ಬ್ರೇಕಿಂಗ್ ನ್ಯೂಸ್
22-03-21 11:57 am Source: FILMIBEAT ಸಿನಿಮಾ
ಕೊರೊನಾ ಲಾಕ್ಡೌನ್ ನಂತರ ನಟ ಸೋನು ಸೂದ್ ಎಂಬ 'ಖಳನಟ'ನ ಮಾನವೀಯ ಮುಖ ದೇಶಕ್ಕೆ ಪರಿಚಯವಾಯ್ತು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು, ಬಡವರ ಪಾಲಿಗೆ ದೇವರಂತೆ ಒದಗಿಬಂದ ಸೋನು ಸೂದ್, ಲಾಕ್ಡೌನ್ನಿಂದಾಗಿ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಮಂದಿಯನ್ನು ತಮ್ಮದೇ ಖರ್ಚಿನ ಮೂಲಕ ಅವರವರ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಕೊರೊನಾ ಸಮಯದಲ್ಲಿ ಸೋನು ಸೂದ್ ಮಾಡಿದ ಕಾರ್ಯ ದೇಶವ್ಯಾಪಿ ಪ್ರಶಂಸೆಗೆ ಪ್ರಾಪ್ತಿಯಾಯಿತು. ಖಳನಟನ ಪಾತ್ರಗಳಲ್ಲಿ ನಟಿಸುತ್ತಿದ್ದ ಸೋನು ಸೂದ್ ನಿಜಜೀವನದಲ್ಲಿ 'ಹೀರೋ' ಎಂಬುದು ಮನದಟ್ಟಾಯಿತು.
ಇದೀಗ ಜನಪ್ರಿಯ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸೋನು ಸೂದ್ಗೆ ಗೌರವ ಸೂಚಿಸಲೆಂದು, ತನ್ನ ವಿಮಾನದ ಮೇಲೆ ದೊಡ್ಡದಾಗಿ ಸೋನು ಸೂದ್ರ ಚಿತ್ರವನ್ನು ಪ್ರಕಟಿಸಿದೆ. ಜೊತೆಗೆ 'ಸಂರಕ್ಷಕ ಸೋನು ಸೂದ್ಗೆ ಸೆಲ್ಯೂಟ್' ಎಂದು ದೊಡ್ಡ ಅಕ್ಷರಗಳಲ್ಲಿ ಬರೆದಿದ್ದಾರೆ. ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಸೋನು ಸೂದ್,
'ಪಂಜಾಬ್ನ ಮೋಗಾ ದಿಂದ ಮುಂಬೈಗೆ ರಿಸರ್ವ್ ಇಲ್ಲದ ಟಿಕೆಟ್ನಲ್ಲಿ ಪ್ರಯಾಣಿಸುತ್ತಿದ್ದಿದ್ದು ಇನ್ನೂ ನೆನಪಿದೆ. ಈ ಪ್ರೀತಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ. ನನ್ನ ಪೋಷಕರನ್ನು ನಾನು ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ ಸೋನು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸೋನು ಸೂದ್ ಅವರ ರೈಲ್ವೆ ಪಾಸ್ನ ಚಿತ್ರವೊಂದು ವೈರಲ್ ಆಗಿತ್ತು. ರೈಲಿನಲ್ಲಿ ಓಡಾಡಲು ಕಷ್ಟಪಡುತ್ತಿದ್ದ ಸೋನು ಸೂದ್ ಇಂದು ಸಾವಿರಾರು ಜನರನ್ನು ವಿಮಾನಗಳ ಮೂಲಕ ಮನೆಗಳಿಗೆ ಕಳಿಸುತ್ತಿದ್ದಾರೆ ಎಂಬ ವಾಕ್ಯಗಳೊಂದಿಗೆ ಆ ಚಿತ್ರ ಸಖತ್ ವೈರಲ್ ಆಗಿತ್ತು. ಮುಂಬೈನ ಲೋಕಲ್ ರೈಲಿನಲ್ಲಿ ಪಾಸ್ ಪಡೆದು ಓಡಾಡುತ್ತಿದ್ದ ಸೋನು ಸೂದ್ ಚಿತ್ರ ಇಂದು ವಿಮಾನದ ಮೇಲೆ ಮದ್ರಿತವಾಗಿದೆ.
This News Article Is A Copy Of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm