ಬ್ರೇಕಿಂಗ್ ನ್ಯೂಸ್
13-02-21 02:30 pm Source: FILMIBEAT Bharath Kumar K ಸಿನಿಮಾ
ಮದುವೆ ಆದ್ಮೇಲೆ ಚಿತ್ರರಂಗದಿಂದ ಹಿಂದೆ ಸರಿದಿದ್ದ ನಟಿ ಶಾಲಿನಿ ಅಜಿತ್ ಮತ್ತೆ ಕಂಬ್ಯಾಕ್ ಮಾಡಲಿದ್ದಾರೆ ಎನ್ನುವ ಸುದ್ದಿ ಚರ್ಚೆಯಾಗುತ್ತಿದೆ. ಸುಮಾರು 20 ವರ್ಷದ ನಂತರ ಮತ್ತೆ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ಮಣಿರತ್ನಂ ನಿರ್ದೇಶನ ಮಾಡಲಿರುವ ಮೆಗಾ ಚಿತ್ರದಲ್ಲಿ ಶಾಲಿನಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಶಾಲಿನಿ ನಟಿಸಲಿದ್ದಾರೆ. ಭಾರತೀಯ ಚಿತ್ರರಂಗದ ಹಲವು ಸ್ಟಾರ್ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಪ್ರಾಜೆಕ್ಟ್ಗೆ ಈಗ ಶಾಲಿನಿ ಸರ್ಪ್ರೈಸ್ ಎಂಟ್ರಿಯಾಗಿದ್ದಾರೆ.
ಹೈದರಾಬಾದ್ಗೆ ತೆರಳಲಿದ್ದಾರೆ ಶಾಲಿನಿ?
ಮೊದಲ ಹಂತದಲ್ಲಿ ಚಿತ್ರೀಕರಣ ಮುಗಿಸಿರುವ ಪೊನ್ನಿಯನ್ ಸೆಲ್ವನ್ ಸಿನಿಮಾತಂಡ ಈಗ ಎರಡನೇ ಶೆಡ್ಯೂಲ್ ಆರಂಭಿಸಿದೆ. ಸದ್ಯದಲ್ಲೇ ಅಜಿತ್ ಅವರ ಪತ್ನಿ ಶಾಲಿನಿ ಹೈದರಾಬಾದ್ಗೆ ತೆರಳಿದ್ದು, ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಸದ್ಯಕ್ಕೆ ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಬಹಿರಂಗವಾಗಿಲ್ಲವಾದರೂ ಇದೊಂದು ಪ್ರಮುಖ ಪಾತ್ರ ಎಂದು ಹೇಳಲಾಗಿದೆ.

ಶಾಲಿನಿ ಕೊನೆಯ ಚಿತ್ರ ಯಾವುದು?
2000ನೇ ಇಸವಿಯಲ್ಲಿ ನಟ ಅಜಿತ್ ಅವರ ಕೈಹಿಡಿದ ಶಾಲಿನಿ ವೈವಾಹಿಕ ಜೀವನ ಆರಂಭಿಸಿದರು. 2001ರಲ್ಲಿ ಬಿಡುಗಡೆಯಾಗಿದ್ದ 'ಪರಿಯಾಧ ವಾರಂ ವೇಂಡುಂ' (Piriyadha Varam Vendum) ಚಿತ್ರದಲ್ಲಿ ಕೊನೆದಾಗಿ ಶಾಲಿನಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ತಮಿಳು ನಟ ಪ್ರಶಾಂತ್ ನಾಯಕರಾಗಿದ್ದರು.

ಶಾಲಿನಿ ಸಿನಿಮಾಗಳು ಕುರಿತು
ಶಾಲಿನಿ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ್ದರು. ತೆಲುಗು, ತಮಿಳು, ಕನ್ನಡ ಹಾಗು ಮಲಯಾಳಂ ಭಾಷೆಯಲ್ಲಿ ಬಾಲನಟಿಯಾಗಿ ಸಿನಿ ಜರ್ನಿ ಆರಂಭಿಸಿದ್ದರು. 1986ರಲ್ಲಿ ರಿಲೀಸ್ ಆಗಿದ್ದ ವಿಷ್ಣುವರ್ಧನ್ ಅವರ ಚಿತ್ರ ''ಈ ಜೀವ ನಿನಗಾಗಿ'' ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಪುಟ್ಟ ಬಾಲಕಿ ಇದೇ ಶಾಲಿನಿ. 1997ರಲ್ಲಿ ಮಲಯಾಳಂ ಚಿತ್ರದಲ್ಲಿ ಚೊಚ್ಚಲ ಬಾರಿಗೆ ನಾಯಕಿಯಾಗಿ ನಟಿಸಿದ್ದರು.

ಪೊನ್ನಿಯನ್ ಸೆಲ್ವನ್ ಚಿತ್ರದ ಕುರಿತು
ಮಣಿರತ್ನಂ ಅವರ ಮೆಗಾಪ್ರಾಜೆಕ್ಟ್ನಲ್ಲಿ ನಟಿ ತ್ರಿಷಾ, ಐಶ್ವರ್ಯ ರೈ, ಜಯಂ ರವಿ, ಕಾರ್ತಿ, ಅಮಿತಾಭ್ ಬಚ್ಚನ್, ಚಿಯಾನ್ ವಿಕ್ರಂ, ಶೋಭಿತಾ, ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm