ಬ್ರೇಕಿಂಗ್ ನ್ಯೂಸ್
11-02-21 12:56 pm Source: FILMIBEAT Manjunatha C ಸಿನಿಮಾ
ದೆಹಲಿ ರೈತ ಹೋರಾಟಕ್ಕೆ ಬಾಲಿವುಡ್ನ ಬಹುಪಾಲು ಸೆಲೆಬ್ರಿಟಿಗಳು ಬೆಂಬಲ ಸೂಚಿಸಿಲ್ಲ, ಕೆಲವರಂತೂ ರೈತ ಹೋರಾಟದ ವಿರುದ್ಧ ಮಾತನಾಡಿದ್ದಾರೆ. ಹಲವರು ಮೌನವಾಗಿದ್ದಾರೆ. ಆದರೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವಣ್ಣ, 'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರು ಕೇಳಿದ್ದು ಬರೆದುಕೊಡ್ತಿದ್ದೆ. ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು' ಎಂದು ಹೇಳಿದ್ದಾರೆ. ''ರೈತರು ರಸ್ತೆಯಲ್ಲಿ ಕುಳಿತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತೆ. ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ ಎನ್ನುತ್ತಾರೆ.
ಆದರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದರಿಂದ ಏನೂ ಸಾಧ್ಯವಾಗಲ್ಲ, ಅದನ್ನು ಸರ್ಕಾರ ಬಗೆಹರಿಸಬೇಕು' ಎಂದಿದ್ದಾರೆ ಶಿವರಾಜ್ ಕುಮಾರ್.
'ಒಂದು ವೇಳೆ ನಾವು ಬೀದಿಗೆ ಇಳಿಯುವುದರಿಂದ ಸಮಸ್ಯೆ ಬಗೆಹರಿಯುವುದಾದರೆ ನಾವು ಸಿದ್ಧ. ಯಾರೇ ರೈತರ ಪರವಾಗಿ ನಿಂತರೆ ಬೆಂಬಲ ಇದೆ' ಎಂದಿದ್ದಾರೆ ಶಿವಣ್ಣ. ''ನಮ್ಮ ಸಮಸ್ಯೆಗಳನ್ನ ನಾವು ಪರಿಹಾರ ಮಾಡಿಕೊಳ್ಳೋಕೆ ಆಗುತ್ತಿಲ್ಲ, ಅಂತದ್ರಲ್ಲಿ ನಮ್ಮ ಕೈಯಲ್ಲಿ ಏನಿದೆ, ರೈತರ ಏನೇ ಮಾಡಿದರೂ ನಮ್ಮ ಬೆಂಬಲ ಕಂಡಿದ ಇದೆ.
ನನ್ನ ಕೈಯಲ್ಲಿ ಆಧಿಕಾರ ಇದ್ದಿದ್ದರೆ, ಎಲ್ಲವನ್ನೂ ಬರೆದು ಕೊಡ್ತಿದ್ದೆ'' ಎಂದಿದ್ದಾರೆ ಶಿವಣ್ಣ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಹೊಸ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಅವರು ಹಾಡಿನ ರೆಕಾರ್ಡ್ ಮಾಡಿದರು. ರವಿಚಂದ್ರನ್ ನಟಿಸುತ್ತಿರುವ 'ಕನ್ನಡಿಗ' ಸಿನಿಮಾದ ಹಾಡಿಗೆ ಶಿವಣ್ಣ ದನಿಯಾದರು. ಆ ಸಮಯದಲ್ಲಿ ಎದುರಾದ ಮಾಧ್ಯಮಗಳೊಟ್ಟಿಗೆ ಶಿವಣ್ಣ ಮೇಲಿನಂತೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ ಅವರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. ರೈತ ಹೋರಾಟದ ಬಗ್ಗೆ ಮಾತನಾಡಲು ಬಾಲಿವುಡ್ ನಟರೇ ಭಯ ಪಡುತ್ತಿರುವ ಹೊತ್ತಿನಲ್ಲಿ ಶಿವಣ್ಣ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿರುವುದಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
This News Article is a Copy of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm