ಬ್ರೇಕಿಂಗ್ ನ್ಯೂಸ್
03-03-21 09:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ರಜಪೂತ್ ಹಾಗೂ ರಿಯಾ ಚಕ್ರವರ್ತಿ ಪರಸ್ಪರ ಪ್ರೇಮದಲ್ಲಿದ್ದಾಗ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಲು ತಯಾರಾಗಿದ್ದರು. ಕತೆ, ನಿರ್ಮಾಪಕರೂ ಓಕೆ ಆಗಿದ್ದರು. ಆದರೆ ಸಿನಿಮಾ ಸೆಟ್ಟೇರುವ ಹೊತ್ತಿಗೆ ಲಾಕ್ಡೌನ್ ಆಯಿತು, ಆ ನಂತರ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾದರು.
ಆದರೆ ಆಗ ನಿಂತಿದ್ದ ಸುಶಾಂತ್ ಸಿಂಗ್-ರಿಯಾ ಚಕ್ರವರ್ತಿ ಸಿನಿಮಾ ಈಗ ಮತ್ತೆ ಪ್ರಾರಂಭವಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಬದಲಿಗೆ ಬೇರೊಬ್ಬ ನಾಯಕನನ್ನು ಹಾಕಿಕೊಂಡು ಸಿನಿಮಾ ಮಾಡುವುದಾಗಿ ಹೇಳಿದ್ದಾರೆ ನಿರ್ದೇಶಕರು.
ರಿಯಾ ಜೊತೆಗೆ ಈಗಾಗಲೇ 'ಚೆಹರೆ' ಸಿನಿಮಾ ಮಾಡಿರುವ ನಿರ್ದೇಶಕ ರೂಮಿ ಜಫ್ರಿ, ರಿಯಾ ಜೊತೆ ಮತ್ತೊಂದು ಸಿನಿಮಾ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಿನಿಮಾದ ಕತೆಯೂ ಈಗಾಗಲೇ ತಯಾರಾಗಿದ್ದು, ನಾಯಕ-ನಾಯಕಿ ಪಾತ್ರವೂ ಸಹ ಅಂತಿಮವಾಗಿದೆಯಂತೆ.
ಸುಶಾಂತ್ ಸಿಂಗ್ ಹಾಗೂ ರಿಯಾ ಚಕ್ರವರ್ತಿ ಅವರೊಟ್ಟಿಗೆ ಲಾಕ್ಡೌನ್ ಗೂ ಮೊದಲೇ ಸಿನಿಮಾ ಯೋಜನೆ ಆಗಿತ್ತು. ಲಂಡನ್ನಲ್ಲಿ ನಡೆಯುವ ಪ್ರೇಮಕತಾ ಸಿನಿಮಾವನ್ನು ನಿರ್ಮಿಸುವ ಯೋಜನೆ ಮಾಡಿ ಇಬ್ಬರಿಗೂ ಕತೆ ಹೇಳಿ, ಅವರೂ ಸಹ ಒಪ್ಪಿಕೊಂಡಿದ್ದರು. ಆದರೆ ಈ ಲಾಕ್ಡೌನ್ ನಲ್ಲಿಯೇ ಬೇರೆಯೇ ನಡೆಯಿತು' ಎಂದಿದ್ದಾರೆ ರೂಮಿ ಜಫ್ರಿ.
ಸುಶಾಂತ್ ಸಿಂಗ್ ನಟಿಸಬೇಕಿದ್ದ ಸ್ಥಾನಕ್ಕೆ ಪ್ರತಿಭಾವಂತ ಸ್ಟಾರ್ ನಟನನ್ನೇ ಆಯ್ಕೆ ಮಾಡಿದ್ದಾರಂತೆ ರೂಮಿ. ಆದರೆ ಆ ನಾಯಕ ಯಾರು ಎಂದು ಮಾಧ್ಯಮಗಳ ಮುಂದೆ ಹೇಳಿಲ್ಲ. ಬದಲಿಗೆ ರಿಯಾ ಜೊತೆ ಕೆಲಸ ಮಾಡಲು ಆ ನಟನಿಗೆ ಬಹಳ ಇಷ್ಟವಿರುವುದಾಗಿ ಮಾತ್ರ ಹೇಳಿದ್ದಾರೆ. ನಾನು ಆ ನಟನಿಗೆ ಕತೆ ಹೇಳಿ ರಿಯಾ ಚಕ್ರವರ್ತಿ ನಾಯಕಿ ಎಂದು ಹೇಳಿದಾಗ, 'ನನಗೂ ಆಕೆಯೊಂದಿಗೆ ನಟಿಸಲು ಇಷ್ಟವಿದೆ.
ಆಕೆ ಸುಂದರ ಹಾಗೂ ಪ್ರತಿಭಾವಂತ ಹುಡುಗಿ. ಆಕೆ ಜಾಮೀನಿನ ಮೇಲಿದ್ದರೂ ನನಗೆ ಆಕೆಯೊಂದಿಗೆ ನಟಿಸಲು ಅಡ್ಡಿಯಿಲ್ಲ. ಸಂಜಯ್ ದತ್ ಸಹ ಜಾಮೀನಿನ ಮೇಲಿದ್ದಾಗ ಎಷ್ಟೋಂದು ಸಿನಿಮಾಗಳನ್ನು ಮಾಡಿದರು' ಎಂದು ಆ ನಟ ಹೇಳಿದ್ದಾರಂತೆ. ರಿಯಾ ಚಕ್ರವರ್ತಿ, ಅಮಿತಾಬ್ ಬಚ್ಚನ್, ಇಮ್ರಾನ್ ಅಶ್ಮಿ ಇನ್ನೂ ಹಲವರು ನಟಿಸಿರುವ 'ಚೆಹ್ರೆ' ಸಿನಿಮಾವು ಏಪ್ರಿಲ್ 30 ರಂದು ಬಿಡುಗಡೆ ಆಗುತ್ತಿದ್ದು, ಆ ಸಿನಿಮಾದ ಬಿಡುಗಡೆ ನಂತರ ರಿಯಾ ನಾಯಕಿಯಾಗಿರುವ ಹೊಸ ಸಿನಿಮಾ ಸೆಟ್ಟೇರಲಿದೆ. ಸಿನಿಮಾದ ನಿರ್ಮಾಣವನ್ನು ವಶು ಭಗ್ನಾನಿ ಮಾಡಲಿದ್ದಾರೆ.
This News Article Is A Copy Of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm