ಬ್ರೇಕಿಂಗ್ ನ್ಯೂಸ್
14-03-21 02:14 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದಾಖಲೆಯ ಗಳಿಕೆ ಮಾಡಿದೆ. ಕರ್ನಾಟಕ ಮತ್ತು ತೆಲುಗು ರಾಜ್ಯಗಳಲ್ಲಿ ಅದ್ದೂರಿಯಾಗಿ ತೆರೆಕಂಡಿದ್ದ ಸಿನಿಮಾ ಮೊದಲ ದಿನ ಒಟ್ಟು 20 ಕೋಟಿಗೂ ಅಧಿಕ ಹಣ ಗಳಿಕೆ ಮಾಡಿತ್ತು. ರಾಬರ್ಟ್ ವಿಜಯಯಾತ್ರೆ ಮುಂದುವರೆದಿದ್ದು, ಎರಡನೇ ದಿನ ಸಹ ದಾಖಲೆಯ ಹಣ ಬಾಚಿಕೊಂಡಿದೆ.
ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿರುವ ರಾಬರ್ಟ್ 3ನೇ ದಿನದ ಗಳಿಕೆ ಸಹ ಅಚ್ಚರಿ ಮೂಡಿಸಿದೆ. ರಾಬರ್ಟ್ ಪೈರಸಿ: 'ಬಿಗ್ ಬ್ರದರ್ಸ್' ವಿರುದ್ಧ ಉಮಾಪತಿ ಶ್ರೀನಿವಾಸ್ ಗುಡುಗು ರಾಬರ್ಟ್ 3ನೇ ದಿನವೂ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಮೂರನೇ ದಿನ ರಾಬರ್ಟ್ 14.10 ಕೋಟಿ ರೂ. ಗಳಿಕೆ ಮಾಡುವ ಮೂಲಕ ದಾಖಲೆ ಮಾಡಿದೆ.
ಕನ್ನಡ ಸಿನಿಮಾವೊಂದು ಅದರಲ್ಲೂ ಕೊರೊನಾ ಬಳಿಕ ಇಷ್ಟು ದೊಡ್ಡ ಮಟ್ಟದ ಕಲೆಕ್ಷನ್ ನೋಡಿ ಸ್ಯಾಂಡಲ್ ವುಡ್ ಬೆರಗಾಗಿದೆ. ಮೂರು ದಿನಗಳಲ್ಲಿ ರಾಬರ್ಟ್ ಒಟ್ಟು ಗಳಿಸಿದ್ದೆಷ್ಟು, ಜಿಲ್ಲಾವಾರು ಕಲೆಕ್ಷನ್ ಎಷ್ಟು? ಎನ್ನುವ ವಿವರ ಇಲ್ಲಿದೆ.
3ನೇ ದಿನ 14.10 ಕೋಟಿ ರೂ. ಗಳಿಕೆ
ರಾಬರ್ಟ್ ಸಿನಿಮಾ 3ನೇ ದಿನವೂ ಭರ್ಜರಿ ಕಮಾಯಿ ಮಾಡಿದೆ. ಈಗಾಗಲೇ ಕೋಟಿ ಕೋಟಿ ಜೇಬಿಗಿಳಿಸಿರುವ ನಿರ್ಮಾಪಕರಿಗೆ 3ನೇ ದಿನದ ಗಳಿಕೆ ಸಹ ಭರ್ಜರಿಯಾಗಿ ಸಿಕ್ಕಿದೆ. ಕರ್ನಾಟಕದಲ್ಲಿ ರಾಬರ್ಟ್ 14.10 ಕೋಟಿ ರೂ. ಗಳಿಕೆ ಮಾಡಿದೆ.
ಜಿಲ್ಲಾವಾರು ಕಲೆಕ್ಷನ್
ಬೆಂಗಳೂರು, ಕೋಲಾರ ಮತ್ತು ತುಮಕೂರು ಹಾಗೂ ಸೌತ್ ಕೆನರಾ ಭಾಗರದಲ್ಲಿ ಒಟ್ಟು 6 ಕೋಟಿ ರೂ. ಕಲೆಕ್ಷನ್ ಆಗಿದೆ. ಇನ್ನು ಮೈಸೂರು, ಮಂಡ್ಯ, ಹಾಸನ್ ಭಾಗದಲ್ಲಿ 2.5 ಕೋಟಿ ರೂ. ಗಳಿಸಿದೆ. ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ 1.10 ಕೋಟಿ ರೂ., ಶಿವಮೊಗ್ಗದಲ್ಲಿ 1ಲಕ್ಷ, ಹೈದರಾಬಾದ್ ಕರ್ನಾಟಕ 2 ಕೋಟಿ ಮತ್ತು ಬಾಂಬೆ ಕರ್ನಾಟಕ ಭಾಗದಲ್ಲಿ 2 ಕೋಟಿ ರೂ. ಕಲೆಕ್ಷನ್ ಆಗಿದೆ.
ರಾಬರ್ಟ್ ಇದುವರೆಗಿನ ಗಳಿಕೆ ಎಷ್ಟು?
ರಾಬರ್ಟ್ ಸಿನಿಮಾ ರಿಲೀಸ್ ಆಗಿ 3ದಿನಗಳಾಗಿದ್ದು, ಕರ್ನಾಕಟದಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಇದುವರೆಗೂ ರಾಬರ್ಟ್ 44.12 ಕೋಟಿ ರೂ. ಗಳಿಕೆ ಮಾಡಿದ್ದು, ಕನ್ನಡದಲ್ಲಿ ಅತಿ ವೇಗದಲ್ಲಿ ಇಷ್ಟು ಮೊತ್ತದ ಕಲೆಕ್ಷನ್ ಮಾಡಿರುವ ಮೊದಲ ಸಿನಿಮಾ ಇದಾಗಿದೆ. ವೀಕೆಂಡ್ ಬಂದಿರುವುದರಿಂದ ಇವತ್ತಿನ ಕಲೆಕ್ಷನ್ ಕೂಡ ಕುತೂಹಲ ಮೂಡಿಸಿದ್ದು, ನಾಲ್ಕು ದಿನಗಳಲ್ಲೇ 50 ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ನಿರ್ಮಿಸಲಿದೆ.

ಆಂಧ್ರ-ತೆಲಂಗಾಣದ ಲೆಕ್ಕ
ರಾಬರ್ಟ್ ಸಿನಿಮಾ ಕರ್ನಾಟಕದ ಜೊತೆಗೆ ಆಂಧ್ರ ಮತ್ತು ತೆಲಂಗಾಣದಲ್ಲೂ ಅದ್ದೂರಿಯಾಗಿ ತೆರೆಗೆ ಬಂದಿದೆ. ದರ್ಶನ್ ಸಿನಿಮಾ ತೆಲುಗಿನಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿರುವುದು ಇದೇ ಮೊದಲು. ಆಂಧ್ರ ಮತ್ತು ತೆಲಂಗಾಣದಲ್ಲಿ ಮೊದಲ ದಿನದ ಕಲೆಕ್ಷನ್ ಉತ್ತಮವಾಗಿತ್ತು. ಆದರೆ ನಂತರದ ದಿನಗಳ ಕಲೆಕ್ಷನ್ ರಿಪೋರ್ಟ್ ಬಹಿರಂಗವಾಗಿಲ್ಲ. ತೆಲುಗಿನಲ್ಲೂ ಭರ್ಜರಿ ಕಲೆಕ್ಷನ್ ಆಗಿರುವ ಸಾಧ್ಯತೆ ಇದೆ.
This News Article Is A Copy Of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm