ಬ್ರೇಕಿಂಗ್ ನ್ಯೂಸ್
27-02-21 11:09 am Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್, ಶ್ರೀಮುರಳಿ, ವಿಷ್ಣುವರ್ಧನ್ ಜೊತೆ ನಟಿಸಿದ್ದ ಸ್ಯಾಂಡಲ್ ವುಡ್ ನ ಖ್ಯಾತ ನಟಿ ಮಾನ್ಯಾ ಪಾರ್ಶ್ವವಾಯುಯಿಂದ ಬಳಲುತ್ತಿದ್ದಾರೆ. ಶಾಸ್ತ್ರಿ ಸಿನಿಮಾ ಮೂಲಕ ಕನ್ನಡಿಗರ ಮನೆಗೆದ್ದಿದ್ದ ನಟಿ ಮಾನ್ಯಾ, ಸಿನಿಮಾರಂಗದಿಂದ ದೂರ ಸರಿದು ಅನೇಕ ವರ್ಷಗಳಾಗಿದೆ. ಸದ್ಯ ಅಮೆರಿಕಾದಲ್ಲಿ ವಾಸಿಸುತ್ತಿರುವ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ.
ಅನಾರೋಗ್ಯಕ್ಕೆ ತುತ್ತಾದ ಬಗ್ಗೆ ನಟಿ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ತನಗೆ ಕುಳಿತುಕೊಳ್ಳಲು, ಮಲಗಲು, ನಡೆಯಲು ಆಗುತ್ತಿಲ್ಲ ಎಂದು ತನ್ನ ಕಷ್ಟವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಮತ್ತೆ ಮಾಮೂಲಿ ಸ್ಥಿತಿಗೆ ಬರುತ್ತೇನೆ, ಮತ್ತೆ ಡಾನ್ಸ್ ಮಾಡುತ್ತೇನೆ ಎನ್ನುವ ಬರವಸೆ ನೀಡಿದ್ದಾರೆ. ತನ್ನ ನೋವಿನ ಬಗ್ಗೆ ಮಾನ್ಯಾ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾಗಿ ಬರೆದುಕೊಂಡಿದ್ದಾರೆ. ಮುಂದೆ ಓದಿ..

ಎಡ ಕಾಲು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ
'ಮೂರು ವಾರಗಳ ಹಿಂದೆ ನಾನು ಗಾಯಗೊಂಡಿದ್ದೆ. ಬಳಿಕ ನನ್ನ ಎಡಭಾಗ ಪಾರ್ಶ್ವವಾಯುಗೆ ಸುತ್ತಾಯಿತು. ನನ್ನ ಎಡಗಾಲು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ನಾನು ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯಬೇಕಾಯಿತು.

ಕುಳಿತುಕೊಳ್ಳಲು, ಮಲಗಲು ಆಗುತ್ತಿಲ್ಲ
'ನನ್ನ ಬೆನ್ನಿಗೆ ಸ್ಟೀರಾಯ್ಡ್ ಚುಚ್ಚುಮದ್ದು ನೀಡಲಾಗಿದೆ. ಕೋವಿಡ್ ಕಾರಣದಿಂದ ಯಾರಿಗೂ ಪ್ರವೇಶ ನೀಡುತ್ತಿಲ್ಲ. ನಾನು ಒಬ್ಬೊಂಟಿಯಾಗಿದ್ದೀನಿ. ನಾನು ಬೇಗನೆ ಗುಣಮುಖಳಾಗುತ್ತೇನೆ ಎಂದು ಭಾವಿಸುದ್ದೇನೆ. ಮೂರು ವಾರಗಳಿಂದ ನನಗೆ ಕುಳಿತುಕೊಳ್ಳಲು, ನಡೆಯಲು, ಮಲಗಲು ಆಗುತ್ತಿಲ್ಲ. ಆದರೆ ಮತ್ತೆ ನಾನು ಮೊದಲಿನ ಸ್ಥಿತಿಗೆ ಬರಲು ಪ್ರಯತ್ನಿಸುತ್ತಿದೀನಿ.'

ಮಾಮೂಲಿ ಸ್ಥಿತಿಗೆ ಬರುತ್ತೇನೆ ಎಂದ ಮಾನ್ಯಾ
'ನಾನು ಮತ್ತೆ ಡಾನ್ಸ್ ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದೆ. ಆದರೆ ವೈದ್ಯರು ನಿಧಾನವಾಗಿ ಚೇತರಿಸಿಕೊಂಡ ಬಳಿಕ ಮತ್ತೆ ಡಾನ್ಸ್ ಮಾಡಬಹುದು ಎಂದು ಹೇಳಿದ್ದಾರೆ. ನಾನು ನಿಧಾನವಾಗಿ ಗುಣಮುಖಳಾಗುತ್ತಿದ್ದೀನಿ ಇದಕ್ಕೆ ದೇವರಿಗೆ ಧನ್ಯವಾದ ತಿಳಿಸುತ್ತೇನೆ' ಎಂದು ದೀರ್ಘವಾಗಿ ಬರೆದುಕೊಂಡಿದ್ದಾರೆ.

ಮತ್ತೆ ಡಾನ್ಸ್ ಮಾಡುತ್ತೇನೆ-ಮಾನ್ಯಾ
'ನಿಮ್ಮನ್ನು ನೀವು ಯಾವತ್ತು ಬಿಟ್ಟುಕೊಡಬೇಡಿ. ಪ್ರತಿಯೊಂದು ಚಿಕ್ಕ ವಿಚಾರಕ್ಕೂ ಹೋರಾಟ ಮಾಡಿ. ನಿಮ್ಮನ್ನು ಬಲಪಡಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಆ ಸಮಯದಲ್ಲಿ ನಾನು ತುಂಬಾ ನೊಂದಿದ್ದೆ. ತುಂಬಾ ಅತ್ತಿದ್ದೇನೆ. ಆದರೆ ಗೆದ್ದು ಬರುತ್ತೇನೆ. ಮತ್ತೆ ನಾನು ಡಾನ್ಸ್ ಮಾಡುತ್ತೇನೆ' ಎಂದು ಬರೆದುಕೊಂಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm