ಬ್ರೇಕಿಂಗ್ ನ್ಯೂಸ್
27-02-21 05:09 pm Source: FILMIBEAT ಸಿನಿಮಾ
ರಿಯಲ್ ಸ್ಟಾರ್ ಉಪೇಂದ್ರ ಸದ್ಯ ತೆಲುಗಿನ ಗನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ವರುಣ್ ತೇಜ್ ನಟನೆಯ ಸಿನಿಮಾ ಇದಾಗಿದ್ದು, ಇತ್ತೀಚಿಗಷ್ಟೆ ಗನಿ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರದಲ್ಲಿ ವರುಣ್ ತೇಜ್ ಬಾಕ್ಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಉಪೇಂದ್ರ ಸದ್ಯ ಹೈದಬಾದ್ ನಲ್ಲಿ ಚಿತ್ರೀಕರಣದಲ್ಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಗಿಸಿ ರಿಯಲ್ ಸ್ಟಾರ್ ಬಹುನಿರೀಕ್ಷೆಯ ಕಬ್ಜ ಸಿನಿಮಾ ಸೇರಿಕೊಳ್ಳಲಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ಈಗಾಗಲೇ ಸಾಕಷ್ಟು ಚಿತ್ರೀಕರಣ ಮಾಡಿ ಮುಗಿಸಿದೆ ಸಿನಿಮಾತಂಡ.
ವರುಣ್ ತೇಜ ಜೊತೆ ತೆಲುಗು ಸಿನಿಮಾದ ಚಿತ್ರೀಕರಣ ಆರಂಭಿಸಿದ ಉಪೇಂದ್ರ.
ಸದ್ಯ ಮಾರ್ಚ್ 3ರಿಂದ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡುತ್ತಿದೆ ಸಿನಿಮಾತಂಡ. ಚಿತ್ರದ ಜೈಲು ದೃಶ್ಯವನ್ನು ಸೆರೆಹಿಡಿಯಲು ಸಿನಿಮಾತಂಡ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಸೆಟ್ ನಿರ್ಮಾಣ ಮಾಡಲಾಗಿದ್ದು, ಕಲಾ ನಿರ್ದೇಶಕ ಶಿವ ಕುಮಾರ್ ಸೆಟ್ ಡಿಸೈನ್ ಮಾಡಿದ್ದಾರೆ.

ಅಂದಹಾಗೆ ಕಬ್ಜ ಸಿನಿಮಾ ಈ ಭಾಗದ ಚಿತ್ರೀಕರಣ ಸುಮಾರು 2 ತಿಂಗಳು ನಡೆಯಲಿದೆಯಂತೆ. ಆಕ್ಷನ್ ದೃಶ್ಯ ಮತ್ತು ಟಾಕಿ ಭಾಗವನ್ನು ಸುಮಾರು 2 ತಿಂಗಳು ಚಿತ್ರೀಕರಣ ಮಾಡಲು ಸಿನಿಮಾತಂಡ ನಿರ್ಧರಿಸಿದೆ ಎನ್ನಲಾಗಿದೆ. ಚಿತ್ರದಲ್ಲಿ ಕಬೀರ್ ದುಹಾನ್ ಸಿಂಗ್, ಕೋಟಾ ಶ್ರೀನಿವಾಸ್ ಸೇರಿದಂತೆ ಸಾಕಷ್ಟು ಕಲಾವಿದರು ಸೇರಿಕೊಳ್ಳುತ್ತಿದ್ದಾರೆ.
ಕಬ್ಜ ಭೂಗತ ಲೋಕದ ಕತೆಯಾಗಿದ್ದು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಮತ್ತೊಂದು ಹೈಲೆಟ್ ಎಂದರೆ ಕಿಚ್ಚ ಸುದೀಪ್. ಚಿತ್ರದಲ್ಲಿ ಸುದೀಪ್ ಭಾರ್ಗವ ಭಕ್ಷಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸುದೀಪ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳ ಮನಗೆದ್ದಿದೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಬಹುನಿರೀಕ್ಷೆಯ ಕನ್ನಡ ಸಿನಿಮಾ ಕಬ್ಜ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಇನ್ನೂ ಸಾಕಷ್ಟು ಭಾಷೆಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾ ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ.
This News Article Is A Copy Of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm