ಬ್ರೇಕಿಂಗ್ ನ್ಯೂಸ್
25-02-21 11:03 am Source: FILMIBEAT ಸಿನಿಮಾ
ತಮಿಳು ಸೂಪರ್ ಸ್ಟಾರ್ ವಿಜಯ್ ನಟನೆಯ ಮಾಸ್ಟರ್ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿದೆ. ಬಾಕ್ಸ್ ಆಫೀಸ್ನಲ್ಲಿ ಸುಮಾರು 200 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ. ಮಾಸ್ಟರ್ ಸಕ್ಸಸ್ ಬಳಿಕ ವಿಜಯ್ ನೆಲ್ಸನ್ ದಿಲೀಪ್ ಕುಮಾರ್ ಜೊತೆ ಹೊಸ ಸಿನಿಮಾ ಆರಂಭಿಸಿದ್ದಾರೆ.
ಸದ್ಯಕ್ಕೆ 'ವಿಜಯ್ 65' ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಶೀಘ್ರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಸನ್ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕಲಿದ್ದು, ನಾಯಕಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಹೆಸರು ಚರ್ಚೆಯಲ್ಲಿದೆ. ಇದೀಗ, ವಿಜಯ್ ಪುತ್ರ ಚಿತ್ರರಂಗಕ್ಕೆ ಪ್ರವೇಶ ಮಾಡ್ತಾರೆ ಎಂಬ ಸುದ್ದಿ ಹೊರಬಿದ್ದಿದೆ. ಇತ್ತೀಚಿಗಷ್ಟೆ ತೆರೆಕಂಡು ಸೂಪರ್ ಹಿಟ್ ಎನಿಸಿಕೊಂಡಿರುವ ತೆಲುಗು ಚಿತ್ರದ ರೀಮೇಕ್ನಲ್ಲಿ ವಿಜಯ್ ಪುತ್ರ ನಟಿಸುವ ಸಾಧ್ಯತೆ ಇದೆ. ಯಾವುದು ಆ ಚಿತ್ರ? ಮುಂದೆ ಓದಿ....
ಉಪ್ಪೇನಾ ರೀಮೇಕ್ನಲ್ಲಿ ವಿಜಯ್ ಪುತ್ರ?
ತೆಲುಗಿನಲ್ಲಿ ಕಳೆದ ವಾರವಷ್ಟೇ ಬಿಡುಗಡೆಯಾಗಿ ಅದ್ಭುತ ಪ್ರದರ್ಶನ ಕಾಣುತ್ತಿರುವ ಉಪ್ಪೇನಾ ಚಿತ್ರವನ್ನು ತಮಿಳಿಗೆ ರೀಮೇಕ್ ಮಾಡುವ ಯೋಜನೆ ನಡೆಯುತ್ತಿದೆಯಂತೆ. ಸದ್ಯದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ, ಉಪ್ಪೇನಾ ತಮಿಳು ರೀಮೇಕ್ನಲ್ಲಿ ವಿಜಯ್ ಪುತ್ರ ಜೇಸನ್ ಸಂಜಯ್ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಯ್ ಸೇತುಪತಿ ನಟನೆ
ಸುಕುಮಾರ್ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡ್ತಿದ್ದ ಬಚ್ಚಿ ಬಾಬು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವೈಷ್ಣವ್ ತೇಜ್, ಕೃತಿ ಶೆಟ್ಟಿ ಹಾಗೂ ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ರೀಮೇಕ್ ಹಕ್ಕು ಪಡೆಯಲು ವಿಜಯ್ ಮುಂದಾಗಿದ್ದಾರೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ.
ವಿಜಯ್ ಮುಂದಿನ ಚಿತ್ರಕ್ಕೆ ಮಗ ನಿರ್ದೇಶಕ
ಮತ್ತೊಂದು ಕಡೆ ವಿಜಯ್ ನಟಿಸಲಿರುವ ಮುಂದಿನ ಚಿತ್ರಕ್ಕೆ ಮಗ ಜೇಸನ್ ಸಂಜಯ್ ನಿರ್ದೇಶನ ಮಾಡಲು ತಯಾರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ 65ನೇ ಚಿತ್ರ ಮುಗಿದ ಬಳಿಕ ಮಗನ ಚಿತ್ರದಲ್ಲಿ ವಿಜಯ್ ನಟಿಸುವ ಲೆಕ್ಕಾಚಾರ ಇದೆಯಂತೆ. ಆದ್ರೆ, ಈ ಸುದ್ದಿ ಅಧಿಕೃತವಾಗಿಲ್ಲ.

ತರಬೇತಿ ಪಡೆದು ಬಂದಿರುವ ಜೇಸನ್ ಸಂಜಯ್
ವಿಜಯ್ ಪುತ್ರ ಜೇಸನ್ ಸಂಜಯ್ ಕೆನಡಾದಲ್ಲಿ ತರಬೇತಿ ಪಡೆದು ಬಂದಿದ್ದಾರೆ. ಸಿನಿಮಾ ಕಲೆ, ತಂತ್ರಜ್ಞಾನದಲ್ಲಿ ಪದವಿ ಮುಗಿಸಿದ್ದಾರೆ. ಈಗ ವಿಜಯ್ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಲು ತೀರ್ಮಾನಿಸಿರುವ ಸಂಜಯ್ ನಂತರ ಸ್ವತಂತ್ರವಾಗಿ ನಿರ್ದೇಶನ ಮಾಡುವ ಕನಸು ಕಂಡಿದ್ದಾರೆ.
This News Article is a Copy of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm