ಬ್ರೇಕಿಂಗ್ ನ್ಯೂಸ್
21-02-21 11:39 am Source: FILMIBEAT Manjunatha C ಸಿನಿಮಾ
ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತೆ ಕನ್ನಡಿಗರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ಈ ಹಿಂದೆ ಕನ್ನಡ ಭಾಷೆ ಬರುವುದಿಲ್ಲವೆಂದು ಹೇಳಿ ಬಹುವಾಗಿ ಟ್ರೋಲ್ ಆಗಿದ್ದ ರಶ್ಮಿಕಾ ಮಂದಣ್ಣ ಈ ಬಾರಿ ಸಿನಿಮಾ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ 'ಪೊಗರು' ಸಿನಿಮಾ ಫೆಬ್ರವರಿ 19 ರಂದು ಬಿಡುಗಡೆ ಆಗಿದೆ. ಆದರೆ ರಶ್ಮಿಕಾ ಮಂದಣ್ಣ ಸಿನಿಮಾ ಬಗ್ಗೆ ಒಂದೇ ಒಂದು ಪೋಸ್ಟ್ ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಮಂದಣ್ಣ ಬಹು ಸಕ್ರಿಯರಾಗಿರುತ್ತಾರೆ. ತಮ್ಮ ಎಲ್ಲ ಸಿನಿಮಾಗಳ ಬಗ್ಗೆ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಬಾಲಿವುಡ್ನ ರ್ಯಾಪ್ ಹಾಡಿನ ವಿಡಿಯೋ, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದರು. ಆದರೆ ಪೊಗರು ಸಿನಿಮಾ ಬಗ್ಗೆ ಒಂದು ಪೋಸ್ಟ್ ಸಹ ಹಾಕಿಲ್ಲ. ಕನಿಷ್ಟ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಿಲ್ಲ.
ಒಂದು ದಿನ ಪ್ರಚಾರಕ್ಕಾಗಿ ಬಂದ ರಶ್ಮಿಕಾ ಮಂದಣ್ಣ, ಸಾಲಾಗಿ ಟಿವಿಗಳಿಗೆ ಸಂದರ್ಶನವನ್ನು ನೀಡಿ ತೆರಳಿದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಯಾವ ಪೋಸ್ಟ್ ಸಹ ಮಾಡಲಿಲ್ಲ. ರಶ್ಮಿಕಾ ಪ್ರಸ್ತುತ ತೆಲುಗು, ತಮಿಳು, ಹಿಂದಿಯ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಚಿತ್ರೀಕರಣ ಹಂತದಲ್ಲಿರುವಾಗಲೇ ಸಿನಿಮಾಗಳ ಬಗ್ಗೆ ಸಾಕಷ್ಟು ಪೋಸ್ಟ್ಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಕನ್ನಡದ ಸಿನಿಮಾ ಬಗ್ಗೆ ಏಕೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಪ್ರಶ್ನಿಸಿದ್ದಾರೆ. ರಶ್ಮಿಕಾ ಗೆ 'ಪೊಗರು' ಚಿತ್ರದ ಬಗ್ಗೆ ಮಾತ್ರ ಅಸಡ್ಡೆಯೋ ಅಥವಾ ಕನ್ನಡದ ಬಗ್ಗೆಯೇ ಅಸಡ್ಡೆಯೇ ಗೊತ್ತಿಲ್ಲ. ನಟಿ ರಶ್ಮಿಕಾ ಮಂದಣ್ಣ ತೆಲುಗಿನ ಪುಷ್ಪ, ಹಿಂದಿಯ ಮಿಷನ್ ಮಜ್ನು ಹಾಗೂ ಇನ್ನೂ ಹೆಸರಿಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಆ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ಇರಲಿದ್ದಾರೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm