ಬ್ರೇಕಿಂಗ್ ನ್ಯೂಸ್
22-02-21 03:48 pm Source: FILMIBEAT Bharath Kumar K ಸಿನಿಮಾ
ಕನ್ನಡದ ಹಿರಿಯ ನಿರ್ದೇಶಕ ಎಸ್ ನಾರಾಯಣ್ ಅವರ ಮನೆ ಮದುವೆ ಸಂಭ್ರಮದಿಂದ ಕೂಡಿದೆ. ನಟ, ನಿರ್ದೇಶಕ, ನಿರ್ಮಾಪಕ ಎಸ್ ನಾರಾಯಣ್ ಅವರ ಪುತ್ರ ಪವನ್ ಕುಮಾರ್ ಇಂದು ದಾಂಪತ್ಯ ಜೀವನ ಆರಂಭಿಸಿದ್ದಾರೆ.
ಫೆಬ್ರವರಿ 21ರ ಬೆಳಗ್ಗೆ 7.30 ರಿಂದ 8.30 ಗಂಟೆಗೆ ನಡೆದ ಶುಭ ಲಗ್ನದಲ್ಲಿ ಪವಿತ್ರಾ ಅವರನ್ನು ಪವನ್ ಕುಮಾರ್ ವರಿಸಿದ್ದಾರೆ. ನಂತರ 10 ಗಂಟೆಗೆ ಆರತಕ್ಷತೆ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು.
ಎಸ್ ನಾರಾಯಣ್ ಅವರ ಪುತ್ರನ ವಿವಾಹಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಗಣ್ಯರು ಆಗಮಿಸಿದ್ದರು. ಸಚಿವ ಗೋಪಾಲಯ್ಯ ಸಹ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಚಿತ್ರರಂಗದಿಂದಲೂ ಅನೇಕ ಗಣ್ಯರು ಪವನ್ ಕುಮಾರ್ ಮದುವೆಗೆ ಆಗಮಿಸಿ ನವಜೋಡಿಗೆ ಶುಭಹಾರೈಸಿದ್ದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ನಟ ಶರಣ್, ಶ್ರೀಮುರಳಿ, ಸುಧಾರಾಣಿ, ಮಾಳವಿಕಾ ಅವಿನಾಶ್, ಮುಖ್ಯಮಂತ್ರಿ ಚಂದ್ರು, ಅಮೂಲ್ಯ ಅವರು ಆರತಕ್ಷತೆಯಲ್ಲಿ ಭಾಗಿಯಾಗಿದ್ದರು.
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟ ಆದಿತ್ಯ, ಸುಂದರ್ ರಾಜ್, ಪ್ರಮಿಳಾ ಜೋಶಾಯ್ ಹಾಗೂ ಹಿರಿಯ ನಟ ದೇವರಾಜ್ ಸೇರಿದಂತೆ ಹಲವರು ಎಸ್ ನಾರಾಯಣ್ ಪುತ್ರನ ಮದುವೆಯಲ್ಲಿ ಪಾಲ್ಗೊಂಡಿದ್ದರು.
ಅಂದ್ಹಾಗೆ, ಪವನ್ ಕುಮಾರ್ 'ರತ್ನ' ಎಂಬ ಸಿನಿಮಾದಲ್ಲಿ ನಾಯಕನಟನಾಗಿ ನಟಿಸಿದ್ದರು. ಅದಾದ ಬಳಿಕ ನವಮಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm