ಬ್ರೇಕಿಂಗ್ ನ್ಯೂಸ್
25-02-21 10:48 am Source: FILMIBEAT ಸಿನಿಮಾ
ದಕ್ಷಿಣ ಭಾರತ ಸಿನಿಮಾ ಉದ್ಯಮದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಗಳಲ್ಲಿ ಒಬ್ಬರು ನಟ ವಿಜಯ್ ದೇವರಕೊಂಡ.
ಸಿನಿಮಾಗಳಲ್ಲಿ ತಮ್ಮ ಪ್ಲೇಬಾಯ್ ಲುಕ್ನಿಂದ ಯುವತಿಯರನ್ನು ಸೆಳೆಯುವ ವಿಜಯ್ ದೇವರಕೊಂಡ ಲಕ್ಷಾಂತರ ಮಹಿಳಾ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂತಿಪ್ಪ ವಿಜಯ್ ದೇವರಕೊಂಡ ಜೊತೆಗೆ ಹಲವು ನಟಿಯರ ಹೆಸರುಗಳು ಸಹ ಆಗಾಗ್ಗೆ ಥಳಕು ಹಾಕಿಕೊಳ್ಳುತ್ತಿರುತ್ತದೆ.
ಇದೀಗ ವಿಜಯ್ ದೇವರಕೊಂಡ ಜೊತೆಗೆ ಬಾಲಿವುಡ್ ನಟಿಯ ಹೆಸರು ಸೇರಿಕೊಂಡಿದೆ. ಅದೂ ಈ ಯುವ ನಟಿ ಸಾಮಾನ್ಯದ ನಟಿಯಲ್ಲ. ದೊಡ್ಡ ನವಾಬ ಕುಟುಂಬಕ್ಕೆ ಸೇರಿದ ಯುವತಿ. ಅದುವೇ ಸೈಫ್ ಅಲಿ ಖಾನ್ ಮಗಳು ಸಾರಾ ಅಲಿ ಖಾನ್.
ವಿಜಯ್ ದೇವರಕೊಂಡ-ಸಾರಾ ಅಲಿ ಖಾನ್ ಡೇಟಿಂಗ್?
ನಟ ವಿಜಯ್ ದೇವರಕೊಂಡ ಹಾಗೂ ಸಾರಾ ಅಲಿ ಖಾಣ್ ಡೇಟಿಂಗ್ನಲ್ಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಹೀಗೆ ಸುದ್ದಿ ಹರಿದಾಡಲು ಕಾರಣವೂ ಇದೆ. ಇಬ್ಬರೂ ಇತ್ತೀಚೆಗೆ ಮುಂಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾರಾ, ವಿಜಯ್ ದೇವರಕೊಂಡ ಜೊತೆಗೆ ಆಪ್ತವಾಗಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಸಹ.

ಮನಿಷ್ ಮಲ್ಹೋತ್ರಾ ಮನೆಯಲ್ಲಿ ಪಾರ್ಟಿ
ಖ್ಯಾತ ಡಿಸೈನರ್ ಮನಿಷ್ ಮಲ್ಹೋತ್ರಾ ಮನೆಯಲ್ಲಿ ನಡೆದ ಪಾರ್ಟಿಯಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಇದೇ ಪಾರ್ಟಿಯಲ್ಲಿ ಕರಣ್ ಜೋಹರ್, ಸಾರಾ ಅಲಿ ಖಾನ್, ಪುರಿ ಜಗನ್ನಾಥ್, ಚಾರ್ಮಿ, ಅನನ್ಯಾ ಪಾಂಡೆ ಇನ್ನೂ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ಇದ್ದರು. ವಿಜಯ್ ದೇವರಕೊಂಡ ಜೊತೆ ಚಿತ್ರ ಪ್ರಕಟಿಸಿರುವ ಸಾರಾ ಅಲಿ ಖಾನ್, 'ಫ್ಯಾನ್ ಮೂಮೆಂಟ್' ಎಂಬ ಕ್ಯಾಪ್ಷನ್ ಹಾಕಿದ್ದಾರೆ.
ರಶ್ಮಿಕಾ ಮಂದಣ್ಣ ಜೊತೆಗೆ ಹೆಸರು ಕೇಳಿಬಂದಿತ್ತು
ವಿಜಯ್ ದೇವರಕೊಂಡ ಹೆಸರು ಈ ಮೊದಲು ಕನ್ನಡತಿ ನಟಿ ರಶ್ಮಿಕಾ ಮಂದಣ್ಣ ಜೊತೆಗೂ ಕೇಳಿ ಬಂದಿತ್ತು. ಇಬ್ಬರೂ ಕೆಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ಇಬ್ಬರೂ ಆಪ್ತ ಗೆಳೆಯರಾಗಿಯೂ ಇದ್ದರು, ಹಾಗಾಗಿ ಇಬ್ಬರ ಹೆಸರನ್ನು ಥಳುಕು ಹಾಕಲಾಗಿತ್ತು.

ಬೆಲ್ಜಿಯಂ ಹುಡುಗಿಯನ್ನು ಪ್ರೀತಿಸುತ್ತಿದ್ದ ವಿಜಯ್
ವಿಜಯ್ ದೇವರಕೊಂಡ ತಮ್ಮ ಗರ್ಲ್ಫ್ರೆಂಡ್ನ ಪರಿಚಯವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದರು. ವಿಜಯ್ ದೇವರಕೊಂಡ ಬೆಲ್ಜಿಯಂ ಹುಡುಗಿ ವಿರ್ಜಿನಿಯಾ ಎಂಬಾಕೆಯೊಂದಿಗೆ ಪ್ರೇಮದಲ್ಲಿರುವುದಾಗಿ ಮೂರು ವರ್ಷಗಳ ಹಿಂದೆ ಹೇಳಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ವಿರ್ಜೀನಿಯಾ ಜೊತೆಗೆ ಯಾವುದೇ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿಲ್ಲ ವಿಜಯ್.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm