ಬ್ರೇಕಿಂಗ್ ನ್ಯೂಸ್
10-03-21 10:54 am Source: FILMIBEAT ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸ್ಯಾಂಡಲ್ ವುಡ್ ನಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಬಣ್ಣದ ಲೋಕದಲ್ಲಿ 25 ವರ್ಷ ಕಳೆದ ಸಂಭ್ರಮವನ್ನು ಕಿಚ್ಚ ಸುದೀಪ್ ಇತ್ತೀಚಿಗಷ್ಟೆ ದುಬೈನಲ್ಲಿ ಆಚರಿಸಿಕೊಂಡಿದ್ದರು. ಬುರ್ಜ್ ಖಲೀಫಾ ಮೇಲೆ ತನ್ನ 25 ವರ್ಷದ ಪಯಣದ ಝಲಕ್ ನೋಡಿ ಕಣ್ತುಂಬಿಕೊಂಡಿದ್ದರು. ಇದೀಗ ಕೋಟಿಗೊಬ್ಬ-3 ಸಿನಿಮಾತಂಡ ಕಿಚ್ಚನ ಬೆಳ್ಳಿಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಮುಂದಾಗಿದೆ.
ಕೋಟಿಗೊಬ್ಬ-3 ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಈ ಬಗ್ಗೆ ದೊಡ್ಡದಾಗಿ ಪ್ಲಾನ್ ಮಾಡಿದ್ದಾರೆ. ಚಿತ್ರದ ಘಟಾನುಘಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಅಭಿನಯ ಚಿಕ್ರವರ್ತಿ ಸುದೀಪ್ ಅವರ 25 ವರ್ಷದ ಪಯಣವನ್ನು ಸ್ಮರಿಸುವ ಕಾರ್ಯಕ್ರಮದಲ್ಲಿ ಯಾರೆಲ್ಲ ಇರಲಿದ್ದಾರೆ? ಈ ಕಾರ್ಯಕ್ರಮ ಎಲ್ಲಿ ನಡೆಯಲಿದೆ? ಇಲ್ಲಿದೆ ಮಾಹಿತಿ...
ಮಾರ್ಚ್ 15ಕ್ಕೆ ಕಾರ್ಯಕ್ರಮ
ನಿರ್ಮಾಪಕ ಸೂರಪ್ಪ ಬಾಬು ಮತ್ತು ಸಿನಿಮಾತಂಡ ಸೇರಿ ಕಿಚ್ಚನ 25 ವರ್ಷದ ಪಯಣವನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ, ಇದೆ ತಿಂಗಳು ಮಾರ್ಚ್ 15ರಂದು ಈ ಕಾರ್ಯಕ್ರಮ ನಡೆಯುತ್ತಿದೆ. ಸಂಜೆ 6.30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಚಿತ್ರರಂಗದ ಮತ್ತು ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

ಸಿಎಂ ಯಡಿಯೂರಪ್ಪ ಅವರಿಗೆ ಆಹ್ವಾನ
ಸುದೀಪ್ ಬೆಳ್ಳಿ ಮಹೋತ್ಸವದಲ್ಲಿ ಚಿತ್ರರಂಗದ ಗಣ್ಯರ ಜೊತೆಗೆ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಈಗಾಗಲೇ ನಿರ್ಮಾಪಕ ಸೂರಪ್ಪ ಬಾಬು ಸಿಎಂ ಯಡಿಯೂರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗುತ್ತಿದೆ. ವೇದಿಕೆಯಲ್ಲಿ ಸಿಎಂ ಯಡಿಯೂರಪ್ಪ, ಕಿಚ್ಚ ಸುದೀಪ್ ಅವರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ ಎನ್ನಲಾಗುತ್ತಿದೆ.
ಶಿವಣ್ಣ, ರವಿಚಂದ್ರನ್ ಭಾಗಿ
ಸಿನಿಮಾರಂಗದ ಅನೇಕ ಗಣ್ಯರು ಸಹ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ಸಾಕಷ್ಟು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಶಾಸಕ ಮತ್ತು ನಿರ್ಮಾಪಕ ಮುನಿರತ್ನ, ರಾಕ್ ಲೈನ್ ವೆಂಕಟೇಶ್ ಕೂಡ ಹಾಜರಿರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಕೋಟಿಗೊಬ್ಬ-3 ಹಾಡುಗಳಿಗೆ ನೃತ್ಯ ಕಾರ್ಯಕ್ರಮ
ವೇದಿಕೆ ಮೇಲೆ ವಿಶೇಷ ಕಾರ್ಯಕ್ರಗಳು ಸಹ ಜರಿಗಲಿದ್ದು, ಕೋಟಿಗೊಬ್ಬ-3 ಸಿನಿಮಾದ ಹಾಡುಗಳಿಗೆ ವಿವಿಧ ನೃತ್ಯ ತಂಡಗಳಿಂದ ನೃತ್ಯ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಕಿಚ್ಚ ಸುದೀಪ್ ಅವರ 25 ವರ್ಷದ ಜರ್ನಿಯ ವಿಶೇಷ ವಿಡಿಯೋ ಪ್ರದರ್ಶನ ಮಾಡಲು ಸಿನಿಮಾತಂಡ ನಿರ್ಧರಿಸಿದೆ.
ಕೋಟಿಗೊಬ್ಬ-3 ಸಿನಿಮಾ ಬಗ್ಗೆ
ಶಿವ ಕಾರ್ತಿಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಕೋಟಿಗೊಬ್ಬ-3 ಸಿನಿಮಾದ ಮೇಕಿಂಗ್ ವಿಡಿಯೋ ಇತ್ತೀಚಿಗಷ್ಟೆ ರಿಲೀಸ್ ಆಗಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದಲ್ಲಿ ಕಿಚ್ಚನಿಗೆ ಜೋಡಿಯಾಗಿ ಮಲಯಾಳಂ ಸುಂದರಿ ಮಡೋನ್ನಾ ಸೆಬಾಸ್ಟಿನ್ ಕಾಣಿಸಿಕೊಂಡಿದ್ದಾರೆ. ಇನ್ನು ಉಳಿದಂತೆ ಶ್ರದ್ಧಾ ದಾಸ್, ರವಿ ಶಂಕರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಸಾಕಷ್ಟು ದೊಡ್ಡ ತಾರಬಳಗವೇ ಇದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm