ಬ್ರೇಕಿಂಗ್ ನ್ಯೂಸ್
22-03-21 11:57 am Source: FILMIBEAT ಸಿನಿಮಾ
ಕೊರೊನಾ ಲಾಕ್ಡೌನ್ ನಂತರ ನಟ ಸೋನು ಸೂದ್ ಎಂಬ 'ಖಳನಟ'ನ ಮಾನವೀಯ ಮುಖ ದೇಶಕ್ಕೆ ಪರಿಚಯವಾಯ್ತು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು, ಬಡವರ ಪಾಲಿಗೆ ದೇವರಂತೆ ಒದಗಿಬಂದ ಸೋನು ಸೂದ್, ಲಾಕ್ಡೌನ್ನಿಂದಾಗಿ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಮಂದಿಯನ್ನು ತಮ್ಮದೇ ಖರ್ಚಿನ ಮೂಲಕ ಅವರವರ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಕೊರೊನಾ ಸಮಯದಲ್ಲಿ ಸೋನು ಸೂದ್ ಮಾಡಿದ ಕಾರ್ಯ ದೇಶವ್ಯಾಪಿ ಪ್ರಶಂಸೆಗೆ ಪ್ರಾಪ್ತಿಯಾಯಿತು. ಖಳನಟನ ಪಾತ್ರಗಳಲ್ಲಿ ನಟಿಸುತ್ತಿದ್ದ ಸೋನು ಸೂದ್ ನಿಜಜೀವನದಲ್ಲಿ 'ಹೀರೋ' ಎಂಬುದು ಮನದಟ್ಟಾಯಿತು.
ಇದೀಗ ಜನಪ್ರಿಯ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸೋನು ಸೂದ್ಗೆ ಗೌರವ ಸೂಚಿಸಲೆಂದು, ತನ್ನ ವಿಮಾನದ ಮೇಲೆ ದೊಡ್ಡದಾಗಿ ಸೋನು ಸೂದ್ರ ಚಿತ್ರವನ್ನು ಪ್ರಕಟಿಸಿದೆ. ಜೊತೆಗೆ 'ಸಂರಕ್ಷಕ ಸೋನು ಸೂದ್ಗೆ ಸೆಲ್ಯೂಟ್' ಎಂದು ದೊಡ್ಡ ಅಕ್ಷರಗಳಲ್ಲಿ ಬರೆದಿದ್ದಾರೆ. ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಸೋನು ಸೂದ್,
'ಪಂಜಾಬ್ನ ಮೋಗಾ ದಿಂದ ಮುಂಬೈಗೆ ರಿಸರ್ವ್ ಇಲ್ಲದ ಟಿಕೆಟ್ನಲ್ಲಿ ಪ್ರಯಾಣಿಸುತ್ತಿದ್ದಿದ್ದು ಇನ್ನೂ ನೆನಪಿದೆ. ಈ ಪ್ರೀತಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ. ನನ್ನ ಪೋಷಕರನ್ನು ನಾನು ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ ಸೋನು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸೋನು ಸೂದ್ ಅವರ ರೈಲ್ವೆ ಪಾಸ್ನ ಚಿತ್ರವೊಂದು ವೈರಲ್ ಆಗಿತ್ತು. ರೈಲಿನಲ್ಲಿ ಓಡಾಡಲು ಕಷ್ಟಪಡುತ್ತಿದ್ದ ಸೋನು ಸೂದ್ ಇಂದು ಸಾವಿರಾರು ಜನರನ್ನು ವಿಮಾನಗಳ ಮೂಲಕ ಮನೆಗಳಿಗೆ ಕಳಿಸುತ್ತಿದ್ದಾರೆ ಎಂಬ ವಾಕ್ಯಗಳೊಂದಿಗೆ ಆ ಚಿತ್ರ ಸಖತ್ ವೈರಲ್ ಆಗಿತ್ತು. ಮುಂಬೈನ ಲೋಕಲ್ ರೈಲಿನಲ್ಲಿ ಪಾಸ್ ಪಡೆದು ಓಡಾಡುತ್ತಿದ್ದ ಸೋನು ಸೂದ್ ಚಿತ್ರ ಇಂದು ವಿಮಾನದ ಮೇಲೆ ಮದ್ರಿತವಾಗಿದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm