ಬ್ರೇಕಿಂಗ್ ನ್ಯೂಸ್
19-02-21 04:40 pm Source: FILMIBEAT ಸಿನಿಮಾ
ರಾಜ್ಯಾದ್ಯಂತ ಪೊಗರು ಸಿನಿಮಾ ಇಂದು ಬಿಡುಗಡೆ ಆಗಿದೆ, ಅಭಿಮಾನಿಗಳು ಚಿತ್ರಮಂದಿರಗಳಿಗೆ ದಾಂಗುಡಿ ಇಟ್ಟಿದ್ದಾರೆ. ಆದರೆ ಮೈಸೂರಿನ ಧ್ರುವ ಸರ್ಜಾ ಅಭಿಮಾನಿಗಳು ಮಾತ್ರ ನಿರಾಸೆ ಅನುಭವಿಸುವಂತಾಗಿದೆ.
ಕೊರೊನಾ ಲಾಕ್ ಡೌನ್ ಬಳಿಕ ಬಿಗ್ ಬಜೆಟ್ ಆಗಿರುವ ಪೊಗರು ಸಿನಿಮಾ ಮೈಸೂರಿನ ಮಲ್ಟಿಪ್ಲೆಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ನಲ್ಲಿ ಪ್ರದರ್ಶನವಾಗಿಲ್ಲ. ಕಟೌಟ್ ಕಟ್ಟಿ, ಹಾರ ಹಾಕಿ, ಅಭಿಷೇಕ ಮಾಡಿ ಮಾಸ್ ಆಗಿ ಮಾಸ್ ಹೀರೋ ಧ್ರುವ ಸರ್ಜಾ ಸಿನಿಮಾವನ್ನು ಸ್ವಾಗತಿಸುವ ಅವಕಾಶ ಧ್ರುವ ಅಭಿಮಾನಿಗಳಿಗೆ ಕೈತಪ್ಪಿದೆ.
ತೆರಿಗೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವವರೆಗೂ ಚಿತ್ರಮಂದಿರ ಪ್ರಾರಂಭವಾಗುವುದಿಲ್ಲ ಎಂದು ಚಿತ್ರಮಂದಿರ ಒಕ್ಕೂಟ ತಿಳಿಸಿದ್ದು, ಯಾವುದೇ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ತೆರೆಯದ ಕಾರಣ 'ಪೊಗರು' ಸಿನಿಮಾ ಪ್ರದರ್ಶನವಾಗಿಲ್ಲ.
ಹೀಗಾಗಿ, ಮೈಸೂರು ನಗರದ ಪದ್ಮ ಚಿತ್ರಮಂದಿರ ಹೊರತುಪಡಿಸಿ ಗಾಯತ್ರಿ, ಲಕ್ಷ್ಮಿ, ಸರಸ್ವತಿ, ಪ್ರಭಾ, ಸ್ಟರ್ಲಿಂಗ್, ಲಿಡೋ ಸೇರಿದಂತೆ ಬಹುತೇಕ ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರಪ್ರದರ್ಶನ ಇಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.
ಮಲ್ಟಿಫ್ಲೆಕ್ಸ್ಗಳಲ್ಲಿ ಮಾತ್ರವೇ 'ಪೊಗರು' ಬಿಡುಗಡೆ ಆಗಿದ್ದು, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಫ್ಲೆಕ್ಸ್ಗಳಲ್ಲಿ ಟಿಕೆಟ್ ದರ ಹೆಚ್ಚಿಗಿರುವುದು ಹಲವು ಸಿನಿಮಾ ಪ್ರೇಮಿಗಳಿಗೆ ಸಮಸ್ಯೆ ಆಗಿದೆ. ಪೊಗರು ಸಿನಿಮಾ ಬಿಗ್ ಬಜೆಟ್ ಸಿನಿಮಾ ಆಗಿದ್ದು ಧ್ರುವ ಸರ್ಜಾ , ರಶ್ಮಿಕಾ ಮಂದಣ್ಣ, ರಾಘವೇಂದ್ರ ರಾಜಕುಮಾರ್, ಮಯೂರಿ, ಡಾಲಿ ಧನಂಜಯ್, ಸೇರಿ ಬಹುದೊಡ್ಡ ತಾರಾಬಳಗವನ್ನೇ ಹೊಂದಿದೆ. ಬರೋಬ್ಬರಿ ಮೂರು ವರ್ಷಗಳ ಬಳಿಕ ಧ್ರುವ ನಟನೆಯ ಸಿನಿಮಾವೊಂದು ರಿಲೀಸ್ ಆಗಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am