ಬ್ರೇಕಿಂಗ್ ನ್ಯೂಸ್
12-02-21 03:45 pm Source: FILMIBEAT ಸಿನಿಮಾ
ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಉದ್ದೇಶಪೂರ್ವಕವಾಗಿ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ವಿಚಾರಣೆ ನಡೆದಿದ್ದು, ಪ್ರಕರಣದಲ್ಲಿ ಸಲ್ಮಾನ್ ಖಾನ್ ಪರ ಆದೇಶ ಬಂದಿದೆ. ಜೋಧಪುರ ನ್ಯಾಯಾಲಯಕ್ಕೆ 2003 ರಲ್ಲಿ ಅಫಿಡವಿಟ್ ಸಲ್ಲಿಸಿದ್ದ ಸಲ್ಮಾನ್ ಖಾನ್, ತಮ್ಮ ಬಂದೂಕು ಪರವಾನಗಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು. ಇದನ್ನು ರಾಜಸ್ಥಾನ ಸರ್ಕಾರವು ಪ್ರಶ್ನಿಸಿತ್ತು.
ಈ ಸಂಬಂಧ ವಿಚಾರಣೆ ನಡೆಎಸಿದ ನ್ಯಾಯಾಲಯವು ರಾಜಸ್ಥಾನದ ಸರ್ಕಾರದ ಅರ್ಜಿಯನ್ನು ರದ್ದು ಮಾಡಿದೆ. ಬಂದೂಕಿನ ಪರವಾನಗಿ ಕಳೆದು ಹೋಗಿದೆ ಎಂದು ಸಲ್ಮಾನ್ ಖಾನ್ ತಮ್ಮ ಅಫಿಡವಿಟ್ನಲ್ಲಿ ಹೇಳಿದ್ದರು. ಆದರೆ ಬಂದೂಕಿನ ಪರವಾನಗಿ ಕಳೆದು ಹೋಗಿರಲಿಲ್ಲ ಬದಲಿಗೆ ಪರವಾನಗಿ ನವೀಕರಿಸಲು ನೀಡಲಾಗುತ್ತಿತ್ತು. ವಿಚಾರಣೆಯ ಹಾದಿ ತಪ್ಪಿಸಲು ಸಲ್ಮಾನ್ ಖಾನ್ ಹೀಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಆದರೆ ಸಲ್ಮಾನ್ ಖಾನ್ ಪರ ವಾದ ಮಂಡಿಸಿದ ವಕೀಲರು, 'ಸಲ್ಮಾನ್ ಖಾನ್ ಗೆ ಅರಿವಿಲ್ಲದಂತೆ ಅವರ ಪರವಾನಗಿಯನ್ನು ನವೀಕರಿಸಲು ನೀಡಲಾಗಿತ್ತು. ಈ ವಿಷಯ ಸಲ್ಮಾನ್ ಖಾನ್ ಗೆ ಗೊತ್ತಿರಲಿಲ್ಲ' ಎಂದು ವಾದಿಸಿದ್ದರು. ಪ್ರಮಾದವು ಸಂವಹನ ಕೊರತೆಯಿಂದ ಆಗಿರುವುದಷ್ಟೆ, ಉದ್ದೇಶಪೂರ್ವಕ ಅಲ್ಲ ಎಂದು ವಾದಿಸಿದ್ದರು. ಸಲ್ಮಾನ್ ಖಾನ್ ಪರ ವಕೀಲರ ವಾದವನ್ನು ಜೋಧಪುರ ನ್ಯಾಯಾಲಯವು ಒಪ್ಪಿದೆ. ಪ್ರಕರಣದಲ್ಲಿ ತಮ್ಮ ಪರವಾಗಿ ತೀರ್ಪು ಬಂದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ, ಹಿತೈಷಿಗಳಿಗೆ ಧನ್ಯವಾದ ಹೇಳಿದ್ದಾರೆ ನಟ ಸಲ್ಮಾನ್ ಖಾನ್.
'ನನ್ನ ಎಲ್ಲ ಅಭಿಮಾನಿಗಳಿಗೆ ನಿಮ್ಮ ಬೆಂಬಲ ಮತ್ತು ಪ್ರೀತಿಗೆ ಧನ್ಯವಾದಗಳು, ಕುಟುಂಬವನ್ನು ಖುಷಿಯಾಗಿರಿಸಿ, ನೀವು ಖುಷಿಯಾಗಿರಿ, ಲವ್ ಯೂ ಆಲ್' ಎಂದಿದ್ದಾರೆ ಸಲ್ಮಾನ್ ಖಾನ್. ಒಂದು ವೇಳೆ ಸಲ್ಮಾನ್ ಖಾನ್ ವಿರುದ್ಧ ತೀರ್ಪು ಬಂದಿದ್ದಾದಲ್ಲಿ, ಸಲ್ಮಾನ್ ಖಾನ್ ಏಳು ವರ್ಷ ಜೈಲು ವಾಸ ಅನುಭವಿಸಬೇಕಿತ್ತು.
1999 ರಲ್ಲಿ ರಾಜಸ್ಥಾನದಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾದ ಚಿತ್ರೀಕರಣದ ವೇಲೆ ಸಲ್ಮಾನ್ ಖಾನ್ ಎರಡು ಕೃಷ್ಣಮೃಗಗಳನ್ನು ಭೇಟೆ ಆಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಕಾಲ ಜೈಲು ವಾಸವನ್ನೂ ಅನುಭವಿಸಿದರು. ಆದರೆ 2016 ರಲ್ಲಿ ರಾಜಸ್ಥಾನ ಹೈಕೋರ್ಟ್ ಸಲ್ಮಾನ್ ಖಾನ್ ಅನ್ನು ಪ್ರಕರಣದಿಂದ ಖುಲಾಸೆ ಗೊಳಿಸಿತು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm