ಬ್ರೇಕಿಂಗ್ ನ್ಯೂಸ್
24-03-21 11:17 am Source: FILMIBEAT ಸಿನಿಮಾ
ಇತ್ತೀಚಿಗಷ್ಟೆ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ಗುರು ರಾಯರ ಸನ್ನಿಧಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ರಾಬರ್ಟ್ ಸಕ್ಸಸ್ ಬಳಿಕ ರಾಯರ ದರ್ಶನ ಮಾಡಿ ದರ್ಶನ್ ಧನ್ಯರಾಗಿದ್ದರು. ಇದೀಗ ಚಂದನವನದ ನಟಿ ಹರಿಪ್ರಿಯಾ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.
ಹರಿಪ್ರಿಯಾ ಮಂತ್ರಾಲಯದಲ್ಲಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಘವೇಂದ್ರ ಸ್ವಾಮಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಹರಿಪ್ರಿಯಾ ಅವರಿಗೆ ಮಠದ ಸ್ವಾಮಿಜಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನ ಮಾಡಿ ಗೌರವಿಸಿದ್ದಾರೆ.
ಜರಿ ಸೀರೆ ಧರಿಸಿ ಮಂತ್ರಾಲಯದಲ್ಲಿ ಕಾಣಿಸಿಕೊಂಡಿರುವ ನಟಿ ಹರಿಪ್ರಿಯಾ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದಿಷ್ಟು ಸುಂದರ ಫೋಟೋಗಳನ್ನು ಹಂಚಿಕೊಂಡಿರುವ ಹರಿಪ್ರಿಯಾ, 'ಮಂತ್ರಾಲಯದ ಶ್ರೀ ಸುಬುಧೇಂದ್ರ ಸ್ವಾಮಿ ಅವರಿಂದ ಸನ್ಮಾನ ಸ್ವೀಕರಿಸಿದ್ದು ಅಪಾರ ಹೆಮ್ಮೆ ಇದೆ. ರಾಘವೇಂದ್ರ ಸ್ವಾಮಿಯ ಜನ್ಮ ದಿನದಂದು ಗೌರವ ಸಿಕ್ಕಿರುವುದು ಇನ್ನಷ್ಟು ವಿಶೇಷ. ಮಂತ್ರಾಲಯ ನನ್ನನ್ನು ವಿಸ್ಮಯಗೊಳಿಸುವುದನ್ನು ಎಂದಿಗೂ ಕಮ್ಮಿಯಾಗಿಲ್ಲ. ವಿಶೇಷವಾಗಿ ಅವರ ಆತಿಥ್ಯ ಮತ್ತು ಅಲ್ಲಿನ ಅದ್ಭುತ ವೈಬ್ಸ್' ಎಂದು ಬರೆದುಕೊಂಡಿದ್ದಾರೆ.

ಹರಿಪ್ರಿಯಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ನೀನಾಸಂ ಸತೀಶ್ ನಾಯಕನಾಗಿ ನಟಿಸುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಮುಗಿಸಿರುವ ನಟಿ, ಬೆಲ್ ಬಾಟಂ-2ನಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಇನ್ನು ಮೂರ್ನಾಲ್ಕು ಸಿನಿಮಾಗಳಲ್ಲಿ ಹರಿಪ್ರಿಯಾ ನಟಿಸುತ್ತಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm