ಬ್ರೇಕಿಂಗ್ ನ್ಯೂಸ್
17-08-20 07:21 pm Headline Karnataka News Network ಸಿನಿಮಾ
ನವದೆಹಲಿ: ಹಿಂದಿ, ಮರಾಠಿ ಭಾಷೆಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ, ನಟ ನಿಶಿಕಾಂತ್ ಕಾಮತ್ (50ವರ್ಷ) ಸೋಮವಾರ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಿಶಿಕಾಂತ್ ಕಾಮತ್ ಹೈದರಾಬಾದ್ ನ ಗಚ್ಚಿಬೊಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 12ರಂದು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಸೋಮವಾರ ಬೆಳಗ್ಗೆಯೇ ನಿಧನರಾಗಿದ್ದಾರೆಂಬ ಸುದ್ದಿ ಹಬ್ಬಿದ್ದರಿಂದ ಎಐಜಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ, ನಿಶಿಕಾಂತ್ ಅವರು ವೆಂಟಿಲೇಟರ್ ನಲ್ಲಿ ಇದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿತ್ತು.
2008ರ ‘ಮುಂಬೈ ಮೇರಿ ಜಾನ್’ ಸಿನಿಮಾದ ಮೂಲಕ ನಟ - ನಿರ್ದೇಶಕನಾಗಿ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು. ’ದೊಂಬಿವಾಲಿ ಫಾಸ್ಟ್’, ‘ಮುಂಬೈ ಮೇರಿ ಜಾನ್’, ‘ರಾಕಿ ಹ್ಯಾಂಡ್ಸಮ್’, ‘ಫೋರ್ಸ್’, ‘ಮದಾರಿ’, ‘ದೃಶ್ಯಂ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ‘ಡ್ಯಾಡಿ’, ‘ರಾಕಿ ಹ್ಯಾಂಡ್ಸಮ್’, ‘ಜ್ಯೂಲಿ 2‘ ಹಾಗೂ ‘ಭಾವೇಶ್ ಜೋಶಿ’ ಸಿನಿಮಾಗಳಲ್ಲಿ ತಮ್ಮ ನಟನಾ ಚಾತುರ್ಯವನ್ನು ತೋರಿದ್ದರು ನಿಶಿಕಾಂತ್. ಸಿನಿಮಾಗಳಿಗೆ ಮಾತ್ರ ತಮ್ಮನ್ನು ಸೀಮಿತವಾಗಿರಿಸಿಕೊಳ್ಳದ ಇವರು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದರು.
ಗೆಳೆಯ ನಿಶಿಕಾಂತ್ ಕಾಮತ್ ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟ ರಿತೇಶ್ ದೇಶ್ ಮುಖ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಿತೇಶ್ ನಟಿಸಿ, ನಿರ್ಮಾಣ ಮಾಡಿದ್ದ “ಲಾಯಿ ಭಾರಿ ಮರಾಠಿ ಸಿನಿಮಾವನ್ನು ನಿಶಿಕಾಂತ್ ನಿರ್ದೇಶಿಸಿದ್ದರು. ಈ ಸಿನಿಮಾ ಮರಾಠಿಯಲ್ಲಿ ಸೂಪರ್ ಹಿಟ್ ಆಗಿತ್ತು.
I will miss you my friend. #NishikantKamat Rest In Peace. 🙏🏽 pic.twitter.com/cqEeLbKJPM
— Riteish Deshmukh (@Riteishd) August 17, 2020
03-01-26 09:00 pm
HK News Desk
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 09:13 pm
Mangalore Correspondent
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
Fr. Andrew Leo D’Souza, St. Lawrence Church M...
03-01-26 06:51 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm