ಬ್ರೇಕಿಂಗ್ ನ್ಯೂಸ್
17-08-20 07:21 pm Headline Karnataka News Network ಸಿನಿಮಾ
ನವದೆಹಲಿ: ಹಿಂದಿ, ಮರಾಠಿ ಭಾಷೆಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ, ನಟ ನಿಶಿಕಾಂತ್ ಕಾಮತ್ (50ವರ್ಷ) ಸೋಮವಾರ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಿಶಿಕಾಂತ್ ಕಾಮತ್ ಹೈದರಾಬಾದ್ ನ ಗಚ್ಚಿಬೊಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 12ರಂದು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಸೋಮವಾರ ಬೆಳಗ್ಗೆಯೇ ನಿಧನರಾಗಿದ್ದಾರೆಂಬ ಸುದ್ದಿ ಹಬ್ಬಿದ್ದರಿಂದ ಎಐಜಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ, ನಿಶಿಕಾಂತ್ ಅವರು ವೆಂಟಿಲೇಟರ್ ನಲ್ಲಿ ಇದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿತ್ತು.
2008ರ ‘ಮುಂಬೈ ಮೇರಿ ಜಾನ್’ ಸಿನಿಮಾದ ಮೂಲಕ ನಟ - ನಿರ್ದೇಶಕನಾಗಿ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು. ’ದೊಂಬಿವಾಲಿ ಫಾಸ್ಟ್’, ‘ಮುಂಬೈ ಮೇರಿ ಜಾನ್’, ‘ರಾಕಿ ಹ್ಯಾಂಡ್ಸಮ್’, ‘ಫೋರ್ಸ್’, ‘ಮದಾರಿ’, ‘ದೃಶ್ಯಂ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ‘ಡ್ಯಾಡಿ’, ‘ರಾಕಿ ಹ್ಯಾಂಡ್ಸಮ್’, ‘ಜ್ಯೂಲಿ 2‘ ಹಾಗೂ ‘ಭಾವೇಶ್ ಜೋಶಿ’ ಸಿನಿಮಾಗಳಲ್ಲಿ ತಮ್ಮ ನಟನಾ ಚಾತುರ್ಯವನ್ನು ತೋರಿದ್ದರು ನಿಶಿಕಾಂತ್. ಸಿನಿಮಾಗಳಿಗೆ ಮಾತ್ರ ತಮ್ಮನ್ನು ಸೀಮಿತವಾಗಿರಿಸಿಕೊಳ್ಳದ ಇವರು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದರು.
ಗೆಳೆಯ ನಿಶಿಕಾಂತ್ ಕಾಮತ್ ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟ ರಿತೇಶ್ ದೇಶ್ ಮುಖ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಿತೇಶ್ ನಟಿಸಿ, ನಿರ್ಮಾಣ ಮಾಡಿದ್ದ “ಲಾಯಿ ಭಾರಿ ಮರಾಠಿ ಸಿನಿಮಾವನ್ನು ನಿಶಿಕಾಂತ್ ನಿರ್ದೇಶಿಸಿದ್ದರು. ಈ ಸಿನಿಮಾ ಮರಾಠಿಯಲ್ಲಿ ಸೂಪರ್ ಹಿಟ್ ಆಗಿತ್ತು.
I will miss you my friend. #NishikantKamat Rest In Peace. 🙏🏽 pic.twitter.com/cqEeLbKJPM
— Riteish Deshmukh (@Riteishd) August 17, 2020
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm