ಬ್ರೇಕಿಂಗ್ ನ್ಯೂಸ್
22-02-21 04:03 pm Source: FILMIBEAT Manjunatha C ಸಿನಿಮಾ
ತಮಿಳಿನ ಖ್ಯಾತ ನಾಯಕ ನಟ ಆರ್.ಮಾಧವನ್ ಗೆ ಡಾಕ್ಟರೇಟ್ ಲಭಿಸಿದೆ. ಸಿನಿಮಾ ಕಲೆಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಸಿನಿಮಾ ರಂಗದಲ್ಲಿ ನಿರತರಾಗಿರುವ ಆರ್.ಮಾಧವನ್ ಅರವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಜೊತೆಗೆ ಹಲವು ಸಿನಿಮಾಗಳಿಗೆ ಚಿತ್ರಕತೆ ಬರೆದಿದ್ದಾರೆ, ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವೆಬ್ ಸೀರೀಸ್ ಹಾಗೂ ಡಾಕ್ಯುಮೆಂಟರಿಗಳಲ್ಲಿಯೂ ನಟಿಸಿದ್ದಾರೆ ಮಾಧವನ್. ಆರ್.ಮಾಧವನ್ ಅವರು ಸಿನಿಮಾಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿರುವ ಮಹಾರಾಷ್ಟ್ರದ ಕೊಲ್ಹಾಪುರದ ಡಿವೈ ಪಾಟಿಲ್ ಎಜುಕೇಶನ್ ಸೊಸೈಟಿ ವಿವಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಆರ್.ಮಾಧವನ್, 'ಈ ಗೌರವ ನೀಡಿದ್ದಕ್ಕೆ ಧನ್ಯವಾದಗಳು, ಇದು ನನ್ನನ್ನು ಇನ್ನಷ್ಟು ಜವಾಬ್ದಾರಿಯಿಂದ ವರ್ತಿಸುವಂತೆ ಮಾಡಿದೆ' ಎಂದಿದ್ದಾರೆ. ಮಾಧವನ್ ವಿದ್ಯಾರ್ಥಿ ದೆಸೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಾಧವನ್, ವಿದ್ಯಾರ್ಥಿವೇತನ ಪಡೆದು ಕೆನಡಾ, ಅಲ್ಬೆರ್ಟಾ, ಸೆಟ್ಲರ್ಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು.
ಇತ್ತೀಚೆಗಷ್ಟೆ ಮಾಧವನ್, ಕನ್ನಡತಿ ಶ್ರದ್ಧಾ ಶ್ರೀನಾಥ್ ನಟನೆಯ 'ಮಾರಾ' ಸಿನಿಮಾ ಬಿಡುಗಡೆ ಆಗಿದೆ. ಇದೀಗ ಮಾಧವನ್ ಅವರೇ ನಿರ್ದೇಶಿಸಿ, ಹಣ ಸಹ ಹೂಡಿರುವ 'ರಾಕೆಟ್ರಿ; ದಿ ನಂಬಿ ಎಫೆಕ್ಟ್' ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm