ಬ್ರೇಕಿಂಗ್ ನ್ಯೂಸ್
16-02-21 10:16 am Source: FILMIBEAT Manjunatha C ಸಿನಿಮಾ
ನಟ ದರ್ಶನ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ, ದರ್ಶನ್ ಅವರ ಕೋಟ್ಯಂತರ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಫೆಬ್ರವರಿ 16, 1977 ರಲ್ಲಿ ಜನಿಸಿದ ನಟ ದರ್ಶನ್ ಇಂದು 44 ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೇ ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಕಾಮನ್ ಡಿಪಿಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ಪ್ರತಿವರ್ಷ ದರ್ಶನ್ ಹುಟ್ಟುಹಬ್ಬಕ್ಕೆ ದರ್ಶನ್ ಮನೆಯ ಮುಂದೆ ಅಭಿಮಾನಿಗಳ ಜಾತ್ರೆಯೇ ನಡೆಯುತ್ತಿತ್ತು. ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ದರ್ಶನ್ ಮನೆಯ ಮುಂದೆ ಬಂದು ಜಮಾಯಿಸುತ್ತಿದ್ದರು, ದರ್ಶನ್ ಅವರು ಅಭಿಮಾನಿಗಳು ತಂದ ಕೇಕ್ ಕತ್ತರಿಸಿ ಅವರೊಟ್ಟಿಗೆ ಫೊಟೊ ತೆಗೆಸಿಕೊಂಡು ಸಂಭ್ರಮಿಸುತ್ತಿದ್ದರು. ಆದರೆ ಈ ಬಾರಿ ಹಾಗೆ ಆಗುತ್ತಿಲ್ಲ.

ತಃ ದರ್ಶನ್ ಹೇಳಿರುವಂತೆ ಕೊರೊನಾ ಕಾರಣದಿಂದಾಗಿ ಈ ಬಾರಿ ಹುಟ್ಟುಹಬ್ಬದ ಆಚರಣೆ ಇರುವುದಿಲ್ಲ, ಯಾರೂ ಮನೆಯ ಬಳಿ ಬರಬೇಡಿ. ಎಲ್ಲಿದ್ದೀರೋ ಅಲ್ಲಿಂದಲೇ ಶುಭ ಹಾರೈಸಿ, ನಿಮ್ಮ ಕುಟುಂಬದವರೊಟ್ಟಿಗೆ ಸಂಭ್ರಮಿಸಿ ಎಂದು ದರ್ಶನ್ ಈ ಹಿಂದೆ ಫೇಸ್ಬುಕ್ ಲೈವ್ನಲ್ಲಿ ಮನವಿ ಮಾಡಿದ್ದರು. ದರ್ಶನ್ ಅವರ ಹುಟ್ಟುಹಬ್ಬಕ್ಕೆ ಕನ್ನಡದ ಹಲವಾರು ಸ್ಟಾರ್ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ದರ್ಶನ್ ಹುಟ್ಟುಹಬ್ಬದ ದಿನ ಅವರ ಮುಂಬರುವ ಸಿನಿಮಾ ರಾಬರ್ಟ್ನ ಟ್ರೇಲರ್ ಬಿಡುಗಡೆ ಆಗುತ್ತಿದೆ. ಇಂದು ಬೆಳಿಗ್ಗೆ 10 ಗಂಟೆಗೆ ರಾಬರ್ಟ್ ಟ್ರೇಲರ್ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಲಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm