ಬ್ರೇಕಿಂಗ್ ನ್ಯೂಸ್
19-02-21 04:40 pm Source: FILMIBEAT ಸಿನಿಮಾ
ರಾಜ್ಯಾದ್ಯಂತ ಪೊಗರು ಸಿನಿಮಾ ಇಂದು ಬಿಡುಗಡೆ ಆಗಿದೆ, ಅಭಿಮಾನಿಗಳು ಚಿತ್ರಮಂದಿರಗಳಿಗೆ ದಾಂಗುಡಿ ಇಟ್ಟಿದ್ದಾರೆ. ಆದರೆ ಮೈಸೂರಿನ ಧ್ರುವ ಸರ್ಜಾ ಅಭಿಮಾನಿಗಳು ಮಾತ್ರ ನಿರಾಸೆ ಅನುಭವಿಸುವಂತಾಗಿದೆ.
ಕೊರೊನಾ ಲಾಕ್ ಡೌನ್ ಬಳಿಕ ಬಿಗ್ ಬಜೆಟ್ ಆಗಿರುವ ಪೊಗರು ಸಿನಿಮಾ ಮೈಸೂರಿನ ಮಲ್ಟಿಪ್ಲೆಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ನಲ್ಲಿ ಪ್ರದರ್ಶನವಾಗಿಲ್ಲ. ಕಟೌಟ್ ಕಟ್ಟಿ, ಹಾರ ಹಾಕಿ, ಅಭಿಷೇಕ ಮಾಡಿ ಮಾಸ್ ಆಗಿ ಮಾಸ್ ಹೀರೋ ಧ್ರುವ ಸರ್ಜಾ ಸಿನಿಮಾವನ್ನು ಸ್ವಾಗತಿಸುವ ಅವಕಾಶ ಧ್ರುವ ಅಭಿಮಾನಿಗಳಿಗೆ ಕೈತಪ್ಪಿದೆ.
ತೆರಿಗೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವವರೆಗೂ ಚಿತ್ರಮಂದಿರ ಪ್ರಾರಂಭವಾಗುವುದಿಲ್ಲ ಎಂದು ಚಿತ್ರಮಂದಿರ ಒಕ್ಕೂಟ ತಿಳಿಸಿದ್ದು, ಯಾವುದೇ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೆರೆಯದ ಕಾರಣ 'ಪೊಗರು' ಸಿನಿಮಾ ಪ್ರದರ್ಶನವಾಗಿಲ್ಲ.
ಹೀಗಾಗಿ, ಮೈಸೂರು ನಗರದ ಪದ್ಮ ಚಿತ್ರಮಂದಿರ ಹೊರತುಪಡಿಸಿ ಗಾಯತ್ರಿ, ಲಕ್ಷ್ಮಿ, ಸರಸ್ವತಿ, ಪ್ರಭಾ, ಸ್ಟರ್ಲಿಂಗ್, ಲಿಡೋ ಸೇರಿದಂತೆ ಬಹುತೇಕ ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರಪ್ರದರ್ಶನ ಇಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.
ಮಲ್ಟಿಫ್ಲೆಕ್ಸ್ಗಳಲ್ಲಿ ಮಾತ್ರವೇ 'ಪೊಗರು' ಬಿಡುಗಡೆ ಆಗಿದ್ದು, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ಹೆಚ್ಚಿಗಿರುವುದು ಹಲವು ಸಿನಿಮಾ ಪ್ರೇಮಿಗಳಿಗೆ ಸಮಸ್ಯೆ ಆಗಿದೆ. ಪೊಗರು ಸಿನಿಮಾ ಬಿಗ್ ಬಜೆಟ್ ಸಿನಿಮಾ ಆಗಿದ್ದು ಧ್ರುವ ಸರ್ಜಾ , ರಶ್ಮಿಕಾ ಮಂದಣ್ಣ, ರಾಘವೇಂದ್ರ ರಾಜಕುಮಾರ್, ಮಯೂರಿ, ಡಾಲಿ ಧನಂಜಯ್, ಸೇರಿ ಬಹುದೊಡ್ಡ ತಾರಾಬಳಗವನ್ನೇ ಹೊಂದಿದೆ. ಬರೋಬ್ಬರಿ ಮೂರು ವರ್ಷಗಳ ಬಳಿಕ ಧ್ರುವ ನಟನೆಯ ಸಿನಿಮಾವೊಂದು ರಿಲೀಸ್ ಆಗಿದೆ.
This News Article is a Copy of FILMIBEAT
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm