ಬ್ರೇಕಿಂಗ್ ನ್ಯೂಸ್
01-03-21 11:03 am Source: FILMIBEAT ಸಿನಿಮಾ
ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ.
ಕಾರ್ಯಕ್ರಮದಲ್ಲಿ ತಮ್ಮ ಎಂದಿನ ಲಹರಿಯಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ದರ್ಶನ್, ಉತ್ತರ ಕರ್ನಾಟಕದ ಜನರ ಮೇಲೆ ಮಾತಲ್ಲೇ ಪ್ರೀತಿಯ ಮಳೆಗರದರು.
ವೇದಿಕೆ ಮೇಲೆ ಚಪ್ಪಲಿ ಬಿಟ್ಟು ಮಾತು ಆರಂಭಿಸಿದ ದರ್ಶನ್, 'ಇದು ನಾನು ಉತ್ತರ ಕರ್ನಾಟಕ ಜನರಿಗೆ ನೀಡುತ್ತಿರುವ ಗೌರವ. ಅವರೊಟ್ಟಿಗೆ ಮಾತನಾಡಬೇಕೆಂದರೆ ಚಪ್ಪಲಿ ಬಿಟ್ಟು, ಕೈ ಮುಗಿದು ಮಾತನಾಡಬೇಕು' ಎಂದರು ದರ್ಶನ್.
'ಸಂಗೊಳ್ಳಿ ರಾಯಣ್ಣ' ಸಿನಿಮಾದ ಪ್ರಚಾರ, ವಿಜಯ ಯಾತ್ರೆ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ಬಂದಿದ್ದ, ಜವಾರಿ ಮಂದಿ ತೋರಿದ್ದ ಪ್ರೀತಿ, ಗೌರವ ನೆನದು ಭಾವುಕರಾದ ದರ್ಶನ್. ಉತ್ತರ ಕರ್ನಾಟಕದೊಂದಿಗೆ ತಮ್ಮ ತಂದೆಗೆ ಇದ್ದ ನಂಟಿನ ಬಗ್ಗೆಯೂ ಹೇಳಿದರು.
ಇದೇ ಸಮಯದಲ್ಲಿ ಅಭಿಮಾನಿಗಳಿಗೆ ಕಿವಿ ಮಾತನ್ನೂ ಹೇಳಿದ ದರ್ಶನ್, 'ನಾನು ಕಾರಿನಲ್ಲಿ ಹೋಗುವಾಗ ದಯವಿಟ್ಟು ಬೈಕ್ಗಳಲ್ಲಿ ಕಾರನ್ನು ಹಿಂಬಾಲಿಸಬೇಡಿ. ಮೊಬೈಲ್ ಹಿಡಿದುಕೊಂಡು ಕಾರನ್ನು ಹಿಂಬಾಲಿಸುತ್ತೀರ. ಯಾರಿಗಾದರೂ ಏನಾದರು ಹೆಚ್ಚು-ಕಡಿಮೆ ಆದರೆ ನಿಮ್ಮ ಕುಟುಂಬದವರು ಜೀವನಪರ್ಯಂತ ನನ್ನನ್ನು ದೂಷಿಸುತ್ತಾರೆ. ದಯವಿಟ್ಟು ಆ ಕೆಲಸ ಮಾಡಬೇಡಿ' ಎಂದು ಮನವಿ ಮಾಡಿದರು ದರ್ಶನ್.
'ರಾಬರ್ಟ್' ಸಿನಿಮಾವನ್ನು ಕಷ್ಟಪಟ್ಟು ಮಾಡಿದ್ದೇವೆ ಎಂದು ದರ್ಶನ್, ಈ ಸಿನಿಮಾಕ್ಕೂ ನಿಮ್ಮೆಲ್ಲರ ಆಶೀರ್ವಾದ, ಸಹಕಾರ ಅತ್ಯವ್ಯಕ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್. ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಿತರೆ ಸಿನಿಮಾರಂಗದ ಗಣ್ಯರಿಗೆ ಧನ್ಯವಾದ ಹೇಳಿದ ನಟ ದರ್ಶನ್, ವೇದಿಕೆ ಮುಂದಿದ್ದ ತನ್ನ ಆತ್ಮೀಯ ನಟ-ನಟಿಯರನ್ನು ತಮ್ಮದೇ ಸ್ಟೈಲ್ನಲ್ಲಿ ಚೇಡಿಸಿ ರಂಜಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್. ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಿತರೆ ಸಿನಿಮಾರಂಗದ ಗಣ್ಯರಿಗೆ ಧನ್ಯವಾದ ಹೇಳಿದ ನಟ ದರ್ಶನ್, ವೇದಿಕೆ ಮುಂದಿದ್ದ ತನ್ನ ಆತ್ಮೀಯ ನಟ-ನಟಿಯರನ್ನು ತಮ್ಮದೇ ಸ್ಟೈಲ್ನಲ್ಲಿ ಚೇಡಿಸಿ ರಂಜಿಸಿದರು.
ಅಭಿಮಾನಿಗಳಿಗೆ, ಉತ್ತರ ಕರ್ನಾಟಕದ ಜನರಿಗೆ ಪದೇ-ಪದೇ ಧನ್ಯವಾದ ಹೇಳಿದ ದರ್ಶನ್, ನನ್ನನ್ನು ಇಷ್ಟು ದಿನ ಸಹಿಸಿಕೊಂಡಿದ್ದೀರಿ. ನಿಮ್ಮ ಆಶೀರ್ವಾದ ಇದ್ದರೆ ಇನ್ನೂ ಕೆಲವು ವರ್ಷ ನಿಮ್ಮನ್ನು ರಂಜಿಸುತ್ತಿರುತ್ತೇನೆ ಎಂದರು ದರ್ಶನ್.
'ರಾಬರ್ಟ್' ಸಿನಿಮಾದಲ್ಲಿ ಕೆಲಸ ಮಾಡಿದ ನಟ ದೇವರಾಜ್, ಜಗಪತಿ ಬಾಬು, ರವಿಶಂಕರ್, ನಟಿ ಆಶಾ ಭಟ್ , ನಿರ್ದೇಶಕ ತರುಣ್ ಸುಧೀರ್, ವಿನೋದ್ ಪ್ರಭಾಕರ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಎಲ್ಲರಿಗೂ ಧನ್ಯವಾದ ಅರ್ಪಿಸಿದರು ದರ್ಶನ್.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm