ಬ್ರೇಕಿಂಗ್ ನ್ಯೂಸ್
14-02-21 11:40 am Source: FILMIBEAT Bharath Kumar K ಸಿನಿಮಾ
ತಮಿಳು ನಟಿ, ಮಾಡೆಲ್ ಮೀರಾ ಮಿಥುನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ನನಗೆ ಖಿನ್ನತೆ ಕಾಡ್ತಿದೆ, ಸಾಮಾಜಿಕ ಜಾಲತಾಣದಲ್ಲಿ ನನಗೆ ಕಿರುಕುಳ ನೀಡಲಾಗಿದೆ, ಮಾನಸಿಕವಾಗಿ ನಾನು ಬಹಳ ನೊಂದಿದ್ದೇನೆ ಎಂದು ವಿಡಿಯೋ ಸಹ ಮಾಡಿ ಕಣ್ಣೀರಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಕಾಮೆಂಟ್ಗಳು ನನ್ನನ್ನು ಸಾಯುವಂತೆ ಮಾಡುತ್ತಿದೆ. ಕೆಲವರನ್ನು ನನ್ನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸತ್ತು ಹೋಗು ಎಂದು ಹೀಯಾಳಿಸುತ್ತಿದ್ದಾರೆ. ನನಗೆ ಬದುಕಬೇಕು ಎಂದು ಅನಿಸುತ್ತಿಲ್ಲ ಎಂದು ಮೀರಾ ಮಿಥುನ್ ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನನಗೆ ನೀಡುತ್ತಿರುವ ಕಿರುಕುಳ ನಿಲ್ಲುವುದಿಲ್ಲ. ಈ ಬಗ್ಗೆ ನಾನು ಎಲ್ಲವೂ ದಾಖಲಿಸುತ್ತಿದ್ದೇನೆ, ಮಾನಸಿಕವಾಗಿ ನನ್ನ ಆರೋಗ್ಯ ಹದಗೆಡುತ್ತಿದೆ, ನನ್ನ ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನು ಗಲ್ಲಿಗೇರಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾರೆ.
''ಕಳೆದ ಮೂರು ವರ್ಷದಿಂದ ನಿರಂತರವಾಗಿ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಸಮಾಜದಲ್ಲಿ ನನಗೆ ಯಾವುದೇ ರೀತಿ ಗೌರವ ಕೊಡ್ತಿಲ್ಲ. ಪ್ರತಿಕ್ಷಣವೂ ನನಗೆ ಅನ್ಯಾಯವಾಗ್ತಿದೆ. ನನ್ನ ಈ ನೋವನ್ನು ಕೊನೆಯಾಗಿಸಲು ನಾನು ನಿರ್ಧರಿಸಿದ್ದೇನೆ'' ಎಂದು ಆತಂಕ ಸೃಷ್ಟಿಸಿದ್ದಾರೆ.
ಸುಮಾರು 20 ನಿಮಿಷಗಳ ಕಾಲ ವಿಡಿಯೋದಲ್ಲಿ ಕಣ್ಣೀರಿಟ್ಟಿರುವ ನಟಿ ಮೀರಾ ಮಿಥುನ್ ''ಸಿನಿಮಾ ಇಂಡಸ್ಟ್ರಿಯಲ್ಲಿ ಹಾಗೂ ಫ್ಯಾಶನ್ ಇಂಡಸ್ಟ್ರಿಯಲ್ಲಿ ನನ್ನನ್ನು ತುಳಿಯಲಾಗಿದೆ. ನಾನು ಮಾಡಿದ ಕೆಲಸಗಳನ್ನು ಕಾಪಿ ಮಾಡಿದ್ದಾರೆ, ನನ್ನ ಸಾಧನೆಯನ್ನು ಗುರುತಿಸಿ, ಅದನ್ನು ತಾವೇ ಮಾಡಿರವಂತೆ ಕಾಪಿ ಮಾಡಿದ್ದಾರೆ. ನಾನು ತಮಿಳುನಾಡಿನಲ್ಲಿ ಹುಟ್ಟಿದ್ದರೂ, ಓರ್ವ ತಮಿಳು ಹುಡುಗಿಯಾಗಿದ್ದರೂ ನನಗೆ ತೊಂದರೆ ಕೊಟ್ಟಿದ್ದಾರೆ'' ಎಂದು ಆರೋಪಿಸಿದ್ದಾರೆ.
2017ರಲ್ಲಿ '8 ತೋಟಕ್ಕಲ್' ಚಿತ್ರದಲ್ಲಿ ನಟಿಸುವ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ್ದರು. 'ಜೋಡಿ ನಂಬರ್ 1' ಹಾಗೂ ಬಿಗ್ ಬಾಸ್ 3ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm