ಬೆಂಬಲ ಸೂಚಿಸಿಲ್ಲ, ಕೆಲವರಂತೂ ರೈತ ಹೋರಾಟದ ವಿರುದ್ಧ ಮಾತನಾಡಿದ್ದಾರೆ. ಹಲವರು ಮೌನವಾಗಿದ್ದಾರೆ. ಆದರೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವಣ್ಣ, 'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರು ಕೇಳಿದ್ದು ಬರೆದುಕೊಡ್ತಿದ್ದೆ. ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು' ಎಂದು ಹೇಳಿದ್ದಾರೆ. ''ರೈತರು ರಸ್ತೆಯಲ್ಲಿ ಕುಳಿತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತೆ. ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ ಎನ್ನುತ್ತಾರೆ.
ಆದರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದರಿಂದ ಏನೂ ಸಾಧ್ಯವಾಗಲ್ಲ, ಅದನ್ನು ಸರ್ಕಾರ ಬಗೆಹರಿಸಬೇಕು' ಎಂದಿದ್ದಾರೆ ಶಿವರಾಜ್ ಕುಮಾರ್.
'ಒಂದು ವೇಳೆ ನಾವು ಬೀದಿಗೆ ಇಳಿಯುವುದರಿಂದ ಸಮಸ್ಯೆ ಬಗೆಹರಿಯುವುದಾದರೆ ನಾವು ಸಿದ್ಧ. ಯಾರೇ ರೈತರ ಪರವಾಗಿ ನಿಂತರೆ ಬೆಂಬಲ ಇದೆ' ಎಂದಿದ್ದಾರೆ ಶಿವಣ್ಣ. ''ನಮ್ಮ ಸಮಸ್ಯೆಗಳನ್ನ ನಾವು ಪರಿಹಾರ ಮಾಡಿಕೊಳ್ಳೋಕೆ ಆಗುತ್ತಿಲ್ಲ, ಅಂತದ್ರಲ್ಲಿ ನಮ್ಮ ಕೈಯಲ್ಲಿ ಏನಿದೆ, ರೈತರ ಏನೇ ಮಾಡಿದರೂ ನಮ್ಮ ಬೆಂಬಲ ಕಂಡಿದ ಇದೆ.
ನನ್ನ ಕೈಯಲ್ಲಿ ಆಧಿಕಾರ ಇದ್ದಿದ್ದರೆ, ಎಲ್ಲವನ್ನೂ ಬರೆದು ಕೊಡ್ತಿದ್ದೆ'' ಎಂದಿದ್ದಾರೆ ಶಿವಣ್ಣ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಹೊಸ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಅವರು ಹಾಡಿನ ರೆಕಾರ್ಡ್ ಮಾಡಿದರು. ರವಿಚಂದ್ರನ್ ನಟಿಸುತ್ತಿರುವ 'ಕನ್ನಡಿಗ' ಸಿನಿಮಾದ ಹಾಡಿಗೆ ಶಿವಣ್ಣ ದನಿಯಾದರು. ಆ ಸಮಯದಲ್ಲಿ ಎದುರಾದ ಮಾಧ್ಯಮಗಳೊಟ್ಟಿಗೆ ಶಿವಣ್ಣ ಮೇಲಿನಂತೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ ಅವರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. ರೈತ ಹೋರಾಟದ ಬಗ್ಗೆ ಮಾತನಾಡಲು ಬಾಲಿವುಡ್ ನಟರೇ ಭಯ ಪಡುತ್ತಿರುವ ಹೊತ್ತಿನಲ್ಲಿ ಶಿವಣ್ಣ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿರುವುದಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm