ಬ್ರೇಕಿಂಗ್ ನ್ಯೂಸ್
04-03-21 05:07 pm Source: FILMIBEAT ಸಿನಿಮಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ಎಲ್ಲ ತಯಾರಿ ನಡೆಯುತ್ತಿದೆ.
ಏಪ್ರಿಲ್ 1ಕ್ಕೆ ಯುವರತ್ನ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಲಿದೆ. ಪೊಗರು ಅಬ್ಬರ ನೋಡಿದ್ದಾಯಿತು, ರಾಬರ್ಟ್ ಘರ್ಜನೆ ನಡೆಯಬೇಕಿದೆ. ಡಿ ಬಾಸ್ ಎಂಟ್ರಿ ಮುಗಿದ ತಕ್ಷಣ ಚಿತ್ರಮಂದಿರಗಳಲ್ಲಿ ಪವರ್ ಸ್ಟಾರ್ ಆಗಮನವಾಗಲಿದೆ.
ಕೊರೊನಾದಿಂದ ಸುಧಾರಿಸಿಕೊಳ್ಳುತ್ತಿರುವ ಚಿತ್ರರಂಗ, ಒಬ್ಬರಿಂದ ಒಬ್ಬರಿಗೆ ತೊಂದರೆಯಾಗದಂತೆ ರಿಲೀಸ್ ದಿನಾಂಕ ನಿರ್ಧರಿಸಿದೆ. ಪ್ರತಿ ಸ್ಟಾರ್ ಸಿನಿಮಾಗಳಿಗೂ ಎರಡು ವಾರಗಳಂತೆ ಅಂತರ ಕಾಪಾಡಿಕೊಳ್ಳಲಾಗಿದೆ.
ಮಾರ್ಚ್ 11ಕ್ಕೆ ರಾಬರ್ಟ್ ಎಂಟ್ರಿ, ನಂತರ ಏಪ್ರಿಲ್ 1ಕ್ಕೆ ಯುವರತ್ನ ಬಿಡುಗಡೆಯಾಗಲಿದೆ. ಈ ನಡುವೆ ಯುವರತ್ನ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಸಾಗುತ್ತಿದೆ. ಯುವರತ್ನ ಕಾರ್ಯಕ್ರಮದ ಹಿನ್ನೆಲೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ತಂಡ ಇಂದು ಸಭೆ ನಡೆಸಿ ಕೆಲವು ವಿಚಾರಗಳನ್ನು ನಿರ್ಧರಿಸಿದೆ.
ಪ್ರಿ-ರಿಲೀಸ್ ಕಾರ್ಯಕ್ರಮ ಎಲ್ಲಿ ಆಯೋಜಿಸಬೇಕು, ಅದಕ್ಕೆ ಬೇಕಾದ ತಯಾರಿಗಳೇನು ಎನ್ನುವುದರ ಬಗ್ಗೆ ರೂಪುರೇಷೆಗಳು ತಯಾರಾಗುತ್ತಿದೆ. ಹೊಂಬಾಳೆ ಫಿಲಂಸ್ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಸಹ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಹಾಗು ಆಂಧ್ರದಲ್ಲಿ ಯಾವ ರೀತಿ ಪ್ರಚಾರ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ.
ಅಂದ್ಹಾಗೆ, ಫೆಬ್ರವರಿ 26 ರಂದು ಹೈದರಾಬಾದ್ನಲ್ಲಿ ರಾಬರ್ಟ್ ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಫೆಬ್ರವರಿ 28 ರಂದು ಹುಬ್ಬಳ್ಳಿಯಲ್ಲಿಯೂ ರಾಬರ್ಟ್ ಕನ್ನಡ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮ ನೆರವೇರಿತ್ತು.
ಈಗ ಯುವರತ್ನನ ಶೋಗೆ ಸ್ಯಾಂಡಲ್ವುಡ್ ಸಜ್ಜಾಗುತ್ತಿದೆ. ಪುನೀತ್ ರಾಜ್ ಕುಮಾರ್ ನಟನೆಯ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶಿಸಿದ್ದು, ಎಸ್ ತಮನ್ ಸಂಗೀತ ನೀಡಿದ್ದಾರೆ. ಧನಂಜಯ್, ವಸಿಷ್ಠ ಸಿಂಹ, ಪ್ರಿಯಾ ಆನಂದ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm