ಬ್ರೇಕಿಂಗ್ ನ್ಯೂಸ್
12-03-21 11:39 am Source: FILMIBEAT ಸಿನಿಮಾ
ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದ ಶೀರ್ಷಿಕೆ ಮತ್ತು ಮೊದಲ ನೋಟ ಬಿಡುಗಡೆಯಾಗಿದೆ. ಬಹುನಿರೀಕ್ಷೆಯ ಸಿನಿಮಾಗೆ 'ಹರಿ ಹರ ವೀರ ಮಲ್ಲು' ಎಂದು ಹೆಸರಿಡಲಾಗಿದೆ. ಶಿವರಾತ್ರಿ ಹಬ್ಬದ ವಿಶೇಷವಾಗಿ ಸಿನಿಮಾತಂಡ ಚಿತ್ರದ ಶೀರ್ಷಿಕೆ ಬಿಡುಗೆ ಮತ್ತು ಮೊದಲ ನೋಟ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದ್ದಾರೆ.
ನಿರ್ದೇಶಕ ಕ್ರಿಶ್ ಮತ್ತು ಪವನ್ ಕಲ್ಯಾಣ್ ಪ್ಯಾನ್ ಇಂಡಿಯಾ ಸಿನಿಮಾ ಕಳೆದ ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿತ್ತು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಇದೀಗ ಹರಿ ಹರ ವೀರ ಮಲ್ಲು ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಪವನ್ ಕಲ್ಯಾಣ್ ಪ್ಯಾನ್
ಇಂಡಿಯಾ ಸಿನಿಮಾಗೆ ನಾಯಕಿ ಫಿಕ್ಸ್: ಯಾರದು? ಹರಿ ಹರ ಮಲ್ಲು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ತಿಂಗಳ ಮೇಲಾಗಿದೆ. ಇತ್ತೀಚಿಗಷ್ಟೆ ಪವನ್ ಕಲ್ಯಾಣ್ ಚಿತ್ರೀಕರಣ ಸೆಟ್ ನಿಂದ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. 17ನೇ ಶತಮಾನದ ವಾಸ್ತುಶಿಲ್ಪ ಹೋಲುವ ಸೆಟ್ ಗಳನ್ನು ನಿರ್ಮಿಸಲಾಗಿದ್ದು, ಚಿತ್ರೀಕರಣ ಮಾಡಲಾಗುತ್ತಿದೆ.
ಈ ಐತಿಹಾಸಿಕ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಚಿತ್ರದಲ್ಲಿ ಪವನ್ ಕಲ್ಯಾಣ್ ಗೆ ನಾಯಕಿಯಾಗಿ ನಿಧಿ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ವತಃ ನಿಧಿ ಅಗರ್ವಾಲ್ ಬಹಿರಂಗ ಪಡಿಸಿದ್ದರು. 'ನಾನು ಪವನ್ ಕಲ್ಯಾಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ನನ್ನ ಕನಸು ನನಸಾಗಿದೆ. ಇದು ನನ್ನ 9ನೇ ಸಿನಿಮಾ. ಇದನ್ನ ನಾನು ಗೋಲ್ಡನ್ ಸಿನಿಮಾವಾಗಿ ನೋಡುತ್ತೇನೆ' ಎಂದು ಹೇಳುವ ಮೂಲಕ ಪವನ್ ಕಲ್ಯಾಣ್ ಜೊತೆ ನಟಿಸುತ್ತಿರುವ ಮಾಹಿತಿ ಬಿಚ್ಚಿಟ್ಟಿದ್ದರು.
ಸದ್ಯ 40ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಜುಲೈನಲ್ಲಿ ಚಿತ್ರೀಕರಣ ಮುಗಿಸುವ ನಿರ್ಧಾರ ಮಾಡಿದ್ದಾರೆ. ಇನ್ನು ಚಿತ್ರದ ವಿ ಎಫ್ ಎಕ್ಸ್ ಕೆಲಗಳು ಜಾಸ್ತಿ ಇರುವ ಕಾರಣ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಹಾಲಿವುಡ್ ನ ಖ್ಯಾತ ಗ್ರಾಫಿಕ್ಸ್ ಡಿಸೈನರ್ಸ್ ಹರಿ ಹರ ಮಲ್ಲು ಸಿನಿಮಾಗೆ ಗ್ರಾಫಿಕ್ಸ್ ಕೆಲಸ ಮಾಡುತ್ತಿದ್ದಾರೆ.
This News Article Is A Copy Of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am