ಬ್ರೇಕಿಂಗ್ ನ್ಯೂಸ್
25-02-21 11:03 am Source: FILMIBEAT ಸಿನಿಮಾ
ತಮಿಳು ಸೂಪರ್ ಸ್ಟಾರ್ ವಿಜಯ್ ನಟನೆಯ ಮಾಸ್ಟರ್ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿದೆ. ಬಾಕ್ಸ್ ಆಫೀಸ್ನಲ್ಲಿ ಸುಮಾರು 200 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ. ಮಾಸ್ಟರ್ ಸಕ್ಸಸ್ ಬಳಿಕ ವಿಜಯ್ ನೆಲ್ಸನ್ ದಿಲೀಪ್ ಕುಮಾರ್ ಜೊತೆ ಹೊಸ ಸಿನಿಮಾ ಆರಂಭಿಸಿದ್ದಾರೆ.
ಸದ್ಯಕ್ಕೆ 'ವಿಜಯ್ 65' ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಶೀಘ್ರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಸನ್ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕಲಿದ್ದು, ನಾಯಕಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಹೆಸರು ಚರ್ಚೆಯಲ್ಲಿದೆ. ಇದೀಗ, ವಿಜಯ್ ಪುತ್ರ ಚಿತ್ರರಂಗಕ್ಕೆ ಪ್ರವೇಶ ಮಾಡ್ತಾರೆ ಎಂಬ ಸುದ್ದಿ ಹೊರಬಿದ್ದಿದೆ. ಇತ್ತೀಚಿಗಷ್ಟೆ ತೆರೆಕಂಡು ಸೂಪರ್ ಹಿಟ್ ಎನಿಸಿಕೊಂಡಿರುವ ತೆಲುಗು ಚಿತ್ರದ ರೀಮೇಕ್ನಲ್ಲಿ ವಿಜಯ್ ಪುತ್ರ ನಟಿಸುವ ಸಾಧ್ಯತೆ ಇದೆ. ಯಾವುದು ಆ ಚಿತ್ರ? ಮುಂದೆ ಓದಿ....
ಉಪ್ಪೇನಾ ರೀಮೇಕ್ನಲ್ಲಿ ವಿಜಯ್ ಪುತ್ರ?
ತೆಲುಗಿನಲ್ಲಿ ಕಳೆದ ವಾರವಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿರುವ ಉಪ್ಪೇನಾ ಚಿತ್ರವನ್ನು ತಮಿಳಿಗೆ ರೀಮೇಕ್ ಮಾಡುವ ಯೋಜನೆ ನಡೆಯುತ್ತಿದೆಯಂತೆ. ಸದ್ಯದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ, ಉಪ್ಪೇನಾ ತಮಿಳು ರೀಮೇಕ್ನಲ್ಲಿ ವಿಜಯ್ ಪುತ್ರ ಜೇಸನ್ ಸಂಜಯ್ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಯ್ ಸೇತುಪತಿ ನಟನೆ
ಸುಕುಮಾರ್ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡ್ತಿದ್ದ ಬಚ್ಚಿ ಬಾಬು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವೈಷ್ಣವ್ ತೇಜ್, ಕೃತಿ ಶೆಟ್ಟಿ ಹಾಗೂ ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ರೀಮೇಕ್ ಹಕ್ಕು ಪಡೆಯಲು ವಿಜಯ್ ಮುಂದಾಗಿದ್ದಾರೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ.
ವಿಜಯ್ ಮುಂದಿನ ಚಿತ್ರಕ್ಕೆ ಮಗ ನಿರ್ದೇಶಕ
ಮತ್ತೊಂದು ಕಡೆ ವಿಜಯ್ ನಟಿಸಲಿರುವ ಮುಂದಿನ ಚಿತ್ರಕ್ಕೆ ಮಗ ಜೇಸನ್ ಸಂಜಯ್ ನಿರ್ದೇಶನ ಮಾಡಲು ತಯಾರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ 65ನೇ ಚಿತ್ರ ಮುಗಿದ ಬಳಿಕ ಮಗನ ಚಿತ್ರದಲ್ಲಿ ವಿಜಯ್ ನಟಿಸುವ ಲೆಕ್ಕಾಚಾರ ಇದೆಯಂತೆ. ಆದ್ರೆ, ಈ ಸುದ್ದಿ ಅಧಿಕೃತವಾಗಿಲ್ಲ.

ತರಬೇತಿ ಪಡೆದು ಬಂದಿರುವ ಜೇಸನ್ ಸಂಜಯ್
ವಿಜಯ್ ಪುತ್ರ ಜೇಸನ್ ಸಂಜಯ್ ಕೆನಡಾದಲ್ಲಿ ತರಬೇತಿ ಪಡೆದು ಬಂದಿದ್ದಾರೆ. ಸಿನಿಮಾ ಕಲೆ, ತಂತ್ರಜ್ಞಾನದಲ್ಲಿ ಪದವಿ ಮುಗಿಸಿದ್ದಾರೆ. ಈಗ ವಿಜಯ್ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಲು ತೀರ್ಮಾನಿಸಿರುವ ಸಂಜಯ್ ನಂತರ ಸ್ವತಂತ್ರವಾಗಿ ನಿರ್ದೇಶನ ಮಾಡುವ ಕನಸು ಕಂಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm