ಬ್ರೇಕಿಂಗ್ ನ್ಯೂಸ್
12-03-21 11:39 am Source: FILMIBEAT ಸಿನಿಮಾ
ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದ ಶೀರ್ಷಿಕೆ ಮತ್ತು ಮೊದಲ ನೋಟ ಬಿಡುಗಡೆಯಾಗಿದೆ. ಬಹುನಿರೀಕ್ಷೆಯ ಸಿನಿಮಾಗೆ 'ಹರಿ ಹರ ವೀರ ಮಲ್ಲು' ಎಂದು ಹೆಸರಿಡಲಾಗಿದೆ. ಶಿವರಾತ್ರಿ ಹಬ್ಬದ ವಿಶೇಷವಾಗಿ ಸಿನಿಮಾತಂಡ ಚಿತ್ರದ ಶೀರ್ಷಿಕೆ ಬಿಡುಗೆ ಮತ್ತು ಮೊದಲ ನೋಟ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದ್ದಾರೆ.
ನಿರ್ದೇಶಕ ಕ್ರಿಶ್ ಮತ್ತು ಪವನ್ ಕಲ್ಯಾಣ್ ಪ್ಯಾನ್ ಇಂಡಿಯಾ ಸಿನಿಮಾ ಕಳೆದ ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿತ್ತು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಇದೀಗ ಹರಿ ಹರ ವೀರ ಮಲ್ಲು ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಪವನ್ ಕಲ್ಯಾಣ್ ಪ್ಯಾನ್
ಇಂಡಿಯಾ ಸಿನಿಮಾಗೆ ನಾಯಕಿ ಫಿಕ್ಸ್: ಯಾರದು? ಹರಿ ಹರ ಮಲ್ಲು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ತಿಂಗಳ ಮೇಲಾಗಿದೆ. ಇತ್ತೀಚಿಗಷ್ಟೆ ಪವನ್ ಕಲ್ಯಾಣ್ ಚಿತ್ರೀಕರಣ ಸೆಟ್ ನಿಂದ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. 17ನೇ ಶತಮಾನದ ವಾಸ್ತುಶಿಲ್ಪ ಹೋಲುವ ಸೆಟ್ ಗಳನ್ನು ನಿರ್ಮಿಸಲಾಗಿದ್ದು, ಚಿತ್ರೀಕರಣ ಮಾಡಲಾಗುತ್ತಿದೆ.
ಈ ಐತಿಹಾಸಿಕ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಚಿತ್ರದಲ್ಲಿ ಪವನ್ ಕಲ್ಯಾಣ್ ಗೆ ನಾಯಕಿಯಾಗಿ ನಿಧಿ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ವತಃ ನಿಧಿ ಅಗರ್ವಾಲ್ ಬಹಿರಂಗ ಪಡಿಸಿದ್ದರು. 'ನಾನು ಪವನ್ ಕಲ್ಯಾಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ನನ್ನ ಕನಸು ನನಸಾಗಿದೆ. ಇದು ನನ್ನ 9ನೇ ಸಿನಿಮಾ. ಇದನ್ನ ನಾನು ಗೋಲ್ಡನ್ ಸಿನಿಮಾವಾಗಿ ನೋಡುತ್ತೇನೆ' ಎಂದು ಹೇಳುವ ಮೂಲಕ ಪವನ್ ಕಲ್ಯಾಣ್ ಜೊತೆ ನಟಿಸುತ್ತಿರುವ ಮಾಹಿತಿ ಬಿಚ್ಚಿಟ್ಟಿದ್ದರು.
ಸದ್ಯ 40ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಜುಲೈನಲ್ಲಿ ಚಿತ್ರೀಕರಣ ಮುಗಿಸುವ ನಿರ್ಧಾರ ಮಾಡಿದ್ದಾರೆ. ಇನ್ನು ಚಿತ್ರದ ವಿ ಎಫ್ ಎಕ್ಸ್ ಕೆಲಗಳು ಜಾಸ್ತಿ ಇರುವ ಕಾರಣ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಹಾಲಿವುಡ್ ನ ಖ್ಯಾತ ಗ್ರಾಫಿಕ್ಸ್ ಡಿಸೈನರ್ಸ್ ಹರಿ ಹರ ಮಲ್ಲು ಸಿನಿಮಾಗೆ ಗ್ರಾಫಿಕ್ಸ್ ಕೆಲಸ ಮಾಡುತ್ತಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm