ಬ್ರೇಕಿಂಗ್ ನ್ಯೂಸ್
20-03-21 03:24 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿಯರಲ್ಲಿ ಒಬ್ಬರಾಗಿರುವ ಅಲಿಯಾ ಭಟ್ ಸದ್ಯ ಹಿಂದಿ ಜೊತೆಗೆ ತೆಲುಗು ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಅಲಿಯಾ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬಣ್ಣ ಹಚ್ಚುವ ಮೂಲಕ ಮೊದಲ ಬಾರಿಗೆ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅಲಿಯಾ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಮೊದಲ ಭಾಗದ ಚಿತ್ರೀಕರಣ ಮುಗಿಸಿದ್ದಾರೆ. ಅಂದಹಾಗೆ ಬಾಲಿವುಡ್ ಸುಂದರಿ ರಾಜಮೌಳಿ ಸಿನಿಮಾದಲ್ಲಿ ಅಲಿಯಾ ಸೀತಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
'RRR' ಸಿನಿಮಾದ 'ಸೀತಾ' ಅಲಿಯಾ ಭಟ್ ಮೊದಲ ನೋಟ ಬಿಡುಗಡೆ ಇತ್ತೀಚಿಗಷ್ಟೆ ಅಲಿಯಾ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಸೀತಾ ಪಾತ್ರಕ್ಕೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೀತಾ ಪಾತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಕಾರಣ ಪಾತ್ರದ ಗಾತ್ರವನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಈ ಮೊದಲು ಸೀತಾ ಪಾತ್ರದ ಅವಧಿ ತುಂಬಾ ಕಡಿಮೆ ಇತ್ತು. ಆದರೀಗ ಸೀತಾ ಪಾತ್ರವನ್ನು ಹೆಚ್ಚಿಸಲು ರಾಜಮೌಳಿ ಸಜ್ಜಾಗಿದ್ದಾರಂತೆ.
ಇದೀಗ ಅಲಿಯಾ ಮತ್ತೆ ಎರಡನೇ ಭಾಗದ ಚಿತ್ರೀಕರಣಕ್ಕೆ ಹೈದರಾಬಾದ್ ಗೆ ಬರುತ್ತಿದ್ದಾರೆ. ಈ ಬಾರಿಯ ಚಿತ್ರೀಕರಣದಲ್ಲಿ ಅಲಿಯಾ ಪಾತ್ರವನ್ನು ಹೆಚ್ಚಾಗಿ ಚಿತ್ರೀಕರಣ ಮಾಡಲಾಗುತ್ತಿದೆಯಂತೆ. ಅಲಿಯಾ ಸದ್ಯದಲ್ಲೇ ಬಹುನಿರೀಕ್ಷೆಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣ ಮುಗಿಸಲಿದ್ದಾರೆ. ಚಿತ್ರೀಕರಣ ಮುಗಿಯುತ್ತಿದ್ದಂತೆ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಚಿತ್ರದಲ್ಲಿ ಅಲಿಯಾ, ರಾಮ್ ಚರಣ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ರಾಮ್ ಚರಣ್, ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೂ ಎನ್ ಟಿ ಆರ್, ಕೊಮರಾಮ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಪಾತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊನೆಯ ಹಂತದಲ್ಲಿರುವ ಆರ್ ಆರ್ ಆರ್ ಸಿನಿಮಾ ಸದ್ಯದಲ್ಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಲಿದೆ. ಬಹುನಿರೀಕ್ಷೆಯ ಸಿನಿಮಾ ಅಕ್ಟೋಬರ್ 13ಕ್ಕೆ ತೆರೆಗೆಬರುತ್ತಿದೆ.
This News Article Is A Copy Of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm