ಬ್ರೇಕಿಂಗ್ ನ್ಯೂಸ್
01-03-21 11:03 am Source: FILMIBEAT ಸಿನಿಮಾ
ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ.
ಕಾರ್ಯಕ್ರಮದಲ್ಲಿ ತಮ್ಮ ಎಂದಿನ ಲಹರಿಯಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ದರ್ಶನ್, ಉತ್ತರ ಕರ್ನಾಟಕದ ಜನರ ಮೇಲೆ ಮಾತಲ್ಲೇ ಪ್ರೀತಿಯ ಮಳೆಗರದರು.
ವೇದಿಕೆ ಮೇಲೆ ಚಪ್ಪಲಿ ಬಿಟ್ಟು ಮಾತು ಆರಂಭಿಸಿದ ದರ್ಶನ್, 'ಇದು ನಾನು ಉತ್ತರ ಕರ್ನಾಟಕ ಜನರಿಗೆ ನೀಡುತ್ತಿರುವ ಗೌರವ. ಅವರೊಟ್ಟಿಗೆ ಮಾತನಾಡಬೇಕೆಂದರೆ ಚಪ್ಪಲಿ ಬಿಟ್ಟು, ಕೈ ಮುಗಿದು ಮಾತನಾಡಬೇಕು' ಎಂದರು ದರ್ಶನ್.
'ಸಂಗೊಳ್ಳಿ ರಾಯಣ್ಣ' ಸಿನಿಮಾದ ಪ್ರಚಾರ, ವಿಜಯ ಯಾತ್ರೆ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ಬಂದಿದ್ದ, ಜವಾರಿ ಮಂದಿ ತೋರಿದ್ದ ಪ್ರೀತಿ, ಗೌರವ ನೆನದು ಭಾವುಕರಾದ ದರ್ಶನ್. ಉತ್ತರ ಕರ್ನಾಟಕದೊಂದಿಗೆ ತಮ್ಮ ತಂದೆಗೆ ಇದ್ದ ನಂಟಿನ ಬಗ್ಗೆಯೂ ಹೇಳಿದರು.
ಇದೇ ಸಮಯದಲ್ಲಿ ಅಭಿಮಾನಿಗಳಿಗೆ ಕಿವಿ ಮಾತನ್ನೂ ಹೇಳಿದ ದರ್ಶನ್, 'ನಾನು ಕಾರಿನಲ್ಲಿ ಹೋಗುವಾಗ ದಯವಿಟ್ಟು ಬೈಕ್ಗಳಲ್ಲಿ ಕಾರನ್ನು ಹಿಂಬಾಲಿಸಬೇಡಿ. ಮೊಬೈಲ್ ಹಿಡಿದುಕೊಂಡು ಕಾರನ್ನು ಹಿಂಬಾಲಿಸುತ್ತೀರ. ಯಾರಿಗಾದರೂ ಏನಾದರು ಹೆಚ್ಚು-ಕಡಿಮೆ ಆದರೆ ನಿಮ್ಮ ಕುಟುಂಬದವರು ಜೀವನಪರ್ಯಂತ ನನ್ನನ್ನು ದೂಷಿಸುತ್ತಾರೆ. ದಯವಿಟ್ಟು ಆ ಕೆಲಸ ಮಾಡಬೇಡಿ' ಎಂದು ಮನವಿ ಮಾಡಿದರು ದರ್ಶನ್.
'ರಾಬರ್ಟ್' ಸಿನಿಮಾವನ್ನು ಕಷ್ಟಪಟ್ಟು ಮಾಡಿದ್ದೇವೆ ಎಂದು ದರ್ಶನ್, ಈ ಸಿನಿಮಾಕ್ಕೂ ನಿಮ್ಮೆಲ್ಲರ ಆಶೀರ್ವಾದ, ಸಹಕಾರ ಅತ್ಯವ್ಯಕ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್. ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಿತರೆ ಸಿನಿಮಾರಂಗದ ಗಣ್ಯರಿಗೆ ಧನ್ಯವಾದ ಹೇಳಿದ ನಟ ದರ್ಶನ್, ವೇದಿಕೆ ಮುಂದಿದ್ದ ತನ್ನ ಆತ್ಮೀಯ ನಟ-ನಟಿಯರನ್ನು ತಮ್ಮದೇ ಸ್ಟೈಲ್ನಲ್ಲಿ ಚೇಡಿಸಿ ರಂಜಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್. ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಿತರೆ ಸಿನಿಮಾರಂಗದ ಗಣ್ಯರಿಗೆ ಧನ್ಯವಾದ ಹೇಳಿದ ನಟ ದರ್ಶನ್, ವೇದಿಕೆ ಮುಂದಿದ್ದ ತನ್ನ ಆತ್ಮೀಯ ನಟ-ನಟಿಯರನ್ನು ತಮ್ಮದೇ ಸ್ಟೈಲ್ನಲ್ಲಿ ಚೇಡಿಸಿ ರಂಜಿಸಿದರು.
ಅಭಿಮಾನಿಗಳಿಗೆ, ಉತ್ತರ ಕರ್ನಾಟಕದ ಜನರಿಗೆ ಪದೇ-ಪದೇ ಧನ್ಯವಾದ ಹೇಳಿದ ದರ್ಶನ್, ನನ್ನನ್ನು ಇಷ್ಟು ದಿನ ಸಹಿಸಿಕೊಂಡಿದ್ದೀರಿ. ನಿಮ್ಮ ಆಶೀರ್ವಾದ ಇದ್ದರೆ ಇನ್ನೂ ಕೆಲವು ವರ್ಷ ನಿಮ್ಮನ್ನು ರಂಜಿಸುತ್ತಿರುತ್ತೇನೆ ಎಂದರು ದರ್ಶನ್.
'ರಾಬರ್ಟ್' ಸಿನಿಮಾದಲ್ಲಿ ಕೆಲಸ ಮಾಡಿದ ನಟ ದೇವರಾಜ್, ಜಗಪತಿ ಬಾಬು, ರವಿಶಂಕರ್, ನಟಿ ಆಶಾ ಭಟ್ , ನಿರ್ದೇಶಕ ತರುಣ್ ಸುಧೀರ್, ವಿನೋದ್ ಪ್ರಭಾಕರ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಎಲ್ಲರಿಗೂ ಧನ್ಯವಾದ ಅರ್ಪಿಸಿದರು ದರ್ಶನ್.
This News Article Is A Copy Of FILMIBEAT
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm