ಬ್ರೇಕಿಂಗ್ ನ್ಯೂಸ್
17-08-20 07:21 pm Headline Karnataka News Network ಸಿನಿಮಾ
ನವದೆಹಲಿ: ಹಿಂದಿ, ಮರಾಠಿ ಭಾಷೆಯ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ, ನಟ ನಿಶಿಕಾಂತ್ ಕಾಮತ್ (50ವರ್ಷ) ಸೋಮವಾರ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಿಶಿಕಾಂತ್ ಕಾಮತ್ ಹೈದರಾಬಾದ್ ನ ಗಚ್ಚಿಬೊಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 12ರಂದು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಸೋಮವಾರ ಬೆಳಗ್ಗೆಯೇ ನಿಧನರಾಗಿದ್ದಾರೆಂಬ ಸುದ್ದಿ ಹಬ್ಬಿದ್ದರಿಂದ ಎಐಜಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿ, ನಿಶಿಕಾಂತ್ ಅವರು ವೆಂಟಿಲೇಟರ್ ನಲ್ಲಿ ಇದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿತ್ತು.
2008ರ ‘ಮುಂಬೈ ಮೇರಿ ಜಾನ್’ ಸಿನಿಮಾದ ಮೂಲಕ ನಟ - ನಿರ್ದೇಶಕನಾಗಿ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು. ’ದೊಂಬಿವಾಲಿ ಫಾಸ್ಟ್’, ‘ಮುಂಬೈ ಮೇರಿ ಜಾನ್’, ‘ರಾಕಿ ಹ್ಯಾಂಡ್ಸಮ್’, ‘ಫೋರ್ಸ್’, ‘ಮದಾರಿ’, ‘ದೃಶ್ಯಂ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ‘ಡ್ಯಾಡಿ’, ‘ರಾಕಿ ಹ್ಯಾಂಡ್ಸಮ್’, ‘ಜ್ಯೂಲಿ 2‘ ಹಾಗೂ ‘ಭಾವೇಶ್ ಜೋಶಿ’ ಸಿನಿಮಾಗಳಲ್ಲಿ ತಮ್ಮ ನಟನಾ ಚಾತುರ್ಯವನ್ನು ತೋರಿದ್ದರು ನಿಶಿಕಾಂತ್. ಸಿನಿಮಾಗಳಿಗೆ ಮಾತ್ರ ತಮ್ಮನ್ನು ಸೀಮಿತವಾಗಿರಿಸಿಕೊಳ್ಳದ ಇವರು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದರು.
ಗೆಳೆಯ ನಿಶಿಕಾಂತ್ ಕಾಮತ್ ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟ ರಿತೇಶ್ ದೇಶ್ ಮುಖ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಿತೇಶ್ ನಟಿಸಿ, ನಿರ್ಮಾಣ ಮಾಡಿದ್ದ “ಲಾಯಿ ಭಾರಿ ಮರಾಠಿ ಸಿನಿಮಾವನ್ನು ನಿಶಿಕಾಂತ್ ನಿರ್ದೇಶಿಸಿದ್ದರು. ಈ ಸಿನಿಮಾ ಮರಾಠಿಯಲ್ಲಿ ಸೂಪರ್ ಹಿಟ್ ಆಗಿತ್ತು.
I will miss you my friend. #NishikantKamat Rest In Peace. 🙏🏽 pic.twitter.com/cqEeLbKJPM
— Riteish Deshmukh (@Riteishd) August 17, 2020
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm