ಬ್ರೇಕಿಂಗ್ ನ್ಯೂಸ್
19-02-21 04:46 pm Source: FILMIBEAT ಸಿನಿಮಾ
ಕಾಲಿವುಡ್ ನ ದಳಪತಿ ವಿಜಯ್ ಸದ್ಯ ಮಾಸ್ಟರ್ ಸಿನಿಮಾದ ಯಶಸ್ಸಿನ ಸಂತಸದಲ್ಲಿದ್ದಾರೆ. ಮಾಸ್ಟರ್ ಬಳಿಕ ವಿಜಯ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಆದರೆ ವಿಜಯ್ 65ನೇ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳುತ್ತಾರೆ ಎಂದು ಅನೌನ್ಸ್ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆಯಲಾಗಿದೆ. ದಳಪತಿ 65 ಎಂದು ಕರೆಯುವ ವಿಜಯ್ ಮುಂದಿನ ಸಿನಿಮಾಗೆ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಆದರೆ ಈಗಾಗಲೇ ಈ ಸಿನಿಮಾದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಇದೀಗ ಮತ್ತೊಂದು ವಿಚಾರ ವೈರಲ್ ಆಗಿದೆ. ನಟ ವಿಜಯ್ ಸಿನಿಮಾದಲ್ಲಿ ಬಾಲಿವುಡ್ ನ ಖ್ಯಾತ ನಟ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಹೌದು, ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿಜಯ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿದೆ. ನವಾಜುದ್ದೀನ್, ವಿಜಯ್ ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ. ಮೂಲಗಳ ಪ್ರಕಾರ, ದಳಪತಿ 65 ಸಿನಿಮಾದಲ್ಲಿ ವಿಲನ್ ಪಾತ್ರ ತುಂಬಾ ಪವರ್ ಫುಲ್ ಆಗಿದೆಯಂತೆ. ಹಾಗಾಗಿ ಈ ಪಾತ್ರ ನವಾಜುದ್ದೀನ್ ಮಾಡಿದರೆ ಸೂಕ್ತ ಎನ್ನುವುದು ಚಿತ್ರತಂಡದ ನಿರ್ಧಾರ. ಇದರಿಂದ ಸಿನಿಮಾತಂಡ ಅವರನ್ನು ತಮಿಳಿಗೆ ಕರೆತರುವ ಪ್ಲಾನ್ ಮಾಡಿದೆ ಎನ್ನಲಾಗಿದೆ.
ಈಗಾಗಲೇ ಸಿನಿಮಾತಂಡ ನವಾಜುದ್ದೀನ್ ಜೊತೆ ಮಾತುಕತೆ ನಡೆಸಿದ್ದು, ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದೆಯಂತೆ. ಎಲ್ಲವೂ ಅಂದುಕೊಂಡಂತೆ ಆದರೆ ವಿಜಯ್ ಎದುರು ನವಾಜುದ್ದೀನ್ ನಟಿಸುವುದು ಕನ್ಫರ್ಮ್. ಇಬ್ಬರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.
ನವಾಜುದ್ದೀನ್ ಸಿದ್ದಿಕಿ ಸದ್ಯ ಬಾಲಿವುಡ್ ನ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆಯೂ ಡೇಟ್ ಹೊಂದಾಣಿಕೆ ಮಾಡಿಕೊಂಡು ವಿಜಯ್ ಎದುರು ತೊಡೆತಟ್ಟಿ ನಿಲ್ಲಲಿದ್ದಾರಾ ಎಂದು ಕಾದು ನೋಡಬೇಕು. ಅಂದಹಾಗೆ ವಿಜಯ್ ಸಿನಿಮಾ ಜೂನ್ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ. ಚಿತ್ರಕ್ಕೆ ಸನ್ ಪಿಕ್ಟರ್ಸ್ ಬಂಡವಾಳ ಹೂಡುತ್ತಿದೆ. ವಿಜಯ್ ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm