ಬ್ರೇಕಿಂಗ್ ನ್ಯೂಸ್
14-02-21 11:40 am Source: FILMIBEAT Bharath Kumar K ಸಿನಿಮಾ
ತಮಿಳು ನಟಿ, ಮಾಡೆಲ್ ಮೀರಾ ಮಿಥುನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ನನಗೆ ಖಿನ್ನತೆ ಕಾಡ್ತಿದೆ, ಸಾಮಾಜಿಕ ಜಾಲತಾಣದಲ್ಲಿ ನನಗೆ ಕಿರುಕುಳ ನೀಡಲಾಗಿದೆ, ಮಾನಸಿಕವಾಗಿ ನಾನು ಬಹಳ ನೊಂದಿದ್ದೇನೆ ಎಂದು ವಿಡಿಯೋ ಸಹ ಮಾಡಿ ಕಣ್ಣೀರಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಕಾಮೆಂಟ್ಗಳು ನನ್ನನ್ನು ಸಾಯುವಂತೆ ಮಾಡುತ್ತಿದೆ. ಕೆಲವರನ್ನು ನನ್ನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸತ್ತು ಹೋಗು ಎಂದು ಹೀಯಾಳಿಸುತ್ತಿದ್ದಾರೆ. ನನಗೆ ಬದುಕಬೇಕು ಎಂದು ಅನಿಸುತ್ತಿಲ್ಲ ಎಂದು ಮೀರಾ ಮಿಥುನ್ ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನನಗೆ ನೀಡುತ್ತಿರುವ ಕಿರುಕುಳ ನಿಲ್ಲುವುದಿಲ್ಲ. ಈ ಬಗ್ಗೆ ನಾನು ಎಲ್ಲವೂ ದಾಖಲಿಸುತ್ತಿದ್ದೇನೆ, ಮಾನಸಿಕವಾಗಿ ನನ್ನ ಆರೋಗ್ಯ ಹದಗೆಡುತ್ತಿದೆ, ನನ್ನ ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನು ಗಲ್ಲಿಗೇರಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾರೆ.
''ಕಳೆದ ಮೂರು ವರ್ಷದಿಂದ ನಿರಂತರವಾಗಿ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಸಮಾಜದಲ್ಲಿ ನನಗೆ ಯಾವುದೇ ರೀತಿ ಗೌರವ ಕೊಡ್ತಿಲ್ಲ. ಪ್ರತಿಕ್ಷಣವೂ ನನಗೆ ಅನ್ಯಾಯವಾಗ್ತಿದೆ. ನನ್ನ ಈ ನೋವನ್ನು ಕೊನೆಯಾಗಿಸಲು ನಾನು ನಿರ್ಧರಿಸಿದ್ದೇನೆ'' ಎಂದು ಆತಂಕ ಸೃಷ್ಟಿಸಿದ್ದಾರೆ.
ಸುಮಾರು 20 ನಿಮಿಷಗಳ ಕಾಲ ವಿಡಿಯೋದಲ್ಲಿ ಕಣ್ಣೀರಿಟ್ಟಿರುವ ನಟಿ ಮೀರಾ ಮಿಥುನ್ ''ಸಿನಿಮಾ ಇಂಡಸ್ಟ್ರಿಯಲ್ಲಿ ಹಾಗೂ ಫ್ಯಾಶನ್ ಇಂಡಸ್ಟ್ರಿಯಲ್ಲಿ ನನ್ನನ್ನು ತುಳಿಯಲಾಗಿದೆ. ನಾನು ಮಾಡಿದ ಕೆಲಸಗಳನ್ನು ಕಾಪಿ ಮಾಡಿದ್ದಾರೆ, ನನ್ನ ಸಾಧನೆಯನ್ನು ಗುರುತಿಸಿ, ಅದನ್ನು ತಾವೇ ಮಾಡಿರವಂತೆ ಕಾಪಿ ಮಾಡಿದ್ದಾರೆ. ನಾನು ತಮಿಳುನಾಡಿನಲ್ಲಿ ಹುಟ್ಟಿದ್ದರೂ, ಓರ್ವ ತಮಿಳು ಹುಡುಗಿಯಾಗಿದ್ದರೂ ನನಗೆ ತೊಂದರೆ ಕೊಟ್ಟಿದ್ದಾರೆ'' ಎಂದು ಆರೋಪಿಸಿದ್ದಾರೆ.
2017ರಲ್ಲಿ '8 ತೋಟಕ್ಕಲ್' ಚಿತ್ರದಲ್ಲಿ ನಟಿಸುವ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ್ದರು. 'ಜೋಡಿ ನಂಬರ್ 1' ಹಾಗೂ ಬಿಗ್ ಬಾಸ್ 3ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm