ಬ್ರೇಕಿಂಗ್ ನ್ಯೂಸ್
08-03-21 12:54 pm Source: FILMIBEAT ಸಿನಿಮಾ
'ಬಿಗ್ ಬಾಸ್ ಕನ್ನಡ 8'ರಿಂದ ಮೊದಲ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ. ಈ ಬಾರಿ ಬಿಗ್ ಬಾಸ್ ಗೆ ಮೊದಲ ಸ್ಪರ್ಧಿಯಾಗಿ ಧನುಶ್ರೀ ಮನೆಯೊಳಗೆ ಕಾಲಿಟ್ಟಿದ್ದರು. ಆದರೆ ಧನುಶ್ರೀ ಮನೆಯೊಳಗೆ ಹೋದ ವೇಗದಲ್ಲೇ ಹೊರಬಂದಿದ್ದಾರೆ.
ಟಿಕ್ ಟಾಕ್ ಸ್ಟಾರ್ ಆಗಿದ್ದ ಧನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದವರು. ಬಿಗ್ ಮನೆಯಲ್ಲೂ ಧನುಶ್ರೀ ಅವರಿಂದ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಮೊದಲ ವಾರದಲ್ಲೇ ಧನುಶ್ರೀ ಮನೆಯವರ ಮತ್ತು ಪ್ರೇಕ್ಷಕರ ಮನಗೆಲ್ಲುವಲ್ಲಿ ವಿಫಲರಾಗಿದ್ದಾರೆ.
ಈ ಬಾರಿ ಮನೆಯಿಂದ ಧನುಶ್ರೀ ಹೊರ ಬಂದಿದ್ದಾರೆ. ನಿರ್ಮಲಾ, ರಘು ಗೌಡ ಮತ್ತು ಧನುಶ್ರೀ ಈ ವಾರ ಮನೆಯಿಂದ ಹೊರಬರಲು ನಾಮಿನೇಟ್ ಆಗಿದ್ದರು. ಕೊನೆಯದಾಗಿ ಬಿಗ್ ಮನೆಯಿಂದ ಧನುಶ್ರೀ ಹೊರಬಂದಿದ್ದಾರೆ.
ಬರುವಾಗ ಬಿಗ್ ಬಾಸ್ ನೀಡಿದ ವಿಶೇಷ ಅಧಿಕಾರವನ್ನು ಬಳಿಸಿಕೊಂಡು ಧನುಶ್ರೀ ರಘು ಗೌಡ ಅವರಿಗೆ ವಿಶೇಷ ಗಿಫ್ಟ್ ನೀಡಿದ್ದಾರೆ.
ಈ ವಾರ ಬಿಗ್ ಬಾಸ್ ನಾಮಿನೇಷನ್ ನಿಂದ ರಘು ಗೌಡ ಅವರನ್ನು ಬಚಾವ್ ಮಾಡಿದ್ದಾರೆ. ಈ ಮೂಲಕ ರಘು ಗೌಡ ಈ ವಾರ ನೇಮಿನೇಷನ್ ನಿಂದ ಸೇಫ್ ಆಗಿದ್ದಾರೆ.
ಮೊದಲ ವಾರದಲ್ಲೇ ಧನುಶ್ರೀ ಕಳಪೆ ಪ್ರದರ್ಶನ ನೀಡಿ ಜೈಲು ಸೇರಿದ್ದರು. ಈ ಬಾರಿಯ ಬಿಗ್ ಬಾಸ್ ನಲ್ಲಿ ಜೈಲು ಸೇರಿದ ಮೊದಲ ಸ್ಪರ್ಧಿ ಧನುಶ್ರೀ ಆಗಿದ್ದರು. ಮೇಕಪ್ ವಿಚಾರಕ್ಕೆ ಧನುಶ್ರೀ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು.
ಮನೆಯೊಳಗೂ ಮೇಕಪ್ ವಿಚಾರವಾಗಿ ಉಳಿದ ಸ್ಪರ್ಧಿಗಳು ಕಾಲೆಳೆಯುತ್ತಿದ್ದರು. ಆದರೆ ಧನುಶ್ರೀ ಯಾವುದಕ್ಕೂ ತಲೆಕೆಡಿಸಿಕೊಂಡಿರಲಿಲ್ಲ. ಸದ್ಯ ಮನೆಯಲ್ಲಿ 16 ಸ್ಪರ್ಧಿಗಳಿದ್ದು ಮುಂದಿನ ವಾರ ಯಾರು ಮನೆಯಿಂದ ಹೊರಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm