ಬ್ರೇಕಿಂಗ್ ನ್ಯೂಸ್
13-02-21 02:36 pm Source: FILMIBEAT Manjunatha C ಸಿನಿಮಾ
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸುದ್ದಿಗೆ ಗ್ರಾಸವಾಗಿದ್ದ ನಟಿ ಸಂಜನಾ ಗಲ್ರಾನಿ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ದೊರೆತು ಜೈಲಿನಿಂದ ಹೊರ ಬಂದ ಬಳಿಕ ಯಾರ ಕೈಗೂ ಸಿಗದೆ, ಮಾಧ್ಯಮಗಳಿಂದಲೂ ದೂರವಿದ್ದ ನಟಿ ಸಂಜನಾ ಗಲ್ರಾನಿ, ಇದೀಗ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದು, ತಾವು ಅನುಭವಿಸಿದ ಕಷ್ಟದ ದಿನಗಳು, ಭವಿಷ್ಯದ ಯೋಜನೆಗಳ ಜೊತೆ-ಜೊತೆಗೆ ತಮ್ಮ ಮದುವೆ ಹಾಗೂ ಇಸ್ಲಾಂ ಮತಾಂತರವಾದ ಬಗ್ಗೆಯೂ ಮಾತನಾಡಿದ್ದಾರೆ.
'ನನ್ನ ಮುಂದಿನ ಹಾದಿ ಬಹಳ ಕಠಿಣವಾಗಿರಲಿದೆ ಎಂಬ ಅರಿವಿದೆ. ನನಗೆ ಎದುರುಗೊಳ್ಳುವ ಎಲ್ಲ ಸಮಸ್ಯೆಗಳನ್ನು ನಗುವಿನೊಂದಿಗೆ, ಪ್ರೀತಿಯೊಂದಿಗೆ ಎದುರಿಸಲಿದ್ದೇನೆ. ನನಗೆ ನ್ಯಾಯಾಂಗದಲ್ಲಿ ವಿಶ್ವಾಸವಿದೆ. ನಾನು ಗೆಲುವು ಸಾಧಿಸಲಿದ್ದೇನೆ' ಎಂದಿದ್ದಾರೆ ಸಂಜನಾ.
ಹೌದು ನಾನು ಎಂಗೇಜ್ ಆಗಿದ್ದೇನೆ: ಸಂಜನಾ
ಸಂಜನಾ ಜೈಲಿನಲ್ಲಿದ್ದಾಗ ಅವರ ಮದುವೆ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡಿದ್ದವು. ಕೆಲವು ಚಿತ್ರಗಳು ಸಹ ವೈರಲ್ ಆಗಿದ್ದವು ಅದರ ಬಗ್ಗೆ ಮಾತನಾಡಿರುವ ಸಂಜನಾ, 'ಹೌದು, ನಾನು ಎಂಗೇಜ್ ಆಗಿದ್ದೇನೆ. ಲಾಕ್ಡೌನ್ ಸಮಯದಲ್ಲಿ ಸರಳ ಸಮಾರಂಭದಲ್ಲಿ ಎಂಗೇಜ್ಮೆಂಟ್ ಮುಗಿದಿದೆ. ಈ ವಿಷಯವನ್ನು ನನ್ನ ಬಂಧುಗಳಿಗೆ, ಸ್ನೇಹಿತರಿಗೆ ಸಹ ತಿಳಿಸಲಾಗದ ಹಾಗೆ ಆಗಿಬಿಟ್ಟಿತು' ಎಂದು ನೊಂದುಕೊಂಡಿದ್ದಾರೆ.
ಶೀಘ್ರದಲ್ಲಿಯೇ ಮದುವೆ ಆಗಲಿದ್ದೇನೆ: ಸಂಜನಾ
'ನಾವು ಶೀಘ್ರದಲ್ಲಿಯೇ ಮದುವೆ ಆಗಲಿದ್ದೇವೆ. ನಮ್ಮ ಮದುವೆ ಅದ್ಧೂರಿಯಾಗಿ ಆಗುವುದಿಲ್ಲ ಬದಲಿಗೆ ಯಾವುದಾದರೂ ಚಾರಿಟೇಬಲ್ ಸೊಸೈಟಿಯಲ್ಲಿ ನಡೆಯಲಿದೆ. ಅವಶ್ಯಕತೆ ಇರುವ ಜನರಿಗೆ ಸಹಾಯ ಮಾಡಿ ನಾವು ನಮ್ಮ ಮದುವೆಯನ್ನು ಸಂಭ್ರಮಿಸಲಿದ್ದೇವೆ' ಎಂದಿದ್ದಾರೆ. ಸಂಜನಾ ಅವರು ವೈದ್ಯ ಅಜೀಜ್ ಅವರೊಟ್ಟಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇಸ್ಲಾಂ ಗೆ ಮತಾಂತರವಾಗಿದ್ದು ನನ್ನ ವೈಯಕ್ತಿಕ ಆಯ್ಕೆ: ಸಂಜನಾ
'ನಾನು ಅಧ್ಯಾತ್ಮದ ಕಡೆ ಗಮನವಹಿಸುತ್ತಿದ್ದೇನೆ. ಕೆಲವು ತಿಂಗಳುಗಳಿಂದ ನಮಾಜು ಓದುವುದು ಅಭ್ಯಾಸ ಮಾಡಿಕೊಂಡಿದ್ದೇನೆ. ನಾನು ಕರ್ಮ ಮತ್ತು ದೇವರಲ್ಲಿ ನಂಬಿಕೆ ಇಟ್ಟವಳು, ಎಲ್ಲ ಧರ್ಮಗಳನ್ನು ನಾನು ಸಮಾನವಾಗಿ ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದು ನನ್ನ ವೈಯಕ್ತಿಕ ಆಯ್ಕೆ. ನನ್ನ ಈ ನಿರ್ಧಾರವನ್ನು ರಾಜಕೀಯಗೊಳಿಸುವುದು, ವಿಮರ್ಶೆಗೊಳಪಡಿಸುವುದು ನನಗೆ ಇಷ್ಟವಿಲ್ಲ' ಎಂದಿದ್ದಾರೆ ನಟಿ ಸಂಜನಾ.
ಹಲವು ಸಿನಿಮಾ ಆಫರ್ಗಳು ಸಂಜನಾ ಮುಂದಿವೆ
ನನ್ನ ಕೈಯಲ್ಲಿ ಕನ್ನಡದ ಹಾಗೂ ತಮಿಳಿನ ಕೆಲವು ಆಫರ್ಗಳು ಇವೆ. ಅವುಗಳನ್ನು ಮೊದಲು ಮುಗಿಸಬೇಕಿದೆ. ಅದಾದ ನಂತರ ಹಿಂದಿಯ ಒಂದು ವೆಬ್ ಸರಣಿಯಲ್ಲಿ ನಟಿಸಲಿದ್ದೇನೆ. ಇನ್ನೊಂದು ಹೊಸ ಸಿನಿಮಾದ ಆಫರ್ ಬಂದಿದೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಹ ಸಕ್ರಿಯಳಾಗಬೇಕಿದೆ ಎಂದು ಭವಿಷ್ಯದ ಯೋಜನೆಗಳ ಬಗ್ಗೆ ಹೇಳಿದ್ದಾರೆ ಸಂಜನಾ.
This News Article is a Copy of FILMIBEAT
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm