ಬ್ರೇಕಿಂಗ್ ನ್ಯೂಸ್
14-02-21 10:03 pm Prajwal Cinema Correspondent ಸಿನಿಮಾ
ಬೆಂಗಳೂರು, ಫೆ.14: ಭಾರೀ ಪೋಸ್ಟರ್ ನಿಂದಲೇ ಸದ್ದು ಮಾಡಿದ್ದ ಬಹುಭಾಷಾ ನಟ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ʻರಾಧೆ ಶ್ಯಾಮ್ʼ ತೆರೆಗೆ ಬರಲು ಸಿದ್ಧವಾಗಿದ್ದು ಇದೇ ಜುಲೈ 30ಕ್ಕೆ ರಿಲೀಸ್ ಆಗಲು ದಿನಾಂಕ ಫಿಕ್ಸ್ ಆಗಿದೆ. ಪ್ರೇಮಿಗಳ ನಡುವಿನ ವಿಭಿನ್ನ ಕತೆಯನ್ನು ಹೊಂದಿರುವ ರಾಧೆ ಶ್ಯಾಮ ಚಿತ್ರದ ಟೀಸರ್ ಅನ್ನು ವ್ಯಾಲಂಟೈನ್ಸ್ ಡೇ ದಿನವೇ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ.
ರೋಮ್ ದೇಶದ ಅತ್ಯಂತ ರಮಣೀಯ ಪ್ರದೇಶವೊಂದರ ದೃಶ್ಯಗಳೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ರೊಮೇನಿಯನ್ ರೈಲ್ವೆ ನಿಲ್ದಾಣದಲ್ಲಿ ಜನಸಮೂಹದ ನಡುವೆ ಪ್ರಭಾಸ್, ಪೂಜಾ ಹೆಗ್ಡೆಯನ್ನ ಹುಡುಕುತ್ತಾ ಇಟಾಲಿಯನ್ ಭಾಷೆಯಲ್ಲಿ 'Sei Un Angelo? Devo Morire per incontrarti? ಎಂದು ಕರೆಯುವುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತದೆ. ಆ ನಂತರ ಇಬ್ಬರ ನಡುವಿನ ಪ್ರೀತಿಯ ಸಂಭಾಷಣೆ ಟೀಸರ್ ಹೈಲೈಟ್.
ಸದಾ ಆಕರ್ಷಕವಾಗಿರುವ ರೋಮ್ ಪಟ್ಟಣ ಮತ್ತು ಅಲ್ಲಿನ ಅರಣ್ಯದ ಸುಂದರ ಪ್ರದೇಶಗಳಲ್ಲಿ ʻರಾಧೆ ಶ್ಯಾಮ್ʼ ಚಿತ್ರೀಕರಣಗೊಂಡಿದ್ದು, ಚಿತ್ರರಸಿಕರಿಗೆ ರಸದೌತಣ ನೀಡಲಿದೆ. ಇದರ ಝಲಕ್ ಅನ್ನು ಮೊದಲ ವಿಡಿಯೋದ ಮೂಲಕ ಪ್ರೇಕ್ಷಕರಿಗೆ ತೋರಿಸಿಕೊಟ್ಟಿದೆ. ಈ ದಶಕದ ಅತಿದೊಡ್ಡ ಪ್ರೇಮಕಥೆ ಅಂತಲೇ ಬಿಂಬಿತವಾಗಿರೋ ʻರಾಧೆ ಶ್ಯಾಮ್ʼ ಬಹುಭಾಷಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಡಾ.ಯು.ವಿ. ಕೃಷ್ಣಂ ರಾಜು ಮತ್ತು ಗೋಪಿಕೃಷ್ಣ ಚಲನಚಿತ್ರಗಳನ್ನು ಪ್ರಸ್ತುತ ಪಡಿಸಿದ ರಾಧಾಕೃಷ್ಣ ಕುಮಾರ್ ಈ ಚಿತ್ರಕ್ಕೂ ನಿರ್ದೇಶಕರು. ಯುವಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರದಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರದಲ್ಲಿದ್ದಾರೆ.
ಚಿತ್ರವನ್ನು ವಂಶಿ, ಪ್ರಮೋದ್ ಮತ್ತು ಪ್ರಸೀಡಾ ನಿರ್ಮಿಸುತ್ತಿದ್ದಾರೆ.
This Valentines, let us celebrate love with the biggest announcement of the year! ☺️💕 #RadheShyam to release in a theatre near you on 30th July! 💥💥 #ValentinesWithRS
— Radhe Shyam (@RadheShyamFilm) February 14, 2021
Telugu : https://t.co/Dh687qoC69
Hindi : https://t.co/Xzqp4v4aCJ
Tamil : https://t.co/fl6zREDVFK pic.twitter.com/TFo4ttCEqF
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm