ಬ್ರೇಕಿಂಗ್ ನ್ಯೂಸ್
23-02-21 03:23 pm Source: FILMIBEAT Manjunatha C ಸಿನಿಮಾ
'ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ 'ದಿಯಾ' ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದ ನಟನೆಗೆ ಧನಂಜಯ್ ಅತ್ಯುತ್ತಮ ನಟ, 'ದಿಯಾ' ಸಿನಿಮಾದ ಅತ್ಯುತ್ತಮ ನಟನೆಗೆ ಖುಷಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ.
ಭಾನುವಾರ ಸಂಜೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಕಾರ್ಯಕ್ರಮ ನಡೆದಿದ್ದು, 'ಆಕ್ಟ್-1978' ಸಿನಿಮಾದ ನಿರ್ದೇಶಕ ಮಂಸೋರೆಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. 2020 ರಲ್ಲಿ ಬಿಡುಗಡೆ ಆದ ಅತ್ಯುತ್ತಮ ಸಿನಿಮಾಗಳನ್ನು ಸಿನಿಮಾ ಪತ್ರಕರ್ತರು ನೋಡಿ 21 ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ನಟ, ನಟಿ, ತಂತ್ರಜ್ಞರನ್ನು ಆಯ್ಕೆ ಮಾಡಿದ್ದಾರೆ.

'ಚಂದನವನ ಫಿಲಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021' ನಲ್ಲಿ ಅಚ್ಯುತ್ ಕುಮಾರ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ, ತಾರಾ ಅನುರಾಧಾಗೆ ಶಿವಾರ್ಜುನ ಸಿನಿಮಾಕ್ಕಾಗಿ ಪೋಷಕ ನಟಿ ಪ್ರಶಸ್ತಿ, ಅತ್ಯುತ್ತಮ ಸಂಗೀತ ದಿಯಾ ಗಾಗಿ ಅಜನೀಶ್ ಲೋಕನಾಥ್, 'ಮರಳಿ ಮನಸ್ಸಾಗಿದೆ' ಹಾಡಿಗೆ ಅತ್ಯುತ್ತಮ ಗಾಯಕ ಸಂಜಿತ್ ಹೆಗಡೆಗೆ ಪ್ರಶಸ್ತಿ, ದಿಯಾ ಸಿನಿಮಾದ ಹಾಡಿಗಾಗಿ ಚಿನ್ಮಯಿಗೆ ಪ್ರಶಸ್ತಿ ದೊರೆತಿದೆ.
ಸಂಗೀತ ನಿರ್ದೇಶನ ವಿಭಾಗದಲ್ಲಿ ರಘು ದೀಕ್ಷಿತ್ ಗೆ ಪ್ರಶಸ್ತಿ ದೊರೆತಿದೆ. ಮನುಷ್ಯೇತರ ವಿಭಾಗವೂ ಒಂದಿದ್ದು, ಆ ವಿಭಾಗದಲ್ಲಿ 'ನಾನು ಮತ್ತು ಗುಂಡ' ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಸಿಂಭಾ ಗೆ ಆ ಪ್ರಶಸ್ತಿ ನೀಡಲಾಗಿದೆ. ಆ ಸಿಂಭಾ ನಾಯಿಯು, ಮಲಯಾಳಂ ನ 'ಬೆಂಗಳೂರು ಡೇಸ್', 'ಗುಲ್ಟು', 'ಶಿವಾಜಿ ಸೂರತ್ಕಲ್' ಸಿನಿಮಾದಲ್ಲಿಯೂ ಪಾತ್ರವಹಿಸಿದೆ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm