ಬ್ರೇಕಿಂಗ್ ನ್ಯೂಸ್
16-02-21 10:21 am Source: FILMIBEAT Manjunatha C ಸಿನಿಮಾ
ಬಾಲಿವುಡ್ನ ಮತ್ತೊಬ್ಬ ಪ್ರತಿಭಾವಂತ ನಟ ಮೃತರಾಗಿದ್ದಾನೆ. ಕೆಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ರ ಮೃತದೇಹ ಮುಂಬೈ ನ ತಮ್ಮ ಮನೆಯಲ್ಲಿ ಪತ್ತೆಯಾಗಿದ್ದು. ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಸಿಂಗ್ ಜೊತೆಗೆ ಎಂಎಸ್ ಧೋನಿ, ಅಕ್ಷಯ್ ಕುಮಾರ್ ಜೊತೆಗೆ ಕೇಸರಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ಸಾಯುವ ಮುನ್ನ ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ವಿಡಿಯೋನಲ್ಲಿ,
'ನಾನು ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇನೆ. ನಾನು ಸಾಕಷ್ಟು ಸುಖ-ದುಃಖಗಳನ್ನು ನೋಡಿದ್ದೇನೆ. ಆದರೆ ಈಗ ನಾನು ಎದುರಿಸುತ್ತಿರುವ ಸಮಸ್ಯೆಯಿಂದ ಹೊರಬರುವುದು ಕಷ್ಟ, ಹಾಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ' ಎಂದು ಹೇಳಿದ್ದಾರೆ.
'ನನ್ನ ಪತ್ನಿ ಕಾಂಚನ್ ಶರ್ಮಾ ಹಾಗೂ ಅವರ ತಾಯಿ ವಿನು ಶರ್ಮಾ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡಲಿಲ್ಲ. ನನ್ನ ಪತ್ನಿ ಅಸಾಧಾರಣ ವ್ಯಕ್ತಿತ್ವದವಳು. ನನ್ನ ಹಾಗೂ ಆಕೆಯ ವ್ಯಕ್ತಿತ್ವ ಏಕರೀತಿಯದ್ದಲ್ಲ. ನಮ್ಮಿಬ್ಬರಿಗೂ ಹೊಂದಾಣಿಕೆ ಆಗುತ್ತಿಲ್ಲ, ಪ್ರತಿದಿನ ಜಗಳ, ಇದು ನನಗೆ ಸಹಿಸಲು ಆಗುತ್ತಿಲ್ಲ. ಇದು ಆಕೆಗೆ ಸಾಮಾನ್ಯ, ಆದರೆ ನನಗೆ ಸಾಮಾನ್ಯವಲ್ಲ. ಇದರಲ್ಲಿ ಆಕೆಯದೇನೂ ತಪ್ಪಿಲ್ಲ, ಏಕೆಂದರೆ ಆಕೆಯ ವರ್ತನೆಯೇ ಅಂಥಹದ್ದು' ಎಂದು ಸಾಯುವ ಮುನ್ನ ವಿಡಿಯೋದಲ್ಲಿ ಹೇಳಿದ್ದಾರೆ ಸಂದೀಪ್ ತಮ್ಮ ಕೋಣೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಸಂದೀಪ್ ಅನ್ನು ಅವರ ಪತ್ನಿ ಹಾಗೂ ಗೆಳೆಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು, ಸಂದೀಪ್ ಅನ್ನು ಮೃತ ಎಂದು ಘೋಷಿಸಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿಗೆ ಕಾರಣ ಹುಡುಕುತ್ತಿದ್ದಾರೆ. ಕಳೆದ ವರ್ಷ ನಟ ಸುಶಾಂತ್ ಸಿಂಗ್ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನ ಅವರ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು ಸುಶಾಂತ್ ಸಿಂಗ್. ಪ್ರಕರಣದ ಬಗ್ಗೆ ಸಿಬಿಐ ತನಿಖೆ ಇನ್ನೂ ಜಾರಿಯಲ್ಲಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm