ಬ್ರೇಕಿಂಗ್ ನ್ಯೂಸ್
18-03-21 01:03 pm Source: FILMIBEAT ಸಿನಿಮಾ
ಸಣ್ಣ ಪಾತ್ರ ಮಾಡಿದವರಿಗೂ ದೊಡ್ಡ ಹೆಸರು ತಂದುಕೊಟ್ಟ ಸಿನಿಮಾ 'ಕೆಜಿಎಫ್'. ನಟಿಸಿದವರಿಗೆ ಮಾತ್ರವಲ್ಲ ತಂತ್ರಜ್ಞರಿಗೆ, ತೆರೆ ಹಿಂದೆ ಕೆಲಸ ಮಾಡಿದವರಿಗೂ ದೊಡ್ಡ ಹೆಸರನ್ನು ಗಳಿಸಿಕೊಟ್ಟಿದೆ ಕೆಜಿಎಫ್. ಕೆಜಿಎಫ್ ಸಿನಿಮಾದ ಹಿಂದಿ ಡಬ್ನಲ್ಲಿ 'ಗಲಿ-ಗಲಿ' ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆ ನಂತರ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾದರು.
ಇದೀಗ ಈ ನಟಿ ಮದುವೆ ಆಗುತ್ತಿದ್ದಾರೆ. 'ನಾಗಿನ್' ಧಾರಾವಾಹಿಯಿಂದಲೂ ಸಖತ್ ಖ್ಯಾತಿ ಗಳಿಸಿರುವ ಈ ನಟಿ ಸೂರಜ್ ನಂಬಿಯಾರ್ ಎಂಬುವರೊಂದಿಗೆ ಕೆಲವ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಈ ಇಬ್ಬರೂ ವಿವಾಹವಾಗಲಿದ್ದಾರೆ. ಮೌನಿ ರಾಯ್ ಪೋಷಕರು ಹಾಗೂ ಸೂರಜ್ ನಂಬೂದಿರಿ ಪೋಷಕರು ನಟಿ ಮಂದಿರಾ ಬೇಡಿ ಅವರ ನಿವಾಸದಲ್ಲಿ ಪರಸ್ಪರ ಒಟ್ಟಾಗಿ ಚರ್ಚೆ ನಡೆಸಿದ್ದಾರೆ.
ಈ ಭೇಟಿಗೆ ಸಂಬಂಧಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವರ್ಷಾರಂಭದಲ್ಲಿ ಮೌನಿ ರಾಯ್ ಅವರು ಸೂರಜ್ ನಂಬಿಯಾರ್ ಅವರ ಕುಟುಂಬದೊಂದಿಗೆ ದುಬೈ ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದರು. ಆ ವಿಡಿಯೋ ಸಹ ವೈರಲ್ ಆಗಿತ್ತು. ಆಗಲೇ ಮೌನಿ ಹಾಗೂ ಸೂರಜ್ ವಿವಾಹವಾಗುತ್ತಾರೆ ಎನ್ನಲಾಗಿತ್ತು.
ಇದೀಗ ಮಂದಿರಾ ಬೇಡಿ ಮನೆಯಲ್ಲಿ ಪರಸ್ಪರ ಭೇಟಿಯಾಗಿದ್ದ ಈ ಯುವ ಜೋಡಿಯ ಪೋಷಕರು ವಿವಾಹ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಟಿ ಮೌನಿ ರಾಯ್ ಹಲವಾರು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ನಲ್ಲಿಯೂ ಅತಿಥಿಯಾಗಿ ಭಾಗವಹಿಸಿದ್ದಾರೆ.
ನಾಗಿನ್ ಗೂ ಮೊದಲು 'ದೇವೋಂಕಿ ದೇವ್ ಮಹಾದೇವ್' ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅಮಿತಾಬ್, ರಣಬೀರ್ ಕಪೂರ್, ಆಲಿಯಾ ನಟನೆಯ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮೌನಿ ರಾಯ್.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm