ಬ್ರೇಕಿಂಗ್ ನ್ಯೂಸ್
19-02-21 04:46 pm Source: FILMIBEAT ಸಿನಿಮಾ
ಕಾಲಿವುಡ್ ನ ದಳಪತಿ ವಿಜಯ್ ಸದ್ಯ ಮಾಸ್ಟರ್ ಸಿನಿಮಾದ ಯಶಸ್ಸಿನ ಸಂತಸದಲ್ಲಿದ್ದಾರೆ. ಮಾಸ್ಟರ್ ಬಳಿಕ ವಿಜಯ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಆದರೆ ವಿಜಯ್ 65ನೇ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳುತ್ತಾರೆ ಎಂದು ಅನೌನ್ಸ್ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆಯಲಾಗಿದೆ. ದಳಪತಿ 65 ಎಂದು ಕರೆಯುವ ವಿಜಯ್ ಮುಂದಿನ ಸಿನಿಮಾಗೆ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಆದರೆ ಈಗಾಗಲೇ ಈ ಸಿನಿಮಾದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಇದೀಗ ಮತ್ತೊಂದು ವಿಚಾರ ವೈರಲ್ ಆಗಿದೆ. ನಟ ವಿಜಯ್ ಸಿನಿಮಾದಲ್ಲಿ ಬಾಲಿವುಡ್ ನ ಖ್ಯಾತ ನಟ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಹೌದು, ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿಜಯ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿದೆ. ನವಾಜುದ್ದೀನ್, ವಿಜಯ್ ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ. ಮೂಲಗಳ ಪ್ರಕಾರ, ದಳಪತಿ 65 ಸಿನಿಮಾದಲ್ಲಿ ವಿಲನ್ ಪಾತ್ರ ತುಂಬಾ ಪವರ್ ಫುಲ್ ಆಗಿದೆಯಂತೆ. ಹಾಗಾಗಿ ಈ ಪಾತ್ರ ನವಾಜುದ್ದೀನ್ ಮಾಡಿದರೆ ಸೂಕ್ತ ಎನ್ನುವುದು ಚಿತ್ರತಂಡದ ನಿರ್ಧಾರ. ಇದರಿಂದ ಸಿನಿಮಾತಂಡ ಅವರನ್ನು ತಮಿಳಿಗೆ ಕರೆತರುವ ಪ್ಲಾನ್ ಮಾಡಿದೆ ಎನ್ನಲಾಗಿದೆ.
ಈಗಾಗಲೇ ಸಿನಿಮಾತಂಡ ನವಾಜುದ್ದೀನ್ ಜೊತೆ ಮಾತುಕತೆ ನಡೆಸಿದ್ದು, ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದೆಯಂತೆ. ಎಲ್ಲವೂ ಅಂದುಕೊಂಡಂತೆ ಆದರೆ ವಿಜಯ್ ಎದುರು ನವಾಜುದ್ದೀನ್ ನಟಿಸುವುದು ಕನ್ಫರ್ಮ್. ಇಬ್ಬರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.
ನವಾಜುದ್ದೀನ್ ಸಿದ್ದಿಕಿ ಸದ್ಯ ಬಾಲಿವುಡ್ ನ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆಯೂ ಡೇಟ್ ಹೊಂದಾಣಿಕೆ ಮಾಡಿಕೊಂಡು ವಿಜಯ್ ಎದುರು ತೊಡೆತಟ್ಟಿ ನಿಲ್ಲಲಿದ್ದಾರಾ ಎಂದು ಕಾದು ನೋಡಬೇಕು. ಅಂದಹಾಗೆ ವಿಜಯ್ ಸಿನಿಮಾ ಜೂನ್ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ. ಚಿತ್ರಕ್ಕೆ ಸನ್ ಪಿಕ್ಟರ್ಸ್ ಬಂಡವಾಳ ಹೂಡುತ್ತಿದೆ. ವಿಜಯ್ ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
This News Article is a Copy of FILMIBEAT
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm