ಬ್ರೇಕಿಂಗ್ ನ್ಯೂಸ್
03-03-21 09:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ರಜಪೂತ್ ಹಾಗೂ ರಿಯಾ ಚಕ್ರವರ್ತಿ ಪರಸ್ಪರ ಪ್ರೇಮದಲ್ಲಿದ್ದಾಗ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಲು ತಯಾರಾಗಿದ್ದರು. ಕತೆ, ನಿರ್ಮಾಪಕರೂ ಓಕೆ ಆಗಿದ್ದರು. ಆದರೆ ಸಿನಿಮಾ ಸೆಟ್ಟೇರುವ ಹೊತ್ತಿಗೆ ಲಾಕ್ಡೌನ್ ಆಯಿತು, ಆ ನಂತರ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾದರು.
ಆದರೆ ಆಗ ನಿಂತಿದ್ದ ಸುಶಾಂತ್ ಸಿಂಗ್-ರಿಯಾ ಚಕ್ರವರ್ತಿ ಸಿನಿಮಾ ಈಗ ಮತ್ತೆ ಪ್ರಾರಂಭವಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಬದಲಿಗೆ ಬೇರೊಬ್ಬ ನಾಯಕನನ್ನು ಹಾಕಿಕೊಂಡು ಸಿನಿಮಾ ಮಾಡುವುದಾಗಿ ಹೇಳಿದ್ದಾರೆ ನಿರ್ದೇಶಕರು.
ರಿಯಾ ಜೊತೆಗೆ ಈಗಾಗಲೇ 'ಚೆಹರೆ' ಸಿನಿಮಾ ಮಾಡಿರುವ ನಿರ್ದೇಶಕ ರೂಮಿ ಜಫ್ರಿ, ರಿಯಾ ಜೊತೆ ಮತ್ತೊಂದು ಸಿನಿಮಾ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಿನಿಮಾದ ಕತೆಯೂ ಈಗಾಗಲೇ ತಯಾರಾಗಿದ್ದು, ನಾಯಕ-ನಾಯಕಿ ಪಾತ್ರವೂ ಸಹ ಅಂತಿಮವಾಗಿದೆಯಂತೆ.
ಸುಶಾಂತ್ ಸಿಂಗ್ ಹಾಗೂ ರಿಯಾ ಚಕ್ರವರ್ತಿ ಅವರೊಟ್ಟಿಗೆ ಲಾಕ್ಡೌನ್ ಗೂ ಮೊದಲೇ ಸಿನಿಮಾ ಯೋಜನೆ ಆಗಿತ್ತು. ಲಂಡನ್ನಲ್ಲಿ ನಡೆಯುವ ಪ್ರೇಮಕತಾ ಸಿನಿಮಾವನ್ನು ನಿರ್ಮಿಸುವ ಯೋಜನೆ ಮಾಡಿ ಇಬ್ಬರಿಗೂ ಕತೆ ಹೇಳಿ, ಅವರೂ ಸಹ ಒಪ್ಪಿಕೊಂಡಿದ್ದರು. ಆದರೆ ಈ ಲಾಕ್ಡೌನ್ ನಲ್ಲಿಯೇ ಬೇರೆಯೇ ನಡೆಯಿತು' ಎಂದಿದ್ದಾರೆ ರೂಮಿ ಜಫ್ರಿ.
ಸುಶಾಂತ್ ಸಿಂಗ್ ನಟಿಸಬೇಕಿದ್ದ ಸ್ಥಾನಕ್ಕೆ ಪ್ರತಿಭಾವಂತ ಸ್ಟಾರ್ ನಟನನ್ನೇ ಆಯ್ಕೆ ಮಾಡಿದ್ದಾರಂತೆ ರೂಮಿ. ಆದರೆ ಆ ನಾಯಕ ಯಾರು ಎಂದು ಮಾಧ್ಯಮಗಳ ಮುಂದೆ ಹೇಳಿಲ್ಲ. ಬದಲಿಗೆ ರಿಯಾ ಜೊತೆ ಕೆಲಸ ಮಾಡಲು ಆ ನಟನಿಗೆ ಬಹಳ ಇಷ್ಟವಿರುವುದಾಗಿ ಮಾತ್ರ ಹೇಳಿದ್ದಾರೆ. ನಾನು ಆ ನಟನಿಗೆ ಕತೆ ಹೇಳಿ ರಿಯಾ ಚಕ್ರವರ್ತಿ ನಾಯಕಿ ಎಂದು ಹೇಳಿದಾಗ, 'ನನಗೂ ಆಕೆಯೊಂದಿಗೆ ನಟಿಸಲು ಇಷ್ಟವಿದೆ.
ಆಕೆ ಸುಂದರ ಹಾಗೂ ಪ್ರತಿಭಾವಂತ ಹುಡುಗಿ. ಆಕೆ ಜಾಮೀನಿನ ಮೇಲಿದ್ದರೂ ನನಗೆ ಆಕೆಯೊಂದಿಗೆ ನಟಿಸಲು ಅಡ್ಡಿಯಿಲ್ಲ. ಸಂಜಯ್ ದತ್ ಸಹ ಜಾಮೀನಿನ ಮೇಲಿದ್ದಾಗ ಎಷ್ಟೋಂದು ಸಿನಿಮಾಗಳನ್ನು ಮಾಡಿದರು' ಎಂದು ಆ ನಟ ಹೇಳಿದ್ದಾರಂತೆ. ರಿಯಾ ಚಕ್ರವರ್ತಿ, ಅಮಿತಾಬ್ ಬಚ್ಚನ್, ಇಮ್ರಾನ್ ಅಶ್ಮಿ ಇನ್ನೂ ಹಲವರು ನಟಿಸಿರುವ 'ಚೆಹ್ರೆ' ಸಿನಿಮಾವು ಏಪ್ರಿಲ್ 30 ರಂದು ಬಿಡುಗಡೆ ಆಗುತ್ತಿದ್ದು, ಆ ಸಿನಿಮಾದ ಬಿಡುಗಡೆ ನಂತರ ರಿಯಾ ನಾಯಕಿಯಾಗಿರುವ ಹೊಸ ಸಿನಿಮಾ ಸೆಟ್ಟೇರಲಿದೆ. ಸಿನಿಮಾದ ನಿರ್ಮಾಣವನ್ನು ವಶು ಭಗ್ನಾನಿ ಮಾಡಲಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm