ಬ್ರೇಕಿಂಗ್ ನ್ಯೂಸ್
21-02-21 11:48 am Source: FILMIBEAT Shruthi Gk ಸಿನಿಮಾ
ಟಾಲಿವುಡ್ ನ ಮೆಗಾಸ್ಟಾರ್ ಚಿರಂಜೀವಿ ಮತ್ತು ಪತ್ನಿ ಸುರೇಖಾ ದಂಪತಿಗೆ ಇಂದು ವಿಶೇಷವಾದ ದಿನ. ಹೌದು, ಚಿರಂಜೀವಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಿನವಿದು. 1980ರಲ್ಲಿ ಅಂದರೆ 42 ವರ್ಷಗಳ ಹಿಂದೆ ಮೆಗಾಸ್ಟಾರ್, ಸುರೇಖಾ ಜೊತೆ ಹಸೆಮಣೆ ಏರಿದ್ದಾರೆ. 42ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಚಿರಂಜೀವಿ ದಂಪತಿ ಕುಟುಂಬದ ಜೊತೆ ಸಂಭ್ರಮಿಸಿದ್ದಾರೆ. ಟಾಲಿವುಡ್ ನ ಈ ಸುಂದರ ಜೋಡಿಗೆ ಅಭಿಮಾನಿಗಳಿಂದ ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ವಿಶೇಷ ಎಂದರೆ ಚಿರಂಜೀವಿ ಪ್ರೀತಿಯ ಪುತ್ರ ರಾಮ್ ಚರಣ್ ತಂದೆ-ತಾಯಿಯ ವಿವಾಹ ವಾರ್ಷಿಕೋತ್ಸವಕ್ಕೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಚಿರಂಜೀವಿ ಮತ್ತು ಸುರೇಖಾ ಅವರ ಸುಂದರ ಫೋಟೋವನ್ನು ಶೇರ್ ಮಾಡಿ, ದೊಡ್ಡ ಶಕ್ತಿ ಎಂದು ಹೇಳಿದ್ದಾರೆ. 'ನನ್ನ ದೊಡ್ಡ ಶಕ್ತಿ. ನಿಮ್ಮಿಬ್ಬರಿಗೂ 42ನೇ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು' ಎಂದು ಹೇಳಿದ್ದಾರೆ.
ಚಿರಂಜೀವಿ ಪತ್ನಿ ಸುರೇಖಾ ಚಿತ್ರರಂಗದಿಂದ ದೂರ ಇದ್ದರೂ ಪತಿಯ ಸಿನಿ ಜೀವನಕ್ಕೆ ಆಧಾರಸ್ತಂಭವಾಗಿದ್ದಾರೆ. ಚಿರಂಜೀವಿ ಮತ್ತು ಸುರೇಖಾ ದಂಪತಿಗೆ ಮೂವರು ಮಕ್ಕಳು. ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ. ಪುತ್ರ ರಾಮ್ ಚರಣ್ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದು, ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ.
ಚಿರಂಜೀವಿ ಸದ್ಯ ಆಚಾರ್ಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಸಾಕಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಈ ಸಿನಿಮಾ ಬಳಿಕ ಚಿರಂಜೀವಿ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಪುತ್ರ ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಳಿಕ ನಿರ್ದೇಶಕ ಶಂಕರ್ ಜೊತೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm